ವಿದ್ಯುತ್ ಕಳವು ಪ್ರಕರಣ: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬೆಸ್ಕಾಂನಿಂದ ಎಫ್‌ಐಆರ್

Date:

Advertisements

ಮನೆಯ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದ ಹಿನ್ನೆಲೆಯಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೆಪಿ ನಗರ ನಿವಾಸಕ್ಕೆ ವಿದ್ಯುತ್ ಅಲಂಕಾರ ಮಾಡಿಸಿದ್ದರು. ಇದಕ್ಕೆ ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರು.

Advertisements

ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಟೀಕಿಸಿ, ಕಾಂಗ್ರೆಸ್ ವಿಡಿಯೋ ದಾಖಲೆಯೊಂದಿಗೆ ಟ್ವೀಟ್ ಮಾಡಿತ್ತು. ಇದರ ಬೆನ್ನಲ್ಲೇ ಎಚ್‌ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ‘ಅಚಾತುರ್ಯ ನಡೆದಿದೆ. ದಂಡ ಕಟ್ಟಲು ಸಿದ್ಧ’ ಎನ್ನುವ ಮೂಲಕ ಕಳ್ಳತನ ನಡೆದಿರುವುದನ್ನು ಒಪ್ಪಿಕೊಂಡಿದ್ದರು.

kumaraswami 1

ಇದು ರಾಜಕೀಯ ಚರ್ಚೆಗೆ ವೇದಿಕೆಯೊದಗಿಸಿದ ಬೆನ್ನಲ್ಲೇ ಬೆಸ್ಕಾಂ ಎಇಇ ನೇತೃತ್ವದ ಅಧಿಕಾರಿಗಳ ತಂಡ ಮನೆಗೆ ಆಗಮಿಸಿ, ಪರಿಶೀಲನೆ ನಡೆಸಿತ್ತು. ಮನೆಯ ಯಜಮಾನನಾಗಿರುವ ಎಚ್‌ ಡಿ ಕುಮಾರಸ್ವಾಮಿ ಅವರು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಬೆಸ್ಕಾಂ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ.

ಅಕ್ರಮವಾಗಿ ಕಂಬದಿಂದಲೇ ವಿದ್ಯುತ್ ಸಂಪರ್ಕವನ್ನು ಪಡೆದುಕೊಳ್ಳುವುದು ಕಾನೂನು ಬಾಹಿರವಾಗಿದೆ. ಈ ಹಿನ್ನೆಲೆಯಲ್ಲಿ 2003ರ ವಿದ್ಯುತ್ ಕಾಯ್ದೆಯ ಸೆಕ್ಷನ್ 135ರ ಅಡಿಯಲ್ಲಿ ಕುಮಾರಸ್ವಾಮಿಯವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಈ ಕಾಯ್ದೆಯ ಪ್ರಕಾರ ಮೂರು ದಿನಗಳಲ್ಲಿ ಬೆಸ್ಕಾಂ ಅಧಿಕಾರಿಗಳು ದಂಡ ವಿಧಿಸಲಿದ್ದಾರೆ ಎಂದು ತಿಳಿದುಬಂದಿದೆ. ಎಷ್ಟು ಮೊತ್ತದ ದಂಡ ಎಂದು ಇನ್ನೂ ವರದಿಯಾಗಿಲ್ಲ. ಅಧಿಕಾರಿಗಳು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ ಬಳಿಕವಷ್ಟೇ ತಿಳಿದುಬರಲಿದೆ.

ಸರ್ಕಾರದ ಗೃಹ ಜ್ಯೋತಿ ಗ್ಯಾರಂಟಿಯ ಬಗ್ಗೆ ‘ಕತ್ತಲೆ ಭಾಗ್ಯ’ ಎನ್ನುವ ಮೂಲಕ ಕುಮಾರಸ್ವಾಮಿ ಟೀಕಿಸಿದ್ದ ಬೆನ್ನಲ್ಲೇ, ಈ ರೀತಿಯ ಬೆಳವಣಿಗೆ ನಡೆದಿರುವುದು ಮುಜುಗರ ಸೃಷ್ಟಿಸಿತ್ತು. ಅಲ್ಲದೇ, ಇದು ಸೋಷಿಯಲ್ ಮೀಡಿಯಾಗಳಲ್ಲಿ ಕುಮಾರಸ್ವಾಮಿಯವರನ್ನು ಟ್ರೋಲ್‌ ಮಾಡುವವರಿಗೆ ಸರಕಾಗಿಯೂ ಲಭಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X