ಸರ್ವರಿಗೂ ಸಮಪಾಲು-ಸಮಬಾಳು, ಇದುವೆ ‘ಸಿದ್ ಎಕನಾಮಿಕ್ಸ್’: ಎಚ್‌ಡಿಕೆಗೆ ಸಿದ್ದರಾಮಯ್ಯ ತಿರುಗೇಟು

Date:

Advertisements

ಸದನದಲ್ಲಿ ‘ಸಿದ್ದನಾಮಿಕ್ಸ್’ ಎಂದ ಟೀಕೆ ಮಾಡಿರುವ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ಸರ್ವರನ್ನೂ ಒಳಗೊಂಡಿರುವ, ಸರ್ವರನ್ನೂ ಬೆಸೆಯುವ ಮತ್ತು ಸರ್ವರಿಗೂ ಸಮಪಾಲು – ಸಮಬಾಳು ನೀಡುವುದನ್ನೇ ಗುರಿಯಾಗಿಟ್ಟುಕೊಂಡ ಸರ್ವೋದಯ ಅಭಿವೃದ್ದಿ ಮಾದರಿಯೇ ಸಿದ್ ಎಕನಾಮಿಕ್ಸ್” ಎಂದಿದ್ದಾರೆ.

“ಬಹುಧರ್ಮ, ಬಹುಸಂಸ್ಕೃತಿ ಮತ್ತು ಬಹುಭಾಷೆಗಳನ್ನೊಳಗೊಂಡ ಬಹುತ್ವವನ್ನು ಗೌರವಿಸುವ ಅಭಿವೃದ್ಧಿ ಮಾದರಿಯೇ ಸಿದ್ ಎಕನಾಮಿಕ್ಸ್” ಎಂದು ಸಿಎಂ ಹೇಳಿದ್ದಾರೆ

Advertisements

“ಕಾಯಕದ ಮಹತ್ವವನ್ನು ವಿಶ್ವಕ್ಕೆ ಸಾರಿದ ಬಸವಣ್ಣ, ಗ್ರಾಮಸ್ವರಾಜ್ಯದ ಹರಿಕಾರ ಮಹಾತ್ಮ ಗಾಂಧೀಜಿ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯ ಎಚ್ಚರಿಕೆಯ ಸಂದೇಶ ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳ ಮೂಸೆಯಿಂದ ರೂಪುಗೊಂಡ ಅಭಿವೃದ್ಧಿ ಮಾದರಿಯೇ ಸಿದ್ ಎಕನಾಮಿಕ್ಸ್” ಎಂದು ಕುಮಾರಸ್ವಾಮಿಗೆ ಕುಟುಕಿದ್ದಾರೆ.

“ರೈತರು, ಕಾರ್ಮಿಕರು, ಮಹಿಳೆಯರು, ಯುವಕರು ಮತ್ತು ಎಲ್ಲ ಜಾತಿ-ಧರ್ಮಗಳ ಬಡವರ ಜೊತೆಗಿನ ಒಡನಾಟದ ಅನುಭವದ ಮೂಲಕ ರೂಪುಗೊಂಡ ಅಭಿವೃದ್ಧಿ ಮಾದರಿಯೇ ಸಿದ್ ಎಕನಾಮಿಕ್ಸ್” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಜನರ ಬೆವರಗಳಿಕೆಯ ತೆರಿಗೆ ಹಣದ ಪೈಸೆ ಪೈಸೆ ಕೂಡಾ ಆ ಜನರ ಕಲ್ಯಾಣಕ್ಕಾಗಿಯೇ ವಿನಿಯೋಗವಾಗಬೇಕು ಎನ್ನುವ ಎಚ್ಚರ ಮತ್ತು ನುಡಿದಂತೆ ನಡೆಯುವ ಬದ್ಧತೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಒಳಗೊಂಡ ಅಭಿವೃದ್ಧಿ ಮಾದರಿಯೇ ಸಿದ್ ಎಕನಾಮಿಕ್ಸ್” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

Download Eedina App Android / iOS

X