ಈಶ್ವರಪ್ಪನವರೇ, ನಾನೇ ನಿಮ್ಮ ಮುಂದೆ ಬರುವೆ, ನನ್ನ ಕೊಂದು ಬಿಡಿ: ಡಿ ಕೆ ಸುರೇಶ್‌ ಆಹ್ವಾನ

Date:

Advertisements

“ಈಶ್ವರಪ್ಪನವರೇ, ನಾನೇ ನಿಮ್ಮ ಮುಂದೆ ಬಂದು ನಿಲ್ಲುವೆ, ನನ್ನ ಕೊಂದು ಬಿಡಿ. ನಿಮ್ಮ ಆಸೆ ಈಡೇರಿಸಿಕೊಳ್ಳಿ” ಎಂದು ಸಂಸದ ಡಿ ಕೆ ಸುರೇಶ್‌ ಆಹ್ವಾನ ನೀಡಿದರು.

“ಡಿ ಕೆ ಸುರೇಶ್‌ ಅವರಂತೆ ದೇಶ ಒಡೆಯುವ ಹೇಳಿಕೆ ಕೊಡುವವರನ್ನು ಗುಂಡಿಟ್ಟು ಕೊಲ್ಲಬೇಕು” ಎಂದು ಹೇಳಿಕೆ ನೀಡಿದ್ದ ಕೆ ಎಸ್ ಈಶ್ವರಪ್ಪ ಅವರ ಮಾತಿಗೆ ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದರು.

“ನಾವು ಭಾರತ ಒಕ್ಕೂಟದಲ್ಲೇ ಇರುವವರು. ನಾನು ಭಾರತ ವಿರೋಧಿ ಅಲ್ಲ. ಎಲ್ಲ ವಿಷಯಗಳಲ್ಲಿ ಕರ್ನಾಟಕದ ಮೇಲೆ ಆಗುತ್ತಿರುವ ಅನ್ಯಾಯ ತಡೆಯಲಾಗದೆ ಹಾಗೇ ಮಾತನಾಡಿರುವೆ. ಅದಕ್ಕಾಗಿ ನನ್ನನ್ನು ಕೊಲ್ಲಬೇಕು ಎಂದರೆ ಏನು ಮಾಡುವುದು. ಈಶ್ವರಪ್ಪ ಮುಂದೆ ಹೋಗಿ ನಿಲ್ಲುವೆ. ಕೊಂದು ತಮ್ಮ ಆಸೆ ಈಡೇರಿಸಿಕೊಳ್ಳಲಿ” ಎಂದರು.

Advertisements

ಈಶ್ವರಪ್ಪ ವಿರುದ್ಧ ಈಗಾಗಲೇ ಶಿವಮೊಗ್ಗದ ಜಯನಗರ ಪೊಲೀಸ್‌ ಠಾಣೆಯಲ್ಲಿ ಎನ್‌ ಎಸ್‌ ಯುಐ ಕಾರ್ಯಕರ್ತರು ದೂರು ಸಲ್ಲಿಸಿದ್ದು, ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ಆಯೋಗಕ್ಕೆ ಅಧ್ಯಕ್ಷರಿಲ್ಲ; ಶೋಷಿತ ಹೆಣ್ಣುಮಕ್ಕಳ ನೋವು ಕೇಳುವವರಿಲ್ಲ

ಮತ್ತೊಂದು ದೂರು ದಾಖಲು

ದೇಶವನ್ನು ಇಬ್ಭಾಗ ಮಾಡುವ ಹೇಳಿಕೆ ನೀಡುವ ಡಿ.ಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ಅವರಂಥವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರಬೇಕೆಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ವಿರುದ್ದ ಮತ್ತೊಂದು ದೂರು ದಾಖಲಾಗಿದೆ.

ಶುಕ್ರವಾರ ದಾವಣಗೆರೆಯ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದೀಗ, ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಆರ್‌ಆರ್‌ ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ದೂರು ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X