ಎತ್ತಿನಹೊಳೆ ಎರಡನೇ ಹಂತ 2027ಕ್ಕೆ ಮುಗಿಯುವುದು ಶತಸಿದ್ಧ: ಸಿಎಂ ಸಿದ್ದರಾಮಯ್ಯ ಭರವಸೆ

Date:

Advertisements

ಎತ್ತಿನಹೊಳೆ ಎರಡನೆಯ ಹಂತ 2027ಕ್ಕೆ ಮುಗಿದು ಕುಡಿಯುವ ನೀರು ಏಳು ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆಯಿಂದ ಹೇಳಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದ ಬಳಿಕ, ಹೆಬ್ಬಹಳ್ಳಿಯ 4 ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

“ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆ” ಎಂದರು.

Advertisements

“ಕೆಲವರು ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಕೆಲವರು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ” ಎಂದು ಹೇಳಿದರು.

“ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವಿ. ಕೆರೆಗಳನ್ನು ತುಂಬಿಸಿಯೇ ತೀರುವುದೂ ಶತಸಿದ್ಧ” ಎಂದು ತಿಳಿಸಿದರು.

“ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಯೋಜನೆ ಇದಾಗಿದೆ” ಎಂದರು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X