ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು(ಡಿ.3) ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ವತಿಯಿಂದ ಶ್ರೀ ಬೀರೇಶ್ವರ ಸಮುದಾಯ ಭವನ ಮತ್ತು ಪ್ರಾರ್ಥನಾ ಮಂದಿರ ಉದ್ಘಾಟಿಸಿ ಮಾತನಾಡಿದರು.
‘ನೆಲಮಂಗಲ ಪಟ್ಟಣಕ್ಕೆ ಕುಡಿಯುವ ನೀರಿನ ಬೇಡಿಕೆ ಇದೆ. ನೆಲಮಂಗಲ ಸುತ್ತಮುತ್ತಲ ಪ್ರದೇಶಗಳ ಕೆರೆಗಳನ್ನು ತುಂಬುವ ವೃಷಭಾವತಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಈ ಯೋಜನೆಯಿಂದ ನೀರಿನ ಅಂತರ್ಜಲ ಮಟ್ಟ ಹೆಚ್ಚಲಿದೆ. ಮೆಟ್ರೋ ಸಂಪರ್ಕವನ್ನು ನೆಲಮಂಗಲದವರೆಗೂ ವಿಸ್ತರಿಸುವ ಯೋಜನೆ ಸರ್ಕಾರ ಪರಿಶೀಲಿಸಲಿದೆ. ನೆಲಮಂಗಲದ ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದರು.
ಮುಖ್ಯಮಂತ್ರಿ @siddaramaiah ಅವರು ಇಂದು ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ಬೀರೇಶ್ವರ ಸಮುದಾಯ ಭವನ ಮತ್ತು ಪ್ರಾರ್ಥನಾ ಮಂದಿರ ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ… pic.twitter.com/oweudmTnJ2
— CM of Karnataka (@CMofKarnataka) December 3, 2023
‘ಕುರುಬರು ಸಾಮಾನ್ಯವಾಗಿ ಶೈವ ಪಂಥದವರು. ಬೀರೇಶ್ವರ ಕುರುಬ ಸಮುದಾಯದ ಕುಲದೇವರು. ಇವರು ದೈವಭಕ್ತರು. ದೇವನೊಬ್ಬ ನಾಮ ಹಲವು. ನಾವು ಇತರರಿಗೆ ಒಳಿತು ಬಯಸಿದರೆ ಭಗವಂತನೂ ಒಳ್ಳೆಯದನ್ನೇ ಮಾಡುತ್ತಾನೆ. ಮನುಷ್ಯ ಮತ್ತೊಮ್ಮ ಮನುಷ್ಯನನ್ನು ದ್ವೇಷಿಸಬಾರದು’ ಎಂದು ಸಿಎಂ ಸಲಹೆ ನೀಡಿದರು.
‘ಯಾವುದೇ ಜಾತಿ ಮತ ಧರ್ಮದ ಸೇರಿದ ಮನುಷ್ಯರನ್ನು ನಾವು ಗೌರವದಿಂದ ಕಾಣುವುದೇ, ದೇವರಿಗೆ ಅರ್ಪಿಸುವ ಗೌರವ. ಕನಕದಾಸರು, ಸಮಾಜದ ತಾರತಮ್ಯ ತೊಲಗಿ, ಎಲ್ಲರೂ ಮನುಷ್ಯರಾಗಿ ಬಾಳಬೇಕು ಎಂದು ಬಯಸಿದ್ದರು. ಜಾತಿಯ ಎಲ್ಲೆಯ ಮೀರಿ ಸಮಾಜ ಬೆಳೆಯಬೇಕು. ಕನಕದಾಸರು ಒಂದು ಜಾತಿಗೆ ಸೀಮತವಾಗದೇ ವಿಶ್ವ ಮಾನವ ಎಂದು ಕರೆಸಿಕೊಂಡರು. ನಾವೆಲ್ಲರೂ ವಿಶ್ವಮಾನವರಾಗುವ ದಾರಿಯಲ್ಲಿ ನಡೆಯಬೇಕು. ಕುವೆಂಪುರವರು ಸರ್ವಜನಾಂಗದ ಶಾಂತಿಯ ತೋಟದಂತಹ ಸಮಾಜವನ್ನು ನಿರ್ಮಿಸಬೇಕು’ ಎಂದರು.
‘ಮುಖ್ಯಮಂತ್ರಿಯಾಗಿ ಎಲ್ಲ ಧರ್ಮದ ಬಡವರಿಗೆ ಆರ್ಥಿಕ , ಸಾಮಾಜಿಕ ಶಕ್ತಿಯನ್ನು ತುಂಬುವುದು ನನ್ನ ಗುರಿಯಾಗಿದೆ. ಬಡವರಿಗೆ ಅಕ್ಕಿ, ಉಚಿತ ವಿದ್ಯುತ್, ಶಕ್ತಿ ಯೋಜನೆ,ಗೃಹಲಕ್ಷ್ಮಿ ಯೋಜನೆಗಳು ಯಾವುದೇ ಜಾತಿಧರ್ಮಕ್ಕೆ ಸೀಮಿತವಾಗಿಲ್ಲ. 1.14 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ’ ಎಂದು ತಿಳಿಸಿದರು.
‘ಗ್ಯಾರಂಟಿ ಯೋಜನೆಗಳಿಂದ ಜನರ ಕೈಗೆ ಬರುವ ದುಡ್ಡು, ಅವರ ಇತರೆ ಅವಶ್ಯಕತೆಗಳನ್ನು ಪೂರೈಸಿ, ಆರ್ಥಿಕತೆ ಹೆಚ್ಚುತ್ತದೆ. ಕೇವಲ ಶ್ರೀಮಂತರಲ್ಲದೇ, ಬಡವರು ಊಟಮಾಡುವಂತಾಗಬೇಕು, ಕರ್ನಾಟಕ ಹಸಿವುಮುಕ್ತ ರಾಜ್ಯವಾಗಬೇಕು. 1.30 ಕೋಟಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆಗಳಿಂದ ಲಾಭವಾಗಿದೆ. ಸಮಾಜ ನಿಂತ ನೀರಾಗದೆ ಬದಲಾವಣೆಯಾಗಬೇಕು. ಸಮಾಜಕ್ಕೆ ಚಲನೆ ದೊರೆತಾಗ ಆರ್ಥಿಕತೆ ಚುರುಕಾಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.