ಮೋದಿ ಮುಟ್ಟಿದ್ದೆಲ್ಲ ಮಟಾಷ್ : ಕಾಂಗ್ರೆಸ್ ಲೇವಡಿ

Date:

Advertisements
  • ರಾಮದಾಸ್‌, ಈಶ್ವರಪ್ಪ ಹೆಸರು ಉಲ್ಲೇಖಿಸಿ ಟೀಕೆ
  • ಟ್ವೀಟ್ ಮಾಡಿ ಇದೇನು ಕಾಕತಾಳೀಯ ಎಂದ ಕಾಂಗ್ರೆಸ್

ಪ್ರಧಾನಿ ಮೋದಿ ಅವರಿಂದ ರಾಜ್ಯದಲ್ಲಿ ಉದ್ಘಾಟನೆಯಾಗಿದ್ದ ಅನೇಕ ಯೋಜನೆಗಳ ವೈಫಲ್ಯ ಕಂಡಿವೆ. ಅವುಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮೋದಿ ಮುಟ್ಟಿದ್ದೆಲ್ಲ ಮಟಾಷ್’ ಎಂದು ಲೇವಡಿ ಮಾಡಿದೆ.

ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ನಿಗದಿಯಾಗಿದ್ದೆ ತಡ ಪ್ರಧಾನಿ ಮೋದಿ ಸಾಲು ಸಾಲು ಯೋಜನೆಗಳನ್ನು ಉದ್ಘಾಟಿಸಿದ್ದರು. ಬೆನ್ನಲ್ಲೇ ಆ ಯೋಜನೆಗಳು ಕಳಪೆ ಎಂಬುದು ಬಯಲಾಗಿದ್ದವು.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಮೋದಿ ಉದ್ಘಾಟಿಸಿದ ಹೈವೆ ಮಳೆಯಲ್ಲಿ ಮುಳುಗಿತು. ಟೇಪ್ ಕಟ್ ಮಾಡಿದ ಮೆಟ್ರೋ ನಿಲ್ದಾಣಕ್ಕೆ ನೀರು ನುಗ್ಗಿತು. ರೋಡ್ ಶೋ ಮಾಡಿದ ರಸ್ತೆ ಕಿತ್ತುಬಂತು. ಶಿವಮೊಗ್ಗ ಏರ್ಪೋರ್ಟ್ ಬಾಗಿಲು ಮುಚ್ಚಿತು” ಎಂದು ವ್ಯಂಗ್ಯವಾಡಿದೆ.

Advertisements

ಬರೀ ಯೋಜನೆಗಳಿಗೆ ಸೀಮಿತವಾಗದ ಕಾಂಗ್ರೆಸ್ ಟೀಕೆ ರಾಜ್ಯ ನಾಯಕರನ್ನು ಉಲ್ಲೇಖಿಸಿದೆ. “ಬೆನ್ನಿಗೆ ಗುದ್ದಿದ ರಾಮದಾಸ್ ಮನೆಯಲ್ಲಿ ಕೂರುವಂತಾಯ್ತು. ಕರೆ ಮಾಡಿದ ಈಶ್ವರಪ್ಪರ ರಾಜಕೀಯ ಜೀವನ ಮುಗಿಯಿತು. ಇದೇನು ಕಾಕತಾಳೀಯ” ಎಂದು ಟ್ವೀಟ್ ಮಾಡಿದೆ.

ಪ್ರಧಾನಿ ಮೋದಿ ಉದ್ಘಾಟಿಸಿದ್ದ ಬೆಂಗಳೂರು ಮೈಸೂರು ಹೆದ್ದಾರಿ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅದರ ಕಳಪೆ ಕಾಮಗಾರಿಯಿಂದ ಹಿಡಿದು ಟೋಲ್‌ ಸಂಗ್ರಹದವರೆಗೆ ಜನಾಕ್ರೋಶ ವ್ಯಕ್ತವಾಗಿತ್ತು.

ಇನ್ನೂ ಪೂರ್ಣವಾಗದ ಕೆ ಆರ್‌ ಪುರ – ವೈಟ್‌ಫೀಲ್ಡ್‌ ಮೆಟ್ರೋಗೆ ಸಹ ಮೋದಿ ತರಾತುರಿಯಲ್ಲಿ ಹಸಿರು ಬಾವುಟ ತೋರಿಸಿದ್ದರು. ಅದಾದ ವಾರದ ಬಳಿಕವಷ್ಟೇ ಸಣ್ಣ ಮಳೆಗೆ ನೀರು ಮೆಟ್ರೊ ನಿಲ್ದಾಣಕ್ಕೆ ನುಗ್ಗಿದ್ದವು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ನಾಮಪತ್ರಗಳ ತಿರಸ್ಕರಿಸದಂತೆ ಸಿಎಂ ಕಚೇರಿಯಿಂದ ಒತ್ತಡ; ಡಿಕೆಶಿ ಆರೋಪ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜನ್ಮದಿನದಂದು ಪ್ರಧಾನಿ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ್ದರು. ಆದರೆ, ಈವರೆಗೆ ಒಂದೇ ಒಂದು ವಿಮಾನವೂ ಅಲ್ಲಿ ಹಾರಾಟ ನಡೆಸಿಲ್ಲ.

ಈ ವಿಷಯಗಳನ್ನೇ ಕಾಂಗ್ರೆಸ್ ಉಲ್ಲೇಖಿಸಿ, ಮೋದಿ ಅವರ ಕಾಲೆಳೆದಿದೆ. ಕೆಲ ತಿಂಗಳ ಹಿಂದೆಯಷ್ಟೇ ರಾಜ್ಯಕ್ಕೆ ಬಂದಿದ್ದ ಮೋದಿ ಮಾಜಿ ಶಾಸಕ ರಾಮದಾಸ್ ಅವರ ಬೆನ್ನಿಗೆ ಗುದ್ದಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಇದರ ಬೆನ್ನಲ್ಲೇ ರಾಮದಾಸ್‌ ಅವರಿಗೆ ಟಿಕೆಟ್ ಕೈತಪ್ಪಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X