ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

Date:

Advertisements

ಲೋಕಸಭೆ ಚುನಾವಣೆಯ ಹೊತ್ತಲ್ಲೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ವೀರಪ್ಪ ಮೊಯ್ಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್​ ಕೊನೆ ಕ್ಷಣದಲ್ಲಿ ವೀರಪ್ಪ ಮೊಯ್ಲಿ ಬದಲಿಗೆ ಯುವ ನಾಯಕ ರಕ್ಷಾ ರಾಮಯ್ಯಗೆ ಟಿಕೆಟ್ ನೀಡಿತ್ತು. ಇದರಿಂದ ನಿರಾಸೆಗೊಂಡಿರುವ ಮೊಯ್ಲಿ, ಇದೀಗ ಅಂತಿಮವಾಗಿ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು, ರಕ್ಷಾ ರಾಮಯ್ಯಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ವೀರಪ್ಪ ಮೊಯ್ಲಿ, “ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದೆ. ಆದರೆ, ಹೈಕಮಾಂಡ್ ಸ್ಪರ್ಧೆಯಿಂದ ಹಿಂದೆ ಸರಿಯಲು ಮನವಿ ಮಾಡಿತ್ತು. ಹೈಕಮಾಂಡ್​​ಗೆ ಗೌರವ ಕೊಟ್ಟು ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ. ನನ್ನ ಬೆಂಬಲಿಗರು ನಮ್ಮ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲಿಸಬೇಕು” ಎಂದು ತಿಳಿಸಿದ್ದಾರೆ.

Advertisements

ಟಿಕೆಟ್​ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ವೀರಪ್ಪ ಮೊಯ್ಲಿ, ಅಂತಿಮವಾಗಿ ಪಕ್ಷದ ಅಭ್ಯರ್ಥಿ ರಕ್ಷಾ ರಾಮಯ್ಯಗೆ ಬೆಂಬಲ ಘೋಷಿಸಿದರು.

1972ರಿಂದ ರಾಜಕೀಯದಲ್ಲಿರುವ ವೀರಪ್ಪ ಮೊಯ್ಲಿಯವರು, 1992ರಿಂದ 1994ರವರೆಗೆ ಕರ್ನಾಟಕದ 13ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ, ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರದ ಸಚಿವರಾಗಿಯೂ ಕೆಲಸ ಮಾಡಿದ್ದರು.

ಇದನ್ನು ಓದಿದ್ದೀರಾ? ಚುನಾವಣಾ ಪ್ರಚಾರದ ವೇಳೆ ಶೋಭಾ ಕರಂದ್ಲಾಜೆ ಕಾರು ಅಪಘಾತ: ಬಿಜೆಪಿ ಕಾರ್ಯಕರ್ತ ಸಾವು

ರಾಜಕಾರಣದ ಜೊತೆಗೆ ಸಾಹಿತ್ಯದಲ್ಲೂ ಗುರುತಿಸಿಕೊಂಡಿರುವ ಮೊಯ್ಲಿ, ಹಲವು ಕೃತಿಗಳನ್ನು ಕೂಡ ಬರೆದಿದ್ದಾರೆ. 2020ರಲ್ಲಿ ಶ್ರೀ ಬಾಹುಬಲಿ ಅಹಿಂಸಾದಿಗ್ವಿಜಯ ಮಹಾಕಾವ್ಯಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೂ ಕೂಡ ಭಾಜನರಾಗಿದ್ದರು. ಇವರ ಪತ್ನಿ ಮಾಲತಿ ಮೊಯ್ಲಿ ಕೂಡ ಲೇಖಕಿಯಾಗಿ ಗುರುತಿಸಿಕೊಂಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X