ಪಿಎಸ್‌ಐ ನೇಮಕಾತಿ ಹಗರಣ | ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ ಜಾಮೀನು ಅರ್ಜಿ ತಿರಸ್ಕಾರ

Date:

  • ಸತತ 5ನೇ ಬಾರಿ ಅರ್ಜಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ
  • ಪಿಎಸ್ಐ ನೇಮಕಾತಿ ಹಗರಣದ 35ನೇ ಆರೋಪಿಯಾಗಿದ್ದ ಪೌಲ್‌

ಪಿಎಸ್‌ಐ ನೇಮಕಾತಿ (ಪೊಲೀಸ್ ಸಬ್ ಇನ್‌ಸ್ಪೆಕ್ಟರ್) ಹಗರಣದಲ್ಲಿ ಪ್ರಮುಖ ಆರೋಪಿ, ಬಂಧಿತ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಪಿಎಸ್ಐ ನೇಮಕಾತಿ ಹಗರಣದ 35ನೇ ಆರೋಪಿಯಾಗಿದ್ದ ಅಮೃತ್‌ ಪೌಲ್‌ ಜಾಮೀನು ನೀಡುವಂತೆ ಸತತ ಐದು ಬಾರಿ ಅರ್ಜಿ ಸಲ್ಲಿಸಿದ್ದರು. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ ಲಕ್ಷ್ಮಿನಾರಾಯಣ ಭಟ್‌ ಅರ್ಜಿ ವಿಚಾರಣೆ ನಡೆಸಿದ್ದು, ಅರ್ಜಿಯನ್ನು ತಿಸ್ಕರಿಸಿದ್ದಾರೆ.

ಬಂಧನವಾದ ಬಳಿಕ ಮೊದಲ ಬಾರಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಈ ನ್ಯಾಯಾಲಯವು ಅಮೃತ್‌ ಪೌಲ್‌ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. 2ನೇ ಬಾರಿ ಬೆಂಗಳೂರಿನ 51ನೇ ಹೆಚ್ಚುವರಿ ನಗರ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಯಶವಂತ ಅವರು ಜಾಮೀನು ನೀಡಲು ನಿರಾಕರಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಕಿರಣ್‌ ರಿಜಿಜು ಹೇಳಿಕೆ ವಿರುದ್ಧ ಸುಪ್ರೀಂಕೋರ್ಟ್‌, ಹೈಕೋರ್ಟ್ ವಕೀಲರಿಂದ ಖಂಡನೆ

ಈ ಪ್ರಕರಣವು ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಗೊಂಡ ನಂತರ, “ನನ್ನ ಮೇಲೆ ದಾಖಲಾಗಿರುವ ಆರೋಪ ಪಟ್ಟಿಯು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವುದರಿಂದ ನನಗೆ ಡಿಫಾಲ್ಟ್‌ ಜಾಮೀನು ಮಂಜೂರು ಮಾಡಬೇಕು” ಎಂದು 2022ರ ನ. 23, ಹಾಗೂ 2023ರ ಜ.4ರಂದು ಅರ್ಜಿ ಸಲ್ಲಿಸಿದ್ದರು. ಆಗಲೂ ಕೂಡ ಜಾಮೀನು ಅರ್ಜಿ ರದ್ದುಗೊಂಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ...

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ...

ಮುಂಗಾರು ವಿಳಂಬ: ರಾಜ್ಯದ 11 ಜಲಾಶಯಗಳು ಖಾಲಿ!

ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವ ಆತಂಕ ತಮಿಳುನಾಡಿನ ಜೊತೆ ಜಲಸಂಘರ್ಷ ಸೃಷ್ಟಿಯ ಭೀತಿ ಮುಂಗಾರು...