ಪಿಎಸ್‌ಐ ನೇಮಕಾತಿ ಹಗರಣ | ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ ಜಾಮೀನು ಅರ್ಜಿ ತಿರಸ್ಕಾರ

Date:

Advertisements
  • ಸತತ 5ನೇ ಬಾರಿ ಅರ್ಜಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ
  • ಪಿಎಸ್ಐ ನೇಮಕಾತಿ ಹಗರಣದ 35ನೇ ಆರೋಪಿಯಾಗಿದ್ದ ಪೌಲ್‌

ಪಿಎಸ್‌ಐ ನೇಮಕಾತಿ (ಪೊಲೀಸ್ ಸಬ್ ಇನ್‌ಸ್ಪೆಕ್ಟರ್) ಹಗರಣದಲ್ಲಿ ಪ್ರಮುಖ ಆರೋಪಿ, ಬಂಧಿತ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಪಿಎಸ್ಐ ನೇಮಕಾತಿ ಹಗರಣದ 35ನೇ ಆರೋಪಿಯಾಗಿದ್ದ ಅಮೃತ್‌ ಪೌಲ್‌ ಜಾಮೀನು ನೀಡುವಂತೆ ಸತತ ಐದು ಬಾರಿ ಅರ್ಜಿ ಸಲ್ಲಿಸಿದ್ದರು. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ ಲಕ್ಷ್ಮಿನಾರಾಯಣ ಭಟ್‌ ಅರ್ಜಿ ವಿಚಾರಣೆ ನಡೆಸಿದ್ದು, ಅರ್ಜಿಯನ್ನು ತಿಸ್ಕರಿಸಿದ್ದಾರೆ.

ಬಂಧನವಾದ ಬಳಿಕ ಮೊದಲ ಬಾರಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಈ ನ್ಯಾಯಾಲಯವು ಅಮೃತ್‌ ಪೌಲ್‌ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. 2ನೇ ಬಾರಿ ಬೆಂಗಳೂರಿನ 51ನೇ ಹೆಚ್ಚುವರಿ ನಗರ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಯಶವಂತ ಅವರು ಜಾಮೀನು ನೀಡಲು ನಿರಾಕರಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಕಿರಣ್‌ ರಿಜಿಜು ಹೇಳಿಕೆ ವಿರುದ್ಧ ಸುಪ್ರೀಂಕೋರ್ಟ್‌, ಹೈಕೋರ್ಟ್ ವಕೀಲರಿಂದ ಖಂಡನೆ

ಈ ಪ್ರಕರಣವು ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಗೊಂಡ ನಂತರ, “ನನ್ನ ಮೇಲೆ ದಾಖಲಾಗಿರುವ ಆರೋಪ ಪಟ್ಟಿಯು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವುದರಿಂದ ನನಗೆ ಡಿಫಾಲ್ಟ್‌ ಜಾಮೀನು ಮಂಜೂರು ಮಾಡಬೇಕು” ಎಂದು 2022ರ ನ. 23, ಹಾಗೂ 2023ರ ಜ.4ರಂದು ಅರ್ಜಿ ಸಲ್ಲಿಸಿದ್ದರು. ಆಗಲೂ ಕೂಡ ಜಾಮೀನು ಅರ್ಜಿ ರದ್ದುಗೊಂಡಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೈರಪ್ಪ ಮತ್ತು ಕುತರ್ಕದ ಉರುಳು

ಅಂತಃಕರಣವೇ ಇಲ್ಲದಾತ ಅದು ಹೇಗೆ ಬರಹಗಾರನಾಗಲು ಸಾಧ್ಯ? ತನ್ನ ಸಹಜೀವಿಗಳ ಬಗ್ಗೆ...

ಕೇರಳ ವಿಧಾನಸಭೆಯಲ್ಲಿ SIR ವಿರುದ್ಧ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯವು...

ದಾವಣಗೆರೆ | ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಜಾರಿಗೊಳಿಸಿ: ಮಾಜಿ ಸಚಿವ ಆಂಜನೇಯ

"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು...

ನೈಜ ದೇಶಭಕ್ತರು ಪಾಕ್ ವಿರುದ್ಧದ ಪಂದ್ಯ ನೋಡಿಲ್ಲ: ಬಿಜೆಪಿ, ಟೀಮ್ ಇಂಡಿಯಾವನ್ನು ಟೀಕಿಸಿದ ಸಂಜಯ್ ರಾವತ್

ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ ಆಡಿದ ವಿಚಾರದಲ್ಲಿ...

Download Eedina App Android / iOS

X