ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಮಾಜಿ ಸಚಿವ ಸುಧಾಕರ್‌

Date:

Advertisements
  • ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು
  • ಕ್ರಿಮಿನಲ್‌, ಮಾನಹಾನಿ ಪ್ರಕರಣ ದಾಖಲಿಸಲು ಅರ್ಜಿ

ತನ್ನ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಡಾ. ಕೆ. ಸುಧಾಕರ್‌ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ತನ್ನ ವಿರುದ್ಧ ಸಾರ್ವಜನಿಕವಾಗಿ ಇಲ್ಲಸಲ್ಲದ, ಪ್ರಚೋದನಾಕಾರಿ ಹೇಳಿಕೆ ನೀಡುವ ಮೂಲಕ ಮಾನಹಾನಿ ಮಾಡುತ್ತಿರುವ ಬಗ್ಗೆ ಪ್ರದೀಪ್‌ ಈಶ್ವರ್‌ ವಿರುದ್ದ ಕ್ರಿಮಿನಲ್‌ ಮಾನಹಾನಿ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿಬೇಕು ಎಂದು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿರುವುದಾಗಿ ವರದಿಯಾಗಿದೆ. ಅರ್ಜಿಯ ವಿಚಾರಣೆ ಇನ್ನಷ್ಟೇ ನಿಗದಿಯಾಗಬೇಕಿದೆ.

ಚಿಕ್ಕಬಳ್ಳಾಪುರದ ಶಾಸಕರು, ಪದೇಪದೇ ಸಾರ್ವಜನಿಕವಾಗಿ ತನ್ನ ವಿರುದ್ಧ ಹಗೆತನದಿಂದ ಕೂಡಿದ, ನಿರಾಧಾರ ಆರೋಪಗಳನ್ನು ಮಾಡುತ್ತಿದ್ದಾರೆ. ಆ ಮೂಲಕ ದಂಗೆ ಎಬ್ಬಿಸಿ ತನ್ನ ಬದುಕು, ವ್ಯಕ್ತಿತ್ವಕ್ಕೆ ಹಾನಿ ಮಾಡುವ ಉದ್ದೇಶ ಹೊಂದಿದ್ದಾರೆ. ಇದು ಕಾನೂನಿನ ಪ್ರಕಾರ ಅಪರಾಧ ಎಂದು ಸುಧಾಕರ್‌ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

Advertisements

ಆಧಾರರಹಿತ ಮತ್ತು ದೋಷಪೂರಿತ ಆರೋಪಗಳನ್ನು ಮಾಡಿ, ದುರುದ್ದೇಶಪೂರ್ವಕವಾಗಿ ತಮ್ಮ ವ್ಯಕ್ತಿತ್ವವನ್ನು ಧ್ವಂಸ ಮಾಡುತ್ತಿದ್ದಾರೆ. ತಮ್ಮ ಶೈಕ್ಷಣಿಕ ಅರ್ಹತೆ, ಬೌದ್ಧಿಕ ಸಾಮರ್ಥ್ಯದ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿದ್ದಾರೆ. ತನ್ನನ್ನು ಭ್ರಷ್ಟ ಎಂದು ಸಾರ್ವಜನಿಕರೆದುರೇ ಜರೆದಿದ್ದಾರೆ. ಇದು ಸತ್ಯಕ್ಕೆ ದೂರವಾಗಿದೆ ಎಂದು ಪ್ರದೀಪ್ ಈಶ್ವರ್ ಅವರ ಹಲವು ಆರೋಪಗಳನ್ನು ಉಲ್ಲೇಖಿಸಿ ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಅರಣ್ಯ ಮತ್ತು ಕಂದಾಯ ಇಲಾಖೆಗಳ ಜಟಾಪಟಿ ಬಡ ರೈತರ ಬೆನ್ನಿಗೆ ಚೂರಿಯಾಗದಿರಲಿ

ಪ್ರದೀಪ್‌ ಈಶ್ವರ್‌ ಅವರು ತಮ್ಮ ವಿರುದ್ಧ ದ್ವೇಷಕಾರುತ್ತಿರುವುದಲ್ಲದೇ, ಯುವಜನರ ಮನಸ್ಸನ್ನು ಹಾಳು ಮಾಡುತ್ತಿದ್ದಾರೆ. ಇದು ದುರುದ್ದೇಶಪೂರ್ವಕ ಮತ್ತು ಇದರ ಹಿಂದೆ ತನ್ನ ವರ್ಚಸ್ಸಿಗೆ ಧಕ್ಕೆ ಮಾಡಿ, ರಾಜಕೀಯ ಲಾಭ ಪಡೆಯುವ ಉದ್ದೇಶ ಇದೆ ಎಂದು ಆಕ್ಷೇಪಿಸಿದ್ದಾರೆ.

ಪ್ರದೀಪ್‌ ಈಶ್ವರ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 36, 37, 109, 112, 113, 114, 117, 120ಬಿ, 388, 500, 501. 504, 505, 506 ಅಡಿ ಪ್ರಕರಣ ದಾಖಲಿಸಲು ಆದೇಶಿಸಬೇಕು ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಮಾಜಿ ಸಚಿವ ಡಾ.ಕೆ. ಸುಧಾಕರ್‌ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X