ಮಾಜಿ ಸ್ಪೀಕರ್ ಆಪ್ತ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆ ಸಿಬಿಐಗೆ

Date:

Advertisements

ಕೋಲಾರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಕರ್ನಾಟಕ ಹೈಕೋರ್ಟ್ ಸಿಬಿಐಗೆ ನೀಡಿದೆ.

ಗೃಹ ಸಚಿವ ಜಿ ಪರಮೇಶ್ವರ್ ಮತ್ತು ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಅವರ ಆಪ್ತರಾಗಿದ್ದ ಎಂ ಶ್ರೀನಿವಾಸ್ ಅವರನ್ನು 2023 ಅಕ್ಟೋಬರ್ 23ರಂದು ಶ್ರೀನಿವಾಸಪುರ ಹೊರವಲಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದರು.

ಶ್ರೀನಿವಾಸ್ ಅವರ ಪತ್ನಿ ಡಾ. ಎಸ್. ಚಂದ್ರಕಲಾ ಅವರು ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಹೈಕೋರ್ಟ್​ಗೆ ಮನವಿ ಮಾಡಿದ್ದರು. ಇದೀಗ ಚಂದ್ರಕಲಾ ಅವರ ಮನವಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಪ್ರಕರಣವನ್ನು ಸಿಬಿಐಗೆ ವಹಿಸಿ, ಸೋಮವಾರ (ಮಾ.17) ಮಹತ್ವದ ತೀರ್ಪು ನೀಡಿದೆ.

Advertisements

ವೈಯಕ್ತಿಕ ದ್ವೇಷದಿಂದ ಕೊಲೆಯಾಗಿದೆಯಾ? ಪರಿಚಯಸ್ಥರು ಕೊಲೆ ಮಅಡಿಸಿದ್ದಾರಾ? ಅಥವಾ ರಾಜಕೀಯ ದ್ವೇಷ ಅಡಗಿದೆಯಾ ಎಂಬುದು ಅನುಮಾನವಿದೆ. ಸ್ಥಳೀಯ ಪೊಲೀಸರು ಹಾಗೂ ಸಿಐಡಿ ಅಧಿಕಾರಿಗಳು ಸಮರ್ಪಕ ತನಿಖೆ ನಡೆಸಿಲ್ಲ. ಸಿಬಿಐ ತನಿಖೆ ಅನಿವಾರ್ಯವೆಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಮೂರು ತಿಂಗಳಿನಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸಿಬಿಐಗೆ ಸೂಚನೆ ನೀಡಿದೆ. ಇನ್ನು ಸಿಬಿಐ ತನಿಖೆಗೆ ಸಹಕರಿಸುವಂತೆ ಪೊಲೀಸರಿಗೂ ಸಹ ಕೋರ್ಟ್​ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X