ಭಾರತದ ಪ್ರಧಾನಿ ‘ಕೊನೆಯ ಪತ್ರಿಕಾಗೋಷ್ಠಿ’ ನಡೆಸಿ ಇಂದಿಗೆ ಬರೋಬ್ಬರಿ 10 ವರ್ಷ

Date:

Advertisements

ಭಾರತದ ಪ್ರಧಾನಿಯೊಬ್ಬರು ‘ಕೊನೆಯ ಪತ್ರಿಕಾಗೋಷ್ಠಿ’ ನಡೆಸಿ ಇಂದಿಗೆ ಸರಿಯಾಗಿ ಒಂದು ದಶಕ ಕಳೆದಿದೆ. ಅಂದರೆ, 10 ವರ್ಷಗಳ ಹಿಂದೆ ಜನವರಿ 3ರಂದು ಪ್ರಧಾನಿ ಕಡೆಯ ಪ್ರೆಸ್‌ಮೀಟ್‌ ನಡೆಸಿದ್ದರು. ಅದು ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಎಂದು ಪತ್ರಕರ್ತ ಪಂಕಜ್ ಪಚೌರಿ ಟ್ವಿಟರ್‌ನಲ್ಲಿ ಗಮನ ಸೆಳೆದಿದ್ದಾರೆ.

“ಭಾರತದ ಪ್ರಧಾನಿಯ ಕೊನೆಯ ಪತ್ರಿಕಾಗೋಷ್ಠಿ ಸರಿಯಾಗಿ 10 ವರ್ಷಗಳ ಹಿಂದೆ ನಡೆದಿದೆ. ಅಂದು, 100ಕ್ಕೂ ಹೆಚ್ಚು ಪತ್ರಕರ್ತರಿದ್ದ ಪ್ರೆಸ್‌ಮೀಟ್‌ನಲ್ಲಿ 62 ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದರು” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಪಚೌರಿ ಪ್ರಸ್ತಾಪಿಸಿದಂತೆ, ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು 100ಕ್ಕೂ ಹೆಚ್ಚು ಪತ್ರಕರ್ತರಿಗೆ ಆತಿಥ್ಯ ನೀಡಿದ್ದರು. ಪತ್ರಕರ್ತರು ಸುಮಾರು 62 ಪ್ರಶ್ನೆಗಳನ್ನು ಕೇಳಿದ್ದರು. ಆಗ, ಪಚೌರಿ ಸಿಂಗ್ ಅವರು ಮನಮೋಹನ್ ಸಿಂಗ್ ಅವರ ಮಾಹಿತಿ ಮತ್ತು ಸಂವಹನ ಸಲಹೆಗಾರರಾಗಿದ್ದರು.

Advertisements

2014ರಲ್ಲಿ ಸರ್ಕಾರ ಬದಲಾಯಿತು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಇದೂವರೆಗೂ ಒಂದೇ ಒಂದು ಪತ್ರಿಕಾಗೋಷ್ಠಿಯನ್ನು ಕರೆದಿಲ್ಲ. ಅಮಿತ್ ಶಾ ಅವರು ಕರೆದಿದ್ದ ಪತ್ರಿಕಾಗೋಷ್ಠಿಯೊಂದರಲ್ಲಿ, ಮೋದಿ ಅವರು ಮೂಕ ಪ್ರೇಕ್ಷಕರಂತೆ ಕುಳಿತುಹೋಗಿದ್ದರು ಅಷ್ಟೇ. ಅದು ಬಿಟ್ಟರೆ, ಮೋದಿ ಅವರು 2023ರ ಅಮೆರಿಕಾ ಪ್ರವಾಸಕ್ಕೆ ತೆರಳಿದ್ದಾಗ, ಶ್ವೇತಭವನದಲ್ಲಿ ಪತ್ರಕರ್ತರ ಎರಡು ಪ್ರಶ್ನೆಗಳಿಗೆ ಉತ್ತರಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಉತ್ತರ ಪ್ರದೇಶ | ದಲಿತ ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ ಪೊಲೀಸ್

ಆ ಸಂದರ್ಭದಲ್ಲಿ ವರದಿ ಮಾಡಿದ್ದ ನ್ಯೂಯಾರ್ಕ್‌ ಟೈಮ್ಸ್‌, “ಮೋದಿ ಅವರು ಸಾರ್ವಜನಿಕ ಸಮಾರಂಭಗಳಲ್ಲಿ ಭಾಷಣ ಮಾಡುವುದನ್ನು ಇಷ್ಟಪಡುತ್ತಾರೆ. ರಾಷ್ಟ್ರಕ್ಕೆ ತಮ್ಮ ಸಂದೇಶಗಳನ್ನು ನೀಡಲು ಮಾಸಿಕ ‘ಮನ್‌ ಕಿ ಬಾತ್’ ರೇಡಿಯೋ ಕಾರ್ಯಕ್ರಮವನ್ನು ಆಯ್ಕೆ ಮಾಡಿಕೊಂಡಿದ್ದಾರೆ” ಎಂದು ಹೇಳಿತ್ತು.

ಭಾರತದಲ್ಲಿ ಪ್ರಧಾನಿಯಾಗಿ ಕೊನೆಯ ಪತ್ರಿಕಾಗೋಷ್ಠಿ ನಡೆಸಿದ್ದ ಮನ್‌ಮೋಹನ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಗಳಿಗೂ ಮುನ್ನ ಭಾಷಣ ಮಾಡಿದ್ದರು. ಅವರು ತಮ್ಮ ಸರ್ಕಾರದ ಸಾಧನೆಗಳು ಮತ್ತು ವೈಫಲ್ಯಗಳ ಕುರಿತು ಪ್ರಾಮಾಣಿಕ ಮಾತುಗಳನ್ನಾಡಿದ್ದರು. ಉತ್ಪಾದನಾ ವಲಯದಲ್ಲಿ ಉದ್ಯೋಗ ಸೃಷ್ಟಿಯು ಸರ್ಕಾರದ ಗುರಿಗಳಿಗಿಂತ ಹೇಗೆ ಕಡಿಮೆಯಾಯಿತು ಎಂಬುದರ ಕುರಿತು ಅವರು ಗಮನ ಹರಿಸಿದ್ದರು.

ಪಚೌರಿ ಅವರ ಪೋಸ್ಟ್ಅನ್ನು ಹಂಚಿಕೊಂಡಿರುವ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, “ಮನಮೋಹನ್ ಸಿಂಗ್ ಅವರು ತಮ್ಮ 10 ವರ್ಷಗಳ ಅಧಿಕಾರಾವಧಿಯಲ್ಲಿ 117 ಬಾರಿ ಪತ್ರಿಕಾಗೋಷ್ಠಿ ನಡೆಸಿದ್ದರು” ಎಂದು ಬರೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X