ಅಬಕಾರಿ ಪ್ರಕರಣ | ಇಡಿ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ; ಏ.15ರಂದು ವಿಚಾರಣೆ

Date:

Advertisements

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಇಡಿ ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.15) ವಿಚಾರಣೆ ನಡೆಸಲಿದೆ.

ದೆಹಲಿ ಅಬಕಾರಿ ನೀತಿ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದೆ. ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 9ರಂದು (ಮಂಗಳವಾರ) ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸ್ವರಣಾ ಕಾಂತ ಶರ್ಮಾ ಅವರು ಇಡಿ ಬಂಧನ ಕಾನೂನು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದರು. ಅಲ್ಲದೇ, ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದರು.

ಹೈಕೋರ್ಟ್ ಆದೇಶದ ವಿರುದ್ಧ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಬುಧವಾರ ಮೇಲ್ಮನವಿ ಸಲ್ಲಿಸಿದ್ದಾರೆ. ಅಲ್ಲದೆ, ತಮ್ಮ ಮೇಲ್ಮನವಿಯನ್ನು ಆದಷ್ಟು ಬೇಗ ವಿಚಾರಣೆಗೆ ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ಅರ್ಜಿಯನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಏಪ್ರಿಲ್ 15ರಂದು ವಿಚಾರಣೆ ನಡೆಸಲಿದೆ.

Advertisements

ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದ್ದು, ವಿಚಾರಣೆ ಬಳಿಕ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದೆ. ಏಪ್ರಿಲ್ 15 ರವರೆಗೆ ಕೇಜ್ರಿವಾಲ್‌ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಪರಿಚಿತ ವಾಹನ ಡಿಕ್ಕಿ: ಫ್ಲೈ ಓವರ್‌ನಿಂದ ಬಿದ್ದು ಯುವಕ ಸಾವು

“ಸಾರ್ವತ್ರಿಕ ಲೋಕಸಭಾ ಚುನಾವಣೆ ಮುನ್ನ ಇಡಿ ನನ್ನನ್ನು ಬಂಧಿಸಿದೆ. ಇದು ಪ್ರಜಾಪ್ರಭುತ್ವದ ತತ್ವದ ಮೇಲಿನ ದಾಳಿ. ನನ್ನ ವಿರುದ್ಧ ಹಾಕಲಾಗಿರುವ ಪ್ರಕರಣ ಕಾನೂನುಬಾಹಿರವಾಗಿದೆ. ಹಾಗಾಗಿ, ನನ್ನನ್ನು ಬಿಡುಗಡೆ ಮಾಡಬೇಕು” ಎಂದು ಸುಪ್ರೀಂಕೋರ್ಟ್‌ಗೆ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಾರ್ಚ್ 21ರ ರಾತ್ರಿ ಕೇಜ್ರಿವಾಲ್ ಅವರನ್ನು ಬಂಧಿಸಿದ್ದರು. ಮಾರ್ಚ್ 22 ರಂದು ವಿಚಾರಣಾ ನ್ಯಾಯಾಲಯವು ಅವರನ್ನು ಆರು ದಿನ ಇಡಿ ಕಸ್ಟಡಿಗೆ ನೀಡಿತು. ಅದನ್ನು ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಲಾಯಿತು. ಏಪ್ರಿಲ್ 1 ರಂದು ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X