‘ಚಲಾಯಿಸಿ ನಿಮ್ಮ ಹಕ್ಕನ್ನು, ಬದಲಾಯಿಸಿ ದೇಶದ ದಿಕ್ಕನ್ನು’ ಯುವ ಮತದಾರರಿಗಾಗಿ ಕಾಂಗ್ರೆಸ್‌ ಅಭಿಯಾನ

Date:

Advertisements
  • ಯುವ ಸಮೂಹವನ್ನು ಸೆಳೆಯಲು ಆರಂಭವಾದ ಪೆಹಲಾ ಓಟ್ ಅಭಿಯಾನ
  • ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕುವ ಯುವ ಸಮೂಹ

ಕರ್ನಾಟಕದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ. ಇದೀಗ ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಯುವ ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ರಾಜ್ಯಾದ್ಯಂತ ‘ಪೆಹಲಾ ಓಟ್‌’ (ಮೊದಲ ಮತ) ಅಭಿಯಾನವನ್ನು ಆರಂಭಿಸಿದೆ.

ಈ ಪೆಹಲಾ ಓಟ್ ಅಭಿಯಾನದ ಜವಾಬ್ದಾರಿಯನ್ನು ರಾಷ್ಟ್ರೀಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹಾಗೂ ಎಐಸಿಸಿ ಸದಸ್ಯ ಎಂ.ಎಸ್.‌ರಕ್ಷಾ ರಾಮಯ್ಯ ಅವರು ಹೊತ್ತಿದ್ದಾರೆ. ಆ. 10ರಂದು ಈ ಅಭಿಯಾನದ ಪ್ರಚಾರ ವಾಹನಗಳಿಗೆ ಬೆಂಗಳೂರಿನ ಸಹಕಾರ ನಗರದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಚಾಲನೆ ನೀಡಿದರು.

“ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ಈ ಅಭಿಯಾನ ಆರಂಭಿಸಲಾಗಿದೆ. ಯುವ ಸಮೂಹ ದೇಶದ ಶಕ್ತಿಯಾಗಿದೆ. ಈ ಮೊದಲ ಮತ ಅಭಿಯಾನ ಯುವ ಜನಾಂಗದ ಆಂದೋಲನವಾಗಿದೆ” ಎಂದು ಎಂ.ಎಸ್.ರಕ್ಷಾ ರಾಮಯ್ಯ ಹೇಳಿದರು.

Advertisements

ಚಲಾಯಿಸಿ

“ಈ ಮೊದಲ ಮತ ಅಭಿಯಾನದಲ್ಲಿ ಸಂವಾದ, ತಂತ್ರಜ್ಞಾನ ಆಧಾರಿತ ಪ್ರಚಾರ, ಕ್ಯೂ ಆರ್ ‌ಕೋಡ್‌ ಮೂಲಕ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಸರಕು ಸಾಗಾಣೆ ವಾಹನಗಳಲ್ಲಿ ಎಲ್.ಇ.ಡಿ ವ್ಯವಸ್ಥೆ, ಶಾಲಾ ಕಾಲೇಜುಗಳು, ಟ್ಯೂಷನ್‌ ತಾಣಗಳು, ಬಸ್‌ ನಿಲ್ದಾಣಗಳು, ಮಾಲ್‌ಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ” ಎಂದರು.

“ಯುವ ಮತದಾನ ಅಭಿಯಾನವನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಯೋಜಿಸಲಾಗಿತ್ತು. ಆಗ ಅಭಿಯಾನಕ್ಕೆ ಅಭೂತಪೂರ್ವ ಸ್ಪಂದನೆ ದೊರೆತಿತ್ತು. ಈ ಅಭಿಯಾನದಿಂದ ಕಾಂಗ್ರೆಸ್‌ ಶೇ. 42ರಷ್ಟು ಯುವ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಿಜೆಪಿಯನ್ನು ಹಿಂದಿಕ್ಕಿ ಬಹುಮತದೊಂದಿಗೆ ಮುನ್ನಡೆ ಸಾಧಿಸಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ₹6.20 ಲಕ್ಷ ದಂಡ ಸಂಗ್ರಹ

“ಈ ಗೆಲುವಿನ ಬಳಿಕ ಮೊದಲ ಮತ ಅಭಿಯಾನ ಆರಂಭ ಮಾಡಲಾಗಿದೆ. ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸುವ ಯುವ ಸಮೂಹವನ್ನು ಸೆಳೆಯುವ ಸವಾಲು ಇದೆ. ಈ ಅಭಿಯಾನಕ್ಕೆ ಉತ್ತಮ ಬೆಂಬಲ ಸಿಗುವ ಭರವಸೆ ಇದೆ. ಈ ಪೆಹಲಾ ಓಟ್ ಅಭಿಯಾನದ ವಾಹನಗಳು ರಾಜ್ಯಾದ್ಯಂತ ಸಂಚರಿಸಲಿವೆ. ಈ ಮತದಾನದ ಬಗ್ಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅರಿವು ಮೂಡಿಸಲಿದ್ದಾರೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X