ಕಾಂಗ್ರೆಸ್ಸಿಗರ ಎದೆಬಡಿತ ಹೆಚ್ಚಿಸಿದ ಎಕ್ಸಿಟ್ ಪೋಲ್ ಫಲಿತಾಂಶ: ಬಿ ವೈ ವಿಜಯೇಂದ್ರ

Date:

Advertisements

ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶ ಬಂದ ಬಳಿಕ ರಾಜ್ಯದ ಆಡಳಿತ ಪಕ್ಷದ ಮುಖಂಡರಿಗೆ, ಮುಖ್ಯಮಂತ್ರಿಯಾದಿಯಾಗಿ ಸಚಿವರಿಗೂ ಕೂಡ ಎದೆಬಡಿತ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಣ್ಣದಲ್ಲ. ಇದರ ಆಳ ಮತ್ತು ಅಗಲ ಇನ್ನೂ ಹೆಚ್ಚಾಗಿದೆ. ಕೂಡಲೇ ಸಚಿವ ನಾಗೇಂದ್ರರ ರಾಜೀನಾಮೆ ಪಡೆಯಲು ನಾವು ಆಗ್ರಹಿಸಿದ್ದರೂ ಮುಖ್ಯಮಂತ್ರಿಗಳು ಇನ್ನೂ ಮನಸ್ಸು ಮಾಡಿಲ್ಲ” ಎಂದು ಆಕ್ಷೇಪಿಸಿದರು.

“ತೆಲಂಗಾಣಕ್ಕೆ ಹಣ ವರ್ಗಾವಣೆ, ನಕಲಿ ಕಂಪನಿ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ವರ್ಗಾಯಿಸಿದ್ದು ಬಯಲಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೋಸ್ಕರ ಈ ಎಸ್‍ಟಿ ಅಭಿವೃದ್ಧಿ ನಿಗಮದ ರೂ. 187 ಕೋಟಿ ಹಣವನ್ನು ತೆಲಂಗಾಣಕ್ಕೆ ವರ್ಗಾಯಿಸಿದ್ದಾರೆ. ಬೇರೆ ಬೇರೆ ಖಾತೆಗಳಿಂದ ಈ ಹಣ ಚುನಾವಣೆಗೆ ದುರುಪಯೋಗ ಆಗಿದೆ” ಎಂದು ಆರೋಪಿಸಿದರು.

Advertisements

“ಸಿಬಿಐ ತನಿಖೆಗೆ ಕೋರಿ ಯೂನಿಯನ್ ಬ್ಯಾಂಕ್ ಕೂಡ ಪತ್ರ ಬರೆದಿದೆ. ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ತಮ್ಮ ಕೊಳಕನ್ನು ಮುಚ್ಚಿ ಹಾಕಲು ಆತುರಾತುರವಾಗಿ ಎಸ್‍ಐಟಿ ರಚಿಸಿದ್ದಾರೆ. ಬಿಜೆಪಿ ಈ ವಿಚಾರದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಿದೆ” ಎಂದು ಎಚ್ಚರಿಸಿದರು.

ಹಗರಣದ ಹಿಂದೆ ದೊಡ್ಡ ಹೆಸರು

“ವಾಲ್ಮೀಕಿ ನಿಗಮದ ಹಗರಣವು ಕೇವಲ ಸಚಿವರಿಗೆ ಸೀಮಿತವಾಗಿಲ್ಲ. ಬಹಳ ದೊಡ್ಡ ದೊಡ್ಡ ಹೆಸರುಗಳು ಕೇಳಿಬರುತ್ತಿವೆ. ಮುಂದಿನ ದಿನಗಳಲ್ಲಿ ಸತ್ಯಾಂಶ ಹೊರಬರಲಿದೆ. ಎಸ್‍ಐಟಿಯಿಂದ ನ್ಯಾಯಯುತ ತನಿಖೆ ಅಸಾಧ್ಯ. ಆದ್ದರಿಂದ ಸಿಬಿಐ ತನಿಖೆಗೆ ಒಪ್ಪಿಸಬೇಕು. ಸದ್ಯವೇ ರಾಜ್ಯಪಾಲರನ್ನು ಭೇಟಿ ಮಾಡಿ ಈ ವಿಚಾರದಲ್ಲಿ ಒತ್ತಾಯ ಮಾಡಲಿದ್ದೇವೆ” ಎಂದು ತಿಳಿಸಿದರು.

ಕೇಂದ್ರದ ವರಿಷ್ಠರು, ಹಿರಿಯರಾದ ಸಿ ಟಿ ರವಿ, ಎನ್.ರವಿಕುಮಾರ್, ಮರಾಠ ಸಮಾಜದ ಮುಖಂಡ, ಬಿಜೆಪಿ ಹಿರಿಯರಾದ ಎಂ ಜಿ ಮುಳೆ ಅವರನ್ನು ವಿಧಾನ ಪರಿಷತ್ ಅಭ್ಯರ್ಥಿಗಳಾಗಿ ಆಯ್ಕೆ ಮಾಡಿದ ಕುರಿತು ಸಂತಸ ಸೂಚಿಸಿದರು. ಇದರಿಂದ ಮುಂದಿನ ದಿನಗಳಲ್ಲಿ ಸರಕಾರದ ವಿರುದ್ಧ ಧ್ವನಿ ಎತ್ತಿ ಸರಕಾರಕ್ಕೆ ಚಾಟಿ ಬೀಸುವ ಕೆಲಸ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X