ಸತ್ಯಶೋಧ | ಬಿಜೆಪಿಗೆ ಸ್ಟಾರ್‌ ಕ್ರಿಕೆಟಿಗ ಎಂ.ಎಸ್‌ ಧೋನಿ ಸೇರಿಲ್ಲ

Date:

Advertisements

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ, ಸ್ಟಾರ್‌ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು ಬಿಜೆಪಿ ಸೇರಿದ್ದಾರೆ ಎಂಬ ಹೇಳಿಯೊಂದಿಗೆ ಪ್ರಧಾನಿ ಮೋದಿ ಮತ್ತು ಧೋನಿ ಇರುವ ಚಿತ್ರವೊಂದು ಹರಿದಾಡುತ್ತಿದೆ. ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹಲವಾರು ನೆಟ್ಟಿಗರು ಧೋನಿ ಬಿಜೆಪಿ ಸೇರಿದ್ದಾರೆಂದು ನಂಬಿಸಿದ್ದು, ಚಿತ್ರವನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೆ, ಧೋನಿ ಬಿಜೆಪಿ ಸೇರಿಲ್ಲ. ವೈರಲ್ ಆಗುತ್ತಿರುವ ಚಿತ್ರವು ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಿರುವ ಚಿತ್ರವಾಗಿದೆ ಎಂದು ಕಂಡುಬಂದಿದೆ.

ವೈರಲ್ ಪೋಸ್ಟ್‌ ಮತ್ತು ಚಿತ್ರ ಹೇಳುವುದೇನು?

ಪ್ರಧಾನಿ ಮೋದಿ ಜೊತೆ ಧೋನಿ ಇರುವ ಫೋಟೋವನ್ನು ಹಲವಾರು ನೆಟ್ಟಿಗರು ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲಿ ಧೋನಿ ಮತ್ತು ಮೋದಿ ಬಿಜೆಪಿಯ ಚಿಹ್ನೆ ಇರುವ ಕೇಸರಿ ಶಾಲನ್ನು ಧರಿಸಿದ್ದಾರೆ. ಚಿತ್ರ ‘ಬ್ಯಾಕ್‌ಗ್ರೌಂಡ್‌’ನಲ್ಲಿ ಬಿಜೆಪಿಯ ಬ್ಯಾನರ್ ಕೂಡ ಇದೆ.

Advertisements

ಆಚಿತ್ರವನ್ನು ಹಂಚಿಕೊಂಡಿರುವ ಹಲವರು, ‘ಸಿಎಸ್‌ಕೆ ಆಟಗಾರ ಧೋನಿ ಬಿಜೆಪಿ ಸೇರಿದ್ದಾರೆ’, ‘ಎಂ.ಎಸ್‌ ಧೋನಿ ಬಿಜೆಪಿ ಸೇರಿದ್ದಾರೆ’ ಎಂದು ಹೇಳುತ್ತಿದ್ದಾರೆ.

image 48 2

ಸತ್ಯವೇನು?

ಫೋಟೋ ವೈರಲ್ ಆಗುತ್ತಿದ್ದಂತೆ, ಚಿತ್ರಕ್ಕೆ ಸಂಬಂಧಿದ ಕೀವರ್ಡ್‌ಗಳನ್ನು ಬಳಸಿ, ಅಂತರ್ಜಾಲದಲ್ಲಿ ಹುಡುಕಲಾಗಿದ್ದು, ಧೋನಿ ಬಿಜೆಪಿ ಸೇರಿದ್ದಾರೆ ಎಂದು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ವರದಿಗಳು ಕಂಡುಬಂದಿಲ್ಲ. ಅಲ್ಲದೆ, ಪ್ರಧಾನಿ ಮೋದಿ ಅವರನ್ನು ಇತ್ತೀಚೆಗೆ ಧೋನಿಯನ್ನು ಭೇಟಿ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು, ವರದಿಗಳು ದೊರೆತಿಲ್ಲ.

ಈ ವರದಿ ಓದಿದ್ದೀರಾ?: ಪ್ರಧಾನಿ ಮೋದಿ ನಿವೃತ್ತರಾಗುತ್ತಾರೆಯೇ? RSS ಕೇಂದ್ರ ಕಚೇರಿ ಭೇಟಿಯ ಉದ್ದೇಶವೇನು?

ಇನ್ನು, ಚಿತ್ರವನ್ನು ತೀಕ್ಷ್ಣವಾಗಿ ಪರಿಶೀಲಿಸಿದರೆ, ಫೋಟೋದಲ್ಲಿ ಪ್ರಧಾನಿ ಮೋದಿ ಅವರ ಕನ್ನಡಕ ಸಂಪೂರ್ಣವಾಗಿ ಚಿತ್ರಣಗೊಂಡಿಲ್ಲ. ಮೋದಿ ಅವರ ಭುಜದ ಮೇಲಿನ ಕಮಲದ ಚಿಹ್ನೆಯು ಕೃತಕ ರೀತಿಯಲ್ಲಿದ್ದು, ಎಐ ತಂತ್ರಜ್ಞಾನದಿಂದ ರಚಿಸಲ್ಪಟ್ಟಿದೆ ಎಂಬುದನ್ನು ಸೂಚಿಸುತ್ತದೆ. ಹೀಗಾಗಿ, ಅದು ಎಐ ಬಳಸಿ, ಚಿತ್ರಸಲಾಗಿರುವ ಫೋಟೋ ಎಂಬುದು ದೃಢಪಟ್ಟಿದೆ.

ಸಾರಾಂಶ;

ಚಿತ್ರವನ್ನು ಕೃತಕ ಬುದ್ದಿಮತ್ತೆ ಬಳಸಿ ರಚಿಸಲಾಗಿದೆ. ಧೋನಿ ಬಿಜೆಪಿಗೆ ಸೇರಿಲ್ಲ ಅಥವಾ ಪ್ರಧಾನಿ ಮೋದಿಯವರನ್ನು ಇತ್ತೀಚೆಗೆ ಭೇಟಿ ಮಾಡಿಲ್ಲ ಎಂಬುದು ದೃಢ. ಇಂತಹ ಸುದ್ದಿಗಳನ್ನು ನಂಬುವುದಕ್ಕೂ ಮುನ್ನ ಜನರು ಎಚ್ಚರಿಕೆಯಿಂದ ಇರಬೇಕು. ಅಧಿಕೃತ ಮಾಹಿತಿಗಳನ್ನು ಪರಿಶೀಲಿಸಿ, ಸತ್ಯಾಸತ್ಯತೆಯನ್ನು ಗಮನಿಸಬೇಕು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X