ಕೆಪಿಸಿಸಿ ಹೆಸರಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿ : ಮೂವರ ಬಂಧನ

Date:

Advertisements
  • ಮೊಬೈಲ್, ಲ್ಯಾಪ್‌ಟಾಪ್ ವಶಕ್ಕೆ; ಜಾಮೀನಿನ ಮೇಲೆ ಬಿಡುಗಡೆ
  • ಪೊಲೀಸರಿಗೆ ದೂರು ನೀಡಿದ್ದ ಕೆಪಿಸಿಸಿ ಘಟಕದ ಸದಸ್ಯ ಶತಬೀಶ್‌ ಶಿವಣ್ಣ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿದ್ದ ಜಾಲ ಪತ್ತೆ ಮಾಡಿರುವ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ.

ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ಕಾಂಗ್ರೆಸ್ ನಾಯಕರ ವಿರುದ್ಧವೇ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಾಸನದಲ್ಲಿ ನೋಂದಣಿಯಾಗಿದ್ದ ವೆಬ್‌ಸೈಟ್‌ ಬೆಂಗಳೂರಿನಲ್ಲಿ ಬ್ರಾಂಚ್ ಹೊಂದಿತ್ತು ಎಂದು ತಿಳಿದುಬಂದಿದೆ.

ಸದ್ಯ ಬಂಧಿತರಿಂದ ಮೂರು ಮೊಬೈಲ್, ಒಂದು ಲ್ಯಾಪ್‌ಟಾಪ್, ಕ್ರೆಡಿಟ್ ಕಾರ್ಡ್ ಸೇರಿ ಹಲವು ದಾಖಲೆಗಳ ವಶಕ್ಕೆ ಪಡೆದಿದ್ದು, ಬಂಧಿತರನ್ನು ವೆಂಕಟೇಶ್, ಧರಣೇಶ್ ಮತ್ತು ಸಿದ್ದಾರ್ಥ್ ಎಂದು ಗುರುತಿಸಲಾಗಿದೆ.

Advertisements

ಕಳೆದ ಫೆಬ್ರವರಿ 3ರಂದು ಕೆಪಿಸಿಸಿ ಘಟಕದ ಸದಸ್ಯ ಶತಬೀಶ್‌ ಶಿವಣ್ಣ ನೀಡಿದ್ದ ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದ ಸೈಬರ್ ಪೊಲೀಸರು, ಹಾಸನ ಹಾಗೂ ಬೆಂಗಳೂರಲ್ಲಿ ಸ್ಥಾಪನೆಯಾಗಿದ್ದ ನಕಲಿ ವೆಬ್‌ಸೈಟ್ ಜಾಲವನ್ನು ಕೊನೆಗೂ ಪತ್ತೆ ಮಾಡಿದ್ದರು.

ಇದನ್ನು ಓದಿದ್ದೀರಾ? ನಟ ಅಕ್ಷಯ್ ಕುಮಾರ್ ಕೆನ್ನೆಗೆ ಬಾರಿಸಿದರೆ 10 ಲಕ್ಷ ಬಹುಮಾನ ಘೋಷಿಸಿದ ಬಲಪಂಥೀಯ ಮುಖಂಡ

ಈ ನಕಲಿ ವೆಬ್‌ಸೈಟ್‌ ಮೂಲಕ ಕಾಂಗ್ರೆಸ್ ವಿರುದ್ಧವೇ ಅವಹೇಳನಕಾರಿ ಬರಹಗಳ ಪೋಸ್ಟ್ ಮಾಡಲಾಗಿತ್ತು. ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ಅವಹೇಳನ ಮಾಡಿ ಪೋಸ್ಟ್​​ಗಳನ್ನು ಹಾಕಲಾಗಿತ್ತು. ಬಳಿಕ ಕೆಪಿಸಿಸಿ ಕಾನೂನು ಘಟಕದಿಂದ ಸೈಬರ್‌ ಠಾಣೆಗೆ ದೂರು ನೀಡಲಾಗಿತ್ತು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ ಡಾ. ಎಸ್ ಡಿ ಶರಣಪ್ಪ, ‘ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ಅದರ ಮೂಲಕ ಪಕ್ಷದ ನಾಯಕರಿಗೆ ಅಗೌರವ ತರುವಂತಹ ಹೇಳಿಕೆಗಳನ್ನು ಪ್ರಕಟಿಸಲಾಗುತ್ತಿದೆ ಎಂದು ಕಳೆದ ಫೆಬ್ರವರಿಯಲ್ಲಿ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ಬಂದಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಐಟಿ ಕಾಯಿದೆ ಹಾಗೂ ಐಪಿಸಿ ಸೆಕ್ಷನ್‌ನಡಿ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದರು’ ಎಂದು ತಿಳಿಸಿದ್ದಾರೆ.

‘ವಶಕ್ಕೆ ಪಡೆದಿದ್ದ ನಾಲ್ವರಲ್ಲಿ ಮೂವರ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಜಾಮೀನು ನೀಡಬಹುದಾದ ಅಪರಾಧವಾಗಿ ಪ್ರಕರಣ ದಾಖಲಾಗಿದ್ದರಿಂದ ಸದ್ಯ ಠಾಣಾ ಜಾಮೀನಿನ ಆಧಾರದಲ್ಲಿ ನೋಟಿಸ್ ನೀಡಿ ಕಳುಹಿಸಲಾಗಿದೆ’ ಎಂದು ಶರಣಪ್ಪ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X