ಕುಟುಂಬ ರಾಜಕಾರಣ ವಿರೋಧಿಸಿ ಮಾತನಾಡುವ ಮೋದಿ ಬೂಟಾಟಿಕೆ ಮನುಷ್ಯ : ಕಾಂಗ್ರೆಸ್‌ ಟೀಕೆ

Date:

Advertisements

ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಸತ್ ಕಲಾಪದಲ್ಲಿ ಭಾಗವಹಿಸಿ ದೇಶದ ಪ್ರಶ್ನೆಗಳಿಗೆ ಉತ್ತರಿಸುವುದಕ್ಕಿಂತ ದೇವೇಗೌಡರ ಕುಟುಂಬದೊಂದಿಗೆ ಸೇರಿ ರಾಜಕೀಯ ಲಾಭ ಹುಡುಕುವುದೇ ಪ್ರಾಶಸ್ತ್ಯದ ಕೆಲಸ ಎಂದು ಕಾಂಗ್ರೆಸ್‌ ಕುಟುಕಿದೆ.

ಈ ಕುರಿತು ಎಕ್ಸ್‌ನಲ್ಲಿ ಮೋದಿ ಅವರನ್ನು ಟೀಕಿಸಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, “ಭದ್ರತಾ ವೈಫಲ್ಯದಿಂದ ಸಂಸತ್ ಭವನ ಅಪಾಯದಲ್ಲಿದೆ, ವಿಪಕ್ಷ ಸಂಸದರ ಅನೈತಿಕ ಅಮಾನತಿನಿಂದ ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಎಂದು ಹರಿಹಾಯ್ದಿದೆ.

“ಕುಟುಂಬ ರಾಜಕಾರಣ ವಿರೋಧಿಸಿ ಬೂಟಾಟಿಕೆಯ ಮಾತಾಡುವ ಮೋದಿಯವರು ‘ದೇವೇಗೌಡರ ರಾಜಕೀಯ ಕುಟುಂಬ’ದೊಂದಿಗೆ ಪೋಸ್ ಕೊಡುವ ಮೂಲಕ ತಮ್ಮನ್ನು ತಾವೇ ವ್ಯಂಗ್ಯ ಮಾಡಿಕೊಳ್ಳುತ್ತಿದ್ದಾರೆ” ಎಂದು ಲೇವಡಿ ಮಾಡಿದೆ.

Advertisements

ನರೇಂದ್ರ ಮೋದಿ ಅವರೇ, ಬಹಳ ದಿನಗಳ ಬೇಡಿಕೆಯ ನಂತರ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಕ್ಕೆ ಧನ್ಯವಾದಗಳು. ಮಾಜಿ ಪ್ರಧಾನಿ ದೇವೇಗೌಡರನ್ನು ಕರೆಸಿಕೊಂಡು ಭೇಟಿಯಾಗಿದ್ದಕ್ಕೂ ಧನ್ಯವಾದಗಳು. ನಿಮ್ಮ ಹೊಸ ಬ್ರದರ್ ಕುಮಾರಸ್ವಾಮಿಯವರನ್ನು ಕರೆಸಿಕೊಂಡು ಭೇಟಿಯಾಗಿದ್ದಕ್ಕೂ ಧನ್ಯವಾದಗಳು. ನಿಮ್ಮ ಹೊಸ ಬ್ರದರ್‌ನ ಬ್ರದರ್ ರೇವಣ್ಣನವರನ್ನು ಹಾಗೂ ಅವರ ಮಗನನ್ನು ಭೇಟಿಯಾಗಿದ್ದಕ್ಕೂ ಧನ್ಯವಾದಗಳು. ಹೀಗೆಯೇ ಕರ್ನಾಟಕದ ಮರ್ಯಾದೆ ತೆಗೆದಿರುವ ನಿಮ್ಮ ಸಂಸದ ಪ್ರತಾಪ್‌ ಸಿಂಹನನ್ನು ‘ಕರೆಸಿಕೊಂಡು ಯಾಕಪ್ಪಾ ಸಂಸತ್ತಿನ ಭದ್ರತೆಯನ್ನು ಪರೀಕ್ಷೆ ಮಾಡಿದೆ? ಯಾಕಪ್ಪಾ ದಾಳಿಕೋರರೊಂದಿಗೆ ಕೈಜೋಡಿಸಿದೆ?’ ಎಂದು ಕೇಳುವುದು ಯಾವಾಗ” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಗಂದೂರು ಸೇತುವೆ | ಶಿಷ್ಟಾಚಾರ ಉಲ್ಲಂಘನೆ, ಕಾರ್ಯಕ್ರಮದಿಂದ ದೂರ ಉಳಿದ ರಾಜ್ಯ ಸರ್ಕಾರ

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ...

ಸಿದ್ದರಾಮಯ್ಯನವರೇ, ಸಾಮಾಜಿಕ ನ್ಯಾಯ ನಿಮ್ಮ ನುಡಿಯಲ್ಲಿದೆ, ಅದು ನಡೆಯಲ್ಲೂ ಇರಲಿ- ಪ್ರಕಾಶ್‌ ರಾಜ್‌

"ಸಾಮಾಜಿಕ ನ್ಯಾಯ ನಿಮ್ಮ ನುಡಿಯಲ್ಲಿದೆ, ಅದು ನಡೆಯಲ್ಲೂ ಇರಲಿ. ನಾಳೆ ರೈತರೊಂದಿಗೆ...

ದೇಶದ ಎರಡನೇ ಅತಿ ಉದ್ದದ ಕೇಬಲ್ ಸೇತುವೆ ರಾಜ್ಯದಲ್ಲಿ ಉದ್ಘಾಟನೆ

ಶರಾವತಿ ನದಿ ಹಿನ್ನೀರಿನ ಐತಿಹಾಸಿಕ ಸಿಗಂದೂರು ಸೇತುವೆಯನ್ನು ಕೇಂದ್ರ ಭೂ ಸಾರಿಗೆ...

ಧರ್ಮಸ್ಥಳ ಸಾವು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ಕೋರಿ ಸಿಎಂಗೆ ಮಹಿಳಾ ಆಯೋಗ ಪತ್ರ

ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ...

Download Eedina App Android / iOS

X