ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಪಡೆಯುವ ನಿಟ್ಟಿನಲ್ಲಿ ಕರ್ನಾಟಕ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಸರ್ಕಾರ ಬಂದು ಎಂಟು ತಿಂಗಳು ಕಳೆದರೂ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಕಾರ್ಯಕರ್ತರಿಗೆ ಹುದ್ದೆಗಳನ್ನು ಕೊಟ್ಟಿಲ್ಲ ಎಂಬ ಅಸಮಾಧಾನ ಕಾಂಗ್ರೆಸ್ ಪಾಳಯದಲ್ಲಿ ಭುಗಿಲೆದ್ದ ಮಧ್ಯೆಯೇ ಕೊನೆಗೂ ನಿಗಮ, ಮಂಡಳಿ ಪಟ್ಟಿಯು ಬಿಡುಗಡೆಗೊಂಡಿದೆ. ಈ ಪಟ್ಟಿಯಲ್ಲಿ ಒಟ್ಟು 34 ಶಾಸಕರಿಗೆ ಮಣೆ ಹಾಕಲಾಗಿದೆ. 34 ಶಾಸಕರನ್ನು ವಿವಿಧ ಮಂಡಳಿಗಳ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಅಧಿಕೃತ ಸುತ್ತೋಲೆಯನ್ನು ಸಿಎಂ ಕಚೇರಿ ಜ.26ರ ಸಂಜೆ ಹೊರಡಿಸಿದೆ.
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ಗೆ ಸೇರಿದ ಬಳಿಕ ವಿಧಾನ ಪರಿಷತ್ ಸ್ಥಾನ ಪಡೆದುಕೊಂಡಿದ್ದ ಜಗದೀಶ್ ಶೆಟ್ಟರ್ ಅವರು, ನಿನ್ನೆ(ಜ.25) ಮತ್ತೆ ಬಿಜೆಪಿ ಸೇರಿದ ನಡುವೆಯೇ ಇಂದು ನಿಗಮ, ಮಂಡಳಿ ಪಟ್ಟಿಯಾಗಿದೆ.
“ವಿಧಾನಸಭಾ ಸದಸ್ಯರುಗಳನ್ನು ಅವರ ಹೆಸರಿನ ಮುಂದೆ ನಮೂದಿಸಿರುವ ನಿಗಮ, ಮಂಡಳಿಗಳಿಗೆ ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳೊಂದಿಗೆ ಹಾಗೂ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಮುಂದಿನ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಲಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
ಪಟ್ಟಿಯಲ್ಲಿಲ್ಲ ವಿಧಾನ ಪರಿಷತ್ ಹಾಗೂ ಹೊಸ ಶಾಸಕರು!
ಈಗ ಅಧಿಕೃತವಾಗಿ ಬಿಡುಗಡೆಗೊಂಡಿರುವ ಪಟ್ಟಿಯಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಸ್ಥಾನ ನೀಡಿಲ್ಲ. ಅಂದಾಜು 4-5 ವಿಧಾನ ಪರಿಷತ್ ಸದಸ್ಯರಿಗೆ ಸ್ಥಾನ ಲಭಿಸುವ ಸೂಚನೆ ಇತ್ತಾದರೂ, ಅಂತಿಮ ಪಟ್ಟಿಯಲ್ಲಿ ಹೆಸರು ಕಂಡುಬಂದಿಲ್ಲ.
ಪಟ್ಟಿ ಹೀಗಿದೆ.