ಸಿಎಂ ವಿರುದ್ಧ ಎಫ್ಐಆರ್ ಆದರೆ ನಮಗೆ ಯಾವ ಮುಜುಗರ ಇಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾದರೆ ಯಾವ ಮುಜುಗರವೂ ಆಗುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಉತ್ತರಿಸಿದ ಅವರು, “ದ್ವೇಷದ ರಾಜಕಾರಣಕ್ಕೆ ದಾರಿ ಆಗಬಾರದು ಎನ್ನುವ ಕಾರಣಕ್ಕೆ ಸಿಬಿಐಗೆ ನೀಡಿದ್ದ ಮುಕ್ತ ಅನುಮತಿ ಅಧಿಕಾರವನ್ನು ಹಿಂದಕ್ಕೆ ತೆಗದುಕೊಳ್ಳಲಾಗಿದೆ” ಎಂದು ಹೇಳಿದರು.

“ಗಂಭೀರ ಪ್ರಕರಣಗಳು ಎದುರಾದಾಗ ನಮ್ಮ ಅಧಿಕಾರಿಗಳು ತನಿಖೆಗೆ ಸೂಕ್ತರಲ್ಲ ಎನ್ನುವ ಅಭಿಪ್ರಾಯ ಬಂದರೆ, ಆ ವೇಳೆ ಸಿಬಿಐಗೆ ನೀಡುವ ಬಗ್ಗೆ ಚಿಂತನೆ ಮಾಡುತ್ತೇವೆ” ಎಂದರು.

Advertisements

ಕಾಂಗ್ರೆಸ್ ಬ್ಯೂರೋ ಏಜೆನ್ಸಿ ಎಂದವರು ಯಾರು?

“ಸಿಬಿಐ ಬಗ್ಗೆ ಜನತಾದಳದ ದೇವೇಗೌಡರು, ಕುಮಾರಸ್ವಾಮಿ ಏನು ಮಾತನಾಡಿದ್ದರು ಎಂಬುದು ಎಲ್ಲರಿಗೂ ತಿಳಿದಿದೆ. ಬಿಜೆಪಿಯವರು ಸಿಬಿಐ ಅನ್ನು ಕಾಂಗ್ರೆಸ್ ಬ್ಯೂರೋ ಆಫ್ ಏಜೆನ್ಸಿ ಎಂದು ಕರೆದಿದ್ದರು. ಸಿಬಿಐಗೆ ಯಾವ, ಯಾವ ಪ್ರಕರಣಗಳನ್ನು ನೀಡಲಾಗಿತ್ತು. ಅವುಗಳು ಏನಾಗಿವೆ, ಐಎಂಎ ಪ್ರಕರಣ ಏನಾಗಿದೆ ಎಂಬುದರ ಬಗ್ಗೆ ನಾನು ಚರ್ಚಿಸುವುದಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರ ರಕ್ಷಣೆಗೆ ಹಾಗೂ ಸಿಬಿಐ ತನಿಖೆ ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ವಿರೋಧ ಪಕ್ಷದವರು ಮಾತನಾಡಿಕೊಳ್ಳಲಿ, ಇದರ ಬಗ್ಗೆ ಬೇರೆ ಸಮಯದಲ್ಲಿ ಮಾತನಾಡೋಣ” ಎಂದರು.

ನನ್ನ ಕಚೇರಿಗೆ ಡಿನೋಟಿಫಿಕೇಷನ್ ಕಡತ ಬಂದಿತ್ತು

ರಾಜ್ಯಪಾಲರ ಪತ್ರಕ್ಕೆ ಸಂಪುಟದಲ್ಲಿ ಒಪ್ಪಿಗೆ ಪಡೆದು ಉತ್ತರ ನೀಡಬೇಕು ಎನ್ನುವ ನಿರ್ಣಯದ ಬಗ್ಗೆ ಕೇಳಿದಾಗ, “ಅನೇಕ ವಿಚಾರಗಳನ್ನು ಮುಖ್ಯಮಂತ್ರಿಗಳು ಹಾಗೂ ಕ್ಯಾಬಿನೆಟ್ ಗಮನಕ್ಕೆ ತರದೇ ತೀರ್ಮಾನ ಮಾಡಲು ಆಗುತ್ತದೆಯೇ? ಆದ ಕಾರಣ ರಾಜ್ಯಪಾಲರ ಪತ್ರಕ್ಕೆ ಸಂಪುಟದಲ್ಲಿ ಒಪ್ಪಿಗೆ ಪಡೆದು ಉತ್ತರ ನೀಡಬೇಕು ಎನ್ನುವ ತೀರ್ಮಾನ ತೆಗೆದುಕೊಂಡಿದ್ದೇವೆ” ಎಂದು ಹೇಳಿದರು.

“ನನಗೂ ನೀತಿ, ನಿಯಮಗಳ ಬಗ್ಗೆ ಸ್ವಲ್ಪ ತಿಳುವಳಿಕೆಯಿದೆ. ನಾನು ವಿದ್ಯಾವಂತ, ಬುದ್ದಿವಂತ ಅಲ್ಲದಿದ್ದರೂ ಪ್ರಜ್ಞಾವಂತಿಕೆ ಹೊಂದಿದ್ದೇನೆ. ಪ್ರತಿಯೊಂದಕ್ಕೂ ನಿಯಮವಿರುತ್ತದೆ. ರಾಜ್ಯಪಾಲರ ಕಚೇರಿಗೆ ಮುಖ್ಯ ಕಾರ್ಯದರ್ಶಿಗಳ ಮೂಲಕ ಉತ್ತರ ಹೋಗಬೇಕು” ಎಂದರು.

“ನನ್ನ ಕಚೇರಿಗೆ ಕೆಲವು ದಿನಗಳ ಹಿಂದೆ ಡಿನೋಟಿಫಿಕೇಷನ್ ಅಥವಾ ರೀಡೂ ಸಂಬಂಧಪಟ್ಟ ಕಡತ ಬಂದಿತ್ತು. ನನ್ನ ಕಾರ್ಯದರ್ಶಿ ನನಗೆ ಕಳುಹಿಸಿದ್ದರು. ಇದಕ್ಕೆ ನಾನು, “ಬೇರೆಯವರಿಗೆ ಉತ್ತರ ಕೊಡಲು ಆಗುವುದಿಲ್ಲ. ಕ್ಯಾಬಿನೆಟ್ ನಲ್ಲಿ ಈ ಹಿಂದೆ ತೀರ್ಮಾನವಾದಂತೆ, ಈ ಕುರಿತು ಸಂಪುಟ ಉಪ ಸಮಿತಿ ರಚನೆಯಾಗಿದೆ, ಅಲ್ಲಿಗೆ ಕಳುಹಿಸಿ ಎಂದೆ” ಎಂದು ತಿಳಿಸಿದರು.

ರಾಜಭವನದ ಆಂತರಿಕ ವಿಚಾರ ನನಗೆ ಗೊತ್ತಿಲ್ಲ

ರಾಜಭವನದಿಂದ ಮಾಹಿತಿ ಸೋರಿಕೆ ಬಗ್ಗೆ ಬಿಜೆಪಿ ಆರೋಪದ ಮಾಡುತ್ತಿದೆ ಎಂದಾಗ, “ಇದು ರಾಜಭವನದ ಆಂತರಿಕ ವಿಚಾರ. ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ಲೋಕಾಯುಕ್ತ ಕಚೇರಿಯಲ್ಲಿ ಏನು ನಡೆಯುತ್ತಿದೆ ಎನ್ನುವ ಬಗ್ಗೆಯೂ ಮಾಹಿತಿಯಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X