ಎಡಿಜಿಪಿ ಚಂದ್ರಶೇಖರ್ ದೂರು ಆಧರಿಸಿ ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು‌ ವಿರುದ್ಧ ಎಫ್‌ಐಆರ್‌

Date:

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಲೋಕಾಯಕ್ತ ಎಸ್‌ಐಟಿ ವಿಭಾಗದ ಮುಖ್ಯಸ್ಥ, ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರು ಆಧರಿಸಿ
ಸಂಜಯನಗರ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

- Advertisement -

ಎಡಿಜಿಪಿ ಚಂದ್ರಶೇಖರ್ ನೀಡಿದ ದೂರು ಆಧರಿಸಿ ಎನ್‌ಸಿಆ‌ರ್ ದಾಖಲಿಸಿಕೊಂಡಿದ್ದ ಪೊಲೀಸರು, 42ನೇ ಎಸಿಎಂಎಂ ನ್ಯಾಯಾಲಯದ ಆದೇಶದ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಬೆದರಿಕೆ ಹಾಗೂ ಸುಳ್ಳು ಆರೋಪಕ್ಕೆ ಸಂಬಂಧಿಸಿ ಎಸ್‌ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ವಿರುದ್ಧ ತಿಂಗಳ ಹಿಂದೆ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

“ಕುಮಾರಸ್ವಾಮಿ ಅವರು ಈ ಹಿಂದೆ ಪತ್ರಿಕಾಗೋಷ್ಠಿ ನಡೆಸಿ ನನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪ ಮಾಡಿದ್ದರು. ಬೆದರಿಕೆ ಹಾಕಿದ್ದರು. ಕರ್ನಾಟಕ ರಾಜ್ಯ ಕೇಡರ್‌ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಬೆದರಿಸಿದ್ದರು. ನನ್ನ ಕುಟುಂಬದ ವಿರುದ್ಧವೂ ಸುಳ್ಳು ಆಪಾದನೆ ಮಾಡಿದ್ದರು” ಎಂದು ಚಂದ್ರಶೇಖರ್ ದೂರಿನಲ್ಲಿ ಉಲ್ಲೇಖಿಸಿದ್ದರು.

ಈ ಸುದ್ದಿ ಓದಿದ್ದೀರಾ? ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇಂದು ಮತದಾನ, ಮತದಾರರಿಗೆ 10 ಲಕ್ಷ ಉಡುಗೊರೆ

ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 16/2014 ಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಾಕ್ಷ್ಯಾಧಾರಗಳು ಲಭ್ಯವಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರ ಅನುಮತಿ ಕೋರಿದ್ದೆ. ಈ ಹಿನ್ನೆಲೆಯಲ್ಲಿ ಸೆ.28 ಹಾಗೂ ಸೆ.29ರಂದು ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ತನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಪೊಲೀಸ್ ದೂರಿನಲ್ಲಿ ತಿಳಿಸಿದ್ದರು.

ಈ ದೂರಿಗೆ ಸಂಬಂಧಿಸಿ ಕೇಂದ್ರ ಸಚಿವರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯದ ಅನುಮತಿ ಕೋರಲಾಗಿತ್ತು. ಇದೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ. ಅದರಂತೆ ಸಂಜಯ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್.ಐ.ಆ‌ರ್.ನಲ್ಲಿ ಕುಮಾರಸ್ವಾಮಿ ಎ1, ನಿಖಿಲ್ ಎ2 ಹಾಗೂ ಸುರೇಶ್ ಬಾಬು ಎ3 ಆರೋಪಿ ಎಂದು ಉಲ್ಲೇಖಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...

‘ನಾನೇ ಬುರುಡೆ ಒಡೆದಿದ್ದು’ ಎಂದಾತನಿಗೆ ಜಾಮೀನು; ಪುರಾವೆ ಇಲ್ಲದಿದ್ದರೂ ವರ್ಷಗಳಿಂದ ಜೈಲಿನಲ್ಲಿದ್ದಾರೆ ಹೋರಾಟಗಾರರು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ...