ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್

Date:

ಕಾಶ್ಮೀರದ ಚುನಾವಣಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

- Advertisement -

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾ ಪ್ರದೇಶದಲ್ಲಿ ಮೆಹಬೂಬಾ ಮುಫ್ತಿ ಮತ್ತು ಅವರ ಪಕ್ಷದ ಕಾರ್ಯಕರ್ತರು ಪ್ರತಿಭಟನಾ ಧರಣಿ ನಡೆಸಿದ್ದು ಸೆಕ್ಷನ್ 144 ಅನ್ನು ಉಲ್ಲಂಘಿಸಿದ ಕಾರಣ ಮೆಹಬೂಬಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಮೆಹಬೂಬಾ ಮುಫ್ತಿ ಅವರು ‘ತಮಾಷೆ’ ಎಂದು ಬಣ್ಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ತಮಾಷೆಯಾಗಿದೆ. ಸತ್ಯವನ್ನು ಮಾತನಾಡಿದ್ದಕ್ಕಾಗಿ ಪಿಡಿಪಿ ತೆರಬೇಕಾದ ಬೆಲೆ ಇದಾಗಿದೆ. ಮತದಾನ ನಡೆಯುವುದಕ್ಕೂ ಕೆಲವೇ ಗಂಟೆಗಳ ಮುನ್ನ ನೂರಾರು ಪಿಡಿಪಿ ಪೋಲಿಂಗ್ ಏಜೆಂಟ್‌ಗಳನ್ನು ಮತ್ತು ಕಾರ್ಯಕರ್ತರನ್ನು ಬಂಧನ ಮಾಡಿರುವುದರ ವಿರುದ್ಧವಾಗಿ ನಾವು ಪ್ರತಿಭಟನೆ ನಡೆಸಿದ್ದೆವು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಅದಾನಿ, ಅಂಬಾನಿಗೆ ಸಹಾಯ ಮಾಡಲು ಮೋದಿಯವರನ್ನು ಆ ಪರಮಾತ್ಮನೇ ಕಳುಹಿಸಿದ್ದು: ರಾಹುಲ್ ಲೇವಡಿ

“ನಮ್ಮ ಕಾರ್ಯಕರ್ತರನ್ನು ಬಂಧನ ಮಾಡಿ ತೃಪ್ತರಾಗದ ಆಡಳಿತವು ನಮ್ಮ ಮತದಾರರಲ್ಲಿ ಭಯ ಹುಟ್ಟಿಸಲು ಮತ್ತು ಮತದಾನ ಮಾಡುವುದನ್ನು ತಡೆಯಲು ಪಿಡಿಪಿಯ ಭದ್ರಕೋಟೆ ಕಾರ್ಡನ್‌ನಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿದೆ” ಎಂದು ಮೆಹಬೂಬಾ ಮುಫ್ತ ಆರೋಪಿಸಿದರು.

“ತನ್ನ ಪಕ್ಷದ ಕಾರ್ಯಕರ್ತರು ಮತ್ತು ಮತಗಟ್ಟೆ ಏಜೆಂಟರನ್ನು ಬಂಧಿಸಿರುವುದನ್ನು ವಿರೋಧಿಸಿ ಪಿಡಿಪಿ ಪ್ರತಿಭಟಿಸಿದೆ. ಆದರೆ ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಪಿಡಿಪಿ ಕಾರ್ಯಕರ್ತರ ಬೃಹತ್ ಗುಂಪು ಮುಖ್ಯ ರಸ್ತೆಯನ್ನು ತಡೆದು ಒಂದು ಗಂಟೆಗೂ ಅಧಿಕ ಕಾಲ ಪ್ರತಿಭಟಿಸಿದೆ. ಇದು ಕ್ಷೇತ್ರದಲ್ಲಿ ವಿಧಿಸಲಾದ ಸೆಕ್ಷನ್ 144 ಸಿಆರ್‌ಪಿಸಿ ಉಲ್ಲಂಘನೆಯಾಗಿದೆ” ಎಂದು ಎಫ್‌ಐಆರ್ ಹೇಳಿದೆ.

ಚುನಾವಣಾ ಕಾರಣ ಮೇ 23ರಂದು ಸಂಜೆ 6 ರಿಂದ ಮೇ 25 ರ ಸಂಜೆ 6ರವರೆಗೆ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ಸೆಕ್ಷನ್‌ ಕಾನೂನುಬಾಹಿರ ಸಭೆ ಮತ್ತು ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಮೆರವಣಿಗೆ ಮಾಡುವುದಕ್ಕೆ ನಿಷೇಧ ಹೇರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...