ಪಕ್ಷ ವಿರೋಧಿ ಚಟುವಟಿಕೆ | ಅಸ್ಸಾಂ ಯುವ ಕಾಂಗ್ರೆಸ್‌ ಮುಖ್ಯಸ್ಥೆ ಅಂಕಿತಾ ದತ್ತ ಉಚ್ಚಾಟನೆ

Date:

Advertisements
  • ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್‌ ಮೇಲೆ ಅಂಕಿತಾ ಆರೋಪ
  • ಅಂಕಿತಾ ವಿರುದ್ಧ ನೋಟಿಸ್‌ ಜಾರಿ ಮಾಡಿದ ಬಿ ವಿ ಶ್ರೀನಿವಾಸ್‌

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಅಸ್ಸಾಂನ ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷೆ ಸ್ಥಾನದಿಂದ ಅಂಕಿತಾ ದತ್ತ ಅವರನ್ನು ಉಚ್ಚಾಟಿಸಲಾಗಿದೆ.

ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್‌ ಅವರ ಮೇಲೆ ಅಂಕಿತಾ ಅವರು ಕಿರುಕುಳದ ಆರೋಪ ಮಾಡಿದ ಕೆಲವು ದಿನಗಳ ಈ ಬೆಳವಣಿಗೆ ನಡೆದಿದೆ.

ಈ ಕುರಿತು ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಶನಿವಾರ (ಏಪ್ರಿಲ್ 22) ಪ್ರಕಟಣೆ ಹೊರಡಿಸಿದೆ.

Advertisements

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದಲ್ಲಿ ಅಂಕಿತಾ ದತ್ತ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದು, ಆರು ವರ್ಷದ ಅವಧಿವರೆಗೂ ಈ ಆದೇಶ ಇರಲಿದೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ಹೇಳಿದೆ.

ಅಂಕಿತಾ ಅವರು ಶ್ರೀನಿವಾಸ್ ವಿರುದ್ಧ ಟ್ವೀಟ್‌ನಲ್ಲಿ ಆರೋಪಿಸಿದ್ದರು. ಶ್ರೀನಿವಾಸ್‌ ಒಬ್ಬ ಕಾಮದೃಷ್ಟಿ ಹೊಂದಿದ, ಮಹಿಳೆಯರ ಬಗ್ಗೆ ಪೂರ್ವಾಗ್ರಹಪೀಡಿತ ವ್ಯಕ್ತಿ ಎಂದು ಅವರು ಧೂಷಿಸಿದ್ದರು.

“ನಾನೊಬ್ಬ ಮಹಿಳಾ ನಾಯಕಿ, ನಾನೇ ಕಿರುಕುಳಕ್ಕೆ ಒಳಗಾದರೆ ಪಕ್ಷಕ್ಕೆ ಸೇರುವಂತೆ ಇತರ ಮಹಿಳೆಯರನ್ನು ಹೇಗೆ ಬೆಂಬಲಿಸಲಿ” ಎಂದು ಟ್ವೀಟ್‌ನಲ್ಲಿ ಅಂಕಿತಾ ಅವರು ಹೇಳಿದ್ದರು.

ಈ ಕುರಿತು ಅಂಕಿತಾ ಸರಣಿ ಟ್ವೀಟ್‌ಗಳನ್ನು ಮಾಡಿದ್ದರು. ಶ್ರೀನಿವಾಸ್‌ ತಮ್ಮ ಮೇಲೆ ಲಿಂಗ ತಾರತಮ್ಯದ ಮೂಲಕ ಆರು ತಿಂಗಳ ಕಾಲ ನಿರಂತರ ಕಿರುಕುಳ ನೀಡಿದ್ದಾರೆ ಎಂದು ಟ್ವೀಟ್‌ನಲ್ಲಿ ಆರೋಪಿಸಿದ್ದರು.

ಅಲ್ಲದೆ ಕೆಲವು ತಿಂಗಳ ಹಿಂದೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದರೂ ಅವರು ಕ್ರಮ ಕೈಗೊಂಡಿಲ್ಲ ಎಂದು ಅಂಕಿತಾ ದತ್ತ ದೂರಿದರು.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿಯಿಂದ ಇಂದು ಅಧಿಕೃತ ಬಂಗಲೆ ತೆರವು

“ನಾನು ಶ್ರೀನಿವಾಸ್ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಕಾಯುತ್ತಿದ್ದೆ” ಎಂದು ಅಂಕಿತಾ ಹೇಳಿದ್ದರು.

ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದ ಶ್ರೀನಿವಾಸ್, ಅಂಕಿತಾ ಅವರಿಗೆ ನೋಟಿಸ್ ನೀಡಿದ್ದರು. ಅಂಕಿತಾ ಅವರು ತಮ್ಮ ಹೇಳಿಕೆಗಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು.

ಅಂಕಿತಾ ಅವರು ಅಮ್ಗುರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X