ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅನ್ನು ಹೊಗಳಿ ‘ಜೈ ಶ್ರೀರಾಮ್’ ಎಂದ ಕುಮಾರಸ್ವಾಮಿ!

Date:

ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನಡೆಸುತ್ತಿರುವ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕ್ರೀಡೋತ್ಸವದಲ್ಲಿ ಅತಿಥಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭಾಗವಹಿಸಿದ್ದರು.

- Advertisement -

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಲ್ಲಡ್ಕ ಪ್ರಭಾಕರ್ ಭಟ್ ಅನ್ನು ಹೊಗಳಿದ್ದಲ್ಲದೇ ‘ಜೈ ಶ್ರೀರಾಮ್’ ಘೋಷಣೆಯೊಂದಿಗೆ ಮಾತು ಮುಗಿಸಿದ ಪ್ರಸಂಗ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಹಿಂದೆ ಟೀಕೆ ಮಾಡಿದ್ದೆ, ಈಗ ಮನಸ್ಸು ಪರಿವರ್ತನೆ ಮಾಡಿದ್ದೇನೆ. ಹಿಂದೆ ಕಲ್ಲಡ್ಕ ಪ್ರಭಾಕರ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ಇಂದು ನನ್ನ ಕಣ್ಣು ತೆರೆದಿದೆ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಹಿಂದೆ ಒಂದು ರೀತಿಯಾಗಿ ಮಾತನಾಡುತ್ತಿದ್ದ ಕುಮಾರಸ್ವಾಮಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಹೇಗೆ ಎಂದು ಕೆಲವರು ಯೋಚಿಸಬಹುದು. ಅಂದು ನನ್ನನ್ನು ಕೆಲವರು ದಾರಿ ತಪ್ಪಿಸಿದ್ದರು. ನಾನು ತಪ್ಪು ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ” ಎಂದರು.

“ಈ ಕಾರ್ಯಕ್ರಮ ಜೀವನದ ಅವಿಸ್ಮರಣೀಯ ಕ್ಷಣ. ಇಲ್ಲಿ ಅತ್ಯುತ್ತಮ ಶಿಕ್ಷಣ ಕೊಡಲಾಗುತ್ತಿದೆ. ದೇಶದ ಕೀರ್ತಿ ಎತ್ತಿ ಹಿಡಿದ ವಿಜ್ಞಾನಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಗುರುಕುಲ ಪರಂಪರೆಯನ್ನು ಸಂಸ್ಕೃತಿಗಳನ್ನು ನೀಡಲಾಗುತ್ತಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಉತ್ತಮ ಶಿಸ್ತಿನ ಬದುಕನ್ನು ಇಲ್ಲಿ ಕಲಿಸಿ ಕೊಡಲಾಗುತ್ತದೆ. ಮಾನವೀಯತೆ ವಿಕಸನವನ್ನು ಇಲ್ಲಿ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಬಾರದೇ ಇದ್ದರೆ ಜೀವನದಲ್ಲಿ ದೊಡ್ಡ ನಷ್ಟ ಉಂಟಾಗುತ್ತಿತ್ತು. ಗ್ರಾಮೀಣ ಪ್ರದೇಶದ ಕಲೆಗಳನ್ನು ಮಕ್ಕಳಲ್ಲಿ ಮಾಡಿಸಿದ್ದಾರೆ” ಎಂದರು.

“ಚಂದ್ರಯಾನ ಉಡಾವಣೆಯನ್ನು ಕಣ್ಣಿಗೆ ಕಟ್ಟುವ ಹಾಗೆ ತೋರಿಸಿದ್ದೀರಿ. ಮಕ್ಕಳಿದ್ದಾಗ ರಾಮನ ಭಜನೆ ಮಾಡಿದನ್ನು ಇವತ್ತು ಮತ್ತೆ ನೆನಪಿಸಿದ್ದೀರಿ. ಪ್ರಭಾಕರ ಭಟ್ ಬದುಕಿನ ಒಳ್ಳೆಯ ನಡವಳಿಕೆ ಕಲಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಕಣ್ಣು ತೆರೆಸುತ್ತೀದ್ದೀರಿ” ಎಂದು ಹೇಳಿದರು.

ತನ್ನ ಮಾತಿನ ಕೊನೆಯಲ್ಲಿ ಕುಮಾರಸ್ವಾಮಿ ಅವರು “ಜೈ ಶ್ರೀರಾಮ್” ಎಂದು ಘೋಷಣೆ ಕೂಗುವ ಎಲ್ಲರ ಹುಬ್ಬೇರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಭಾಗವಹಿಸಿದ್ದರು.

ಕುಮಾರಸ್ವಾಮಿ ಕಾಲೆಳೆದ ನೆಟ್ಟಿಗರು
ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಹೊಗಳಿ ಅಟ್ಟಕ್ಕೇರಿಸಿರುವ ಕುಮಾರಸ್ವಾಮಿ ಅವರು, ಈಗ ಸೋಷಿಯಲ್ ಮೀಡಿಯಾಗಳಲ್ಲಿ ಟ್ರೋಲರ್‌ಗಳಿಗೆ ಆಹಾರವಾಗಿದ್ದಾರೆ.

“ಇದೆಲ್ಲವೂ ಜೆಡಿಎಸ್ ಪಕ್ಷವು ಲೋಕಸಭಾ ಚುನಾವಣೆಗಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಪರಿಣಾಮವಷ್ಟೇ. ಕುಮಾರಸ್ವಾಮಿ ಬಿಜೆಪಿಯಂತೆ ಹಿಂದುತ್ವದ ಜಪ ಮಾಡ್ತಿದ್ದಾರೆ. ಇವೆಲ್ಲದರ ವ್ಯಾಲಿಡಿಟಿ ಲೋಕಸಭಾ ಚುನಾವಣೆಯ ಫಲಿತಾಂಶ ಬೀಳುವವರೆಗೆ ಮಾತ್ರ. ದಯವಿಟ್ಟು ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಹೆಸರನ್ನು ಜೆಡಿಕೆ ಮಾಡಿ. ಜೆಡಿಎಸ್ ಅಂದರೆ ಜಾತ್ಯಾತೀತ ಜನತಾದಳ, ಜೆಡಿಕೆ ಅಂದರೆ ಜನತಾದಳ ಕೋಮುವಾದ. ಹಾಗಾಗಿ, ಶೀಘ್ರವೇ ಬದಲಾಯಿಸಿ” ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

surya

ಕುಮಾರಸ್ವಾಮಿ ಫೋಟೋ ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ಸೂರ್ಯ ಮುಕುಂದರಾಜ್, “ಅಧಿಕೃತವಾಗಿ ಕುಮಾರಸ್ವಾಮಿ ಅವರನ್ನು ಸಂಘಿಗಳು ಮನೆ ತುಂಬಿಸಿಕೊಂಡಿದ್ದಾರೆ” ಎಂದು ಕಾಲೆಳೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...

ಬಂಗಾಳದ 252 ಮದರಸಾಗಳು ಬಂದ್; ಭಯೋತ್ಪಾದಕರ ಆಶ್ರಯತಾಣ ಎಂದ ಸಚಿವ: ಬಿಜೆಪಿ ಸರ್ಕಾರಕ್ಕೆ ಮುಸ್ಲಿಮರೇ ಗುರಿಯೇ?

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಮದರಸಾಗಳ...

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...