ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನ

Date:

Advertisements

ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದ್ದ ಹಿರಿಯ ಬುಡಕಟ್ಟು ನಾಯಕ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೇನ್ ಸೋಮವಾರ ನಿಧನರಾಗಿದ್ದಾರೆ.

ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಜಾರ್ಖಂಡ್‌| ಶಿಬು ಸೊರೇನ್‌ ಸೊಸೆಯಂದಿರ ನಡುವೆ ಲೋಕಸಭೆ ಚುನಾವಣೆ ಜಿದ್ದಾಜಿದ್ದಿ

Advertisements

ಈ ಬಗ್ಗೆ ಶಿಬು ಸೊರೇನ್ ಅವರ ಪುತ್ರ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ದೃಢಪಡಿಸಿದ್ದಾರೆ. ಶಿಬು ಅವರು ಜೂನ್ ಕೊನೆಯ ವಾರದಲ್ಲಿ ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.

‘ಗುರೂಜಿ’ ಎಂದೇ ಪ್ರಸಿದ್ಧರಾದ ಸೊರೇನ್ ಅವರು ಪ್ರತ್ಯೇಕ ಜಾರ್ಖಂಡ್ ರಾಜ್ಯಕ್ಕಾಗಿ ನಡೆದ ಚಳವಳಿಯಲ್ಲಿ ಪ್ರಮುಖ ವ್ಯಕ್ತಿ. ಬುಡಕಟ್ಟು ಮತ್ತು ಹಿಂದುಳಿದ ಸಮುದಾಯಗಳ ಹಕ್ಕುಗಳನ್ನು ಪ್ರತಿಪಾದಿಸುತ್ತಾ ಸಂಘಟನೆ ಕಟ್ಟಿಕೊಂಡರು. ದಶಕಗಳ ಕಾಲ ಜಾರ್ಖಂಡ್ ಮತ್ತು ದೇಶದ ರಾಜಕೀಯದಲ್ಲಿ ಪ್ರಮುಖ ಶಕ್ತಿ ಎಂದು ಗುರುತಿಸಿಕೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X