ಮೊದಲ ಪಟ್ಟಿಯಲ್ಲಿಲ್ಲ ಮಾಜಿ ಸಚಿವ ಹೆಚ್‌ ಆಂಜನೇಯ ಹೆಸರು; ಗೊಂದಲಕ್ಕೀಡಾದ ಕಾರ್ಯಕರ್ತರು

Date:

  • ಚಿತ್ರದುರ್ಗ ಜಿಲ್ಲೆಯ 3 ಕ್ಷೇತ್ರಗಳಿಗೆ ಘೋಷಣೆಯಾಗದ ಟಿಕೆಟ್
  • ಹೊಸ ಹಾಗೂ ಯುವ ಅಭ್ಯರ್ಥಿಗಳಿಗೆ ಮಣೆ ಹಾಕುವ ಸಾಧ್ಯತೆ

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆಯಾಗಿದ್ದು, ಚಿತ್ರದುರ್ಗ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳಿಗೆ ಅದರಲ್ಲೂ ಸಿದ್ದರಾಮಯ್ಯನವರ ಆಪ್ತ ಹೆಚ್‌ ಆಂಜನೇಯ ಪ್ರತಿನಿಧಿಸುವ ಕ್ಷೇತ್ರಕ್ಕೆ ಟಿಕೆಟ್‌ ಘೊಷಣೆಯಾಗದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದಾರೆ.

ಮಾಜಿ ಸಚಿವ ಹೆಚ್‌ ಆಂಜನೇಯ ಸ್ಪರ್ಧಿಸುವ ಹೊಳಲ್ಕೆರೆ ಕ್ಷೇತ್ರಕ್ಕೆ ಮೊದಲನೇ ಪಟ್ಟಿಯಲ್ಲಿ ಟಿಕೆಟ್‌ ಘೋಷಣೆಯಾಗದೇ ಇರುವುದರಿಂದ ಸಿದ್ದರಾಮಯ್ಯನವರ ಆಪ್ತರಿಗೆ ಟಿಕೆಟ್‌ ಕೈ ತಪ್ಪುತ್ತಾ ಎನ್ನುವ ಆತಂಕ ಸೃಷ್ಟಿಯಾಗಿದೆ.

ಇದೇ ಕ್ಷೇತ್ರಕ್ಕೆ ಹೆಚ್‌ ಆಂಜನೇಯ ಸೇರಿದಂತೆ ಹಲವರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ ಡಿ ಕೆ ಶಿವಕುಮಾರ್‌ ಆಪ್ತ ಹಾಗೂ ಕಾಂಗ್ರೆಸ್ ಕಾರ್ಮಿಕ ವಿಭಾಗದ ರಾಜ್ಯಾದ್ಯಕ್ಷ ಜಿ ಎಸ್‌ ಮಂಜುನಾಥ್ ಹಾಗೂ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯೆ ಸವಿತಾ ರಘು ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಮಾತ್ರವಲ್ಲದೇ, ಚಿತ್ರದುರ್ಗ ಹಾಗೂ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರಕ್ಕೂ ಟಿಕೆಟ್‌ ಘೋಷಣೆಯಾಗಿಲ್ಲ. ಚಿತ್ರದುರ್ಗದಲ್ಲಿ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಪಪ್ಪಿ ಹಾಗೂ ಮಾಜಿ ವಿಧಾನ ಪರಿಷತ್‌ ಸದಸ್ಯ ರಘು ಆಚಾರ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಕಾಂಗ್ರೆಸ್‌ ಹೈಕಮಾಂಡ್‌ ಚಿತ್ರದುರ್ಗದಲ್ಲಿ ಈ ಇಬ್ಬರಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಮತ್ತೊಬ್ಬರು ಬಂಡಾಯ ಏಳುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯ ಹೆಜ್ಜೆ ಇಡಲು ತೀರ್ಮಾನಿಸಿದೆ ಎನ್ನಲಾಗಿದೆ.

ಇನ್ನು ಮೊಳಕಾಲ್ಮೂರು ಕ್ಷೇತ್ರದ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ನೇರ್ಲಗುಂಟೆ ಎಸ್‌ ತಿಪ್ಪೇಸ್ವಾಮಿ ಕಳೆದ ತಿಂಗಳು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರಿಂದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗಿಶ್‌ ಬಾಬು ಅವರಿಗೆ ಟಿಕೆಟ್‌ ಪಕ್ಕಾ ಎನ್ನಲಾಗಿತ್ತು.

ಆದರೆ, ಈ ಕ್ಷೇತ್ರಕ್ಕೂ ಟಿಕೆಟ್‌ ಘೋಷಣೆ ಆಗದ ಹಿನ್ನೆಲೆಯಲ್ಲಿ ಬೇರೊಬ್ಬರಿಗೆ ಟಿಕೆಟ್ ಆಗುವ ಮಾತುಗಳು ಕೇಳಿಬಂದಿದೆ. ಕಾಂಗ್ರೆಸ್‌ ನಾಯಕ ವಿ ಎಸ್‌ ಉಗ್ರಪ್ಪ ಕೂಡ ಇದೇ ಕ್ಷೇತ್ರಕ್ಕೆ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದು, ಹೈಕಮಾಂಡ್‌ ಯಾರಿಗೆ ಮಣೆ ಹಾಕುತ್ತದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

ಒಟ್ಟಿನಲ್ಲಿ ಒಂದು ಕಾಲದಲ್ಲಿ ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಚಿತ್ರದುರ್ಗವನ್ನು ಮತ್ತೊಮ್ಮೆ ಕೈ ವಶಪಡಿಸಿಕೊಳ್ಳಲು ತೀರ್ಮಾನಿಸಿದ್ದು, ಮೊದಲ ಪಟ್ಟಿಯಲ್ಲಿ ಕೇವಲ 3 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಉಳಿದ 3 ಕ್ಷೇತ್ರಕ್ಕೆ ಹೊಸ ಹಾಗು ಯುವ ಅಭ್ಯರ್ಥಿಯನ್ನು ಹಾಕುವ ಚಿಂತನೆ ನಡೆಸಿದೆ ಎನ್ನಲಾಗಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುರೋಹಿತ ಕೂಡಾ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದೆಂದ ಸರ್ಕಾರಿ ಸಹಾಯವಾಣಿ!

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಭಾರತದ ಪೌರತ್ವ ಪಡೆಯುವವರಿಗೆ ಸ್ಥಳೀಯ...

ಮಮತಾ ಕುರಿತು ಅವಹೇಳನ; ಬಿಜೆಪಿ ಸಂಸದ ದಿಲೀಪ್ ಘೋಷ್ ವಿರುದ್ಧ ಎಫ್‌ಐಆರ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ್ದ...

ಕಾಂಗ್ರೆಸ್ ಬ್ಯಾಂಕ್ ಖಾತೆ ನಿರ್ಬಂಧ ಉಲ್ಲೇಖ; ಕೇಜ್ರಿವಾಲ್ ಬಂಧನದ ಬಗ್ಗೆ ಮತ್ತೆ ಹೇಳಿಕೆ ನೀಡಿದ ಅಮೆರಿಕಾ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಅಮೆರಿಕಾ ಹೇಳಿಕೆ ನೀಡಿದ...

ಬೆಂಗಳೂರು | ಸಂಬಳ ಕೊಡದ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ ಹಾಕಿದ ಸಿಬ್ಬಂದಿ

ಬೆಂಗಳೂರಿನ ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್‌ಗೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು,...