ಹಿಂದೂ ಕಾರ್ಯಕರ್ತರು ಒಂಟಿಯಾಗಿ ಓಡಾಡಬೇಡಿ: ಮಾಜಿ ಸಚಿವ ಶ್ರೀರಾಮುಲು

Date:

“ಹಿಂದೂ ಕಾರ್ಯಕರ್ತರು ಯಾರೂ ಒಬ್ಬೊಬ್ಬರೇ ಓಡಾಡಬೇಡಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೆ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ” ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಆರೋಪಿಸಿದ್ದಾರೆ.

- Advertisement -

ಇತ್ತೀಚೆಗೆ ಹತ್ಯೆಗೊಳಗಾದ ಮೈಸೂರು ಜಿಲ್ಲೆಯ ತಿ. ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್​ ಅವರ ನಿವಾಸಕ್ಕೆ ಬುಧವಾರ ಮಾಜಿ ಸಚಿವ ಶ್ರೀರಾಮುಲು ಭೇಟಿ ನೀಡಿದರು. “ಈ ವಿಚಾರವನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಹೋರಾಟ‌ ಮಾಡುತ್ತೇವೆ. ನಿಮ್ಮ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇನೆ. ಎಲ್ಲರಿಗೂ ಶಿಕ್ಷೆಯಾಗಬೇಕು, ನಾವೆಲ್ಲ ಹೋರಾಟ ಮಾಡುತ್ತೇವೆ” ಎಂದು ವೇಣುಗೋಪಾಲ್​ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬಳಿಕ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ವೇಣುಗೋಪಾಲ್‌ ಹಿಂದೂ ಸಂಘಟನೆಯಲ್ಲಿ ಕೆಲಸ‌‌ ಮಾಡುತ್ತಿದ್ದ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಡಿಯೂರಪ್ಪರನ್ನು ಯಾರು, ಯಾಕೆ ಕೆಳಗಿಳಿಸಿದರು ಎಂಬುದು ಇದುವರೆಗೂ ಗೊತ್ತಿಲ್ಲ: ಜಿ ಟಿ ದೇವೇಗೌಡ

“ಮೊಬೈಲ್​ ಪರಿಶೀಲಿಸಿದರೆ ಯಾರೆಲ್ಲ ಕರೆ ಮಾಡಿದ್ದಾರೆ ಗೊತ್ತಾಗುತ್ತೆ. ವೇಣುಗೋಪಾಲ ನಾಯಕ​ ಯಾವ ಕ್ರಿಮಿನಲ್ ಕೆಲಸ ಮಾಡಿಲ್ಲ. ಇದು ಧರ್ಮದ ವಿಚಾರವಾಗಿ ನಡೆದಿರುವ ಕೊಲೆ. ಧರ್ಮ ಅಂತ ಬಂದಾಗ ನಾವೆಲ್ಲ ಒಂದೇ. ಇದರಲ್ಲಿ ಯಾವುದೇ ಪಕ್ಷ ಅನ್ನುವುದು ಇಲ್ಲ. ಕೊಲೆಯ ಬಗ್ಗೆ ಸಂಪೂರ್ಣ ತನಿಖೆ ನಡೆದರೆ ಯಾರ ಕುಮ್ಮಕ್ಕಿನಿಂದ ಆಗಿರುವುದು ಎಂಬುದು ಗೊತ್ತಾಗುತ್ತೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಆಪರೇಷನ್ ಕಮಲ: ಬಿಜೆಪಿ ಸೇರಲಿದ್ದಾರೆ 17 ಎನ್‌ಸಿಪಿಐ ಸಂಸದರು ಎಂದ ಬಂಡಾಯ ಸಂಸದ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ನ್ಯಾಷನಲಿಸ್ಟ್...

ಉಮರ್ ಖಾಲಿದ್ ಕುರಿತ ‘ಕೈದಿ‌ ನಂ. 626710 ಈಸ್ ಪ್ರೆಸೆಂಟ್’ ಸಾಕ್ಷ್ಯಚಿತ್ರ ಪ್ರದರ್ಶನ ರದ್ದಾಗಿದ್ದು ಯಾಕೆ?

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (NLSIU) ಜವಾಹರಲಾಲ್...

‘ದೇಶದಲ್ಲಿ ಎಲ್ಲವೂ ಸರಿಯಿದೆ ಎನ್ನುತ್ತಾರೆ ಪ್ರಧಾನಿ, ಆದರೆ ಎಲ್ಲವೂ ದುಬಾರಿಯಾಗಿದೆ’

ದೇಶದಲ್ಲಿ ದಿನಬಳಕೆಯ ವಸ್ತುಗಳ ಬೆಲೆಯಲ್ಲಿನ ಗಣನೀಯ ಏರಿಕೆ ಮತ್ತು ಕುಸಿಯುತ್ತಿರುವ ನೈಜ...

ಸಿಎಂ ಯೋಗಿಗೆ ಪ್ರಶ್ನೆ ಕೇಳಿದ್ದಕ್ಕೆ ಕೆಲಸಕ್ಕೆ ಕುತ್ತು; ಆನ್‌ಲೈನ್ ನಿಂದನೆ, ಬುಲ್ಡೋಜರ್ ಬೆದರಿಕೆ: ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್ ಆರೋಪ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮಗೋಷ್ಠಿಯೊಂದರಲ್ಲಿ ಪ್ರಶ್ನೆ ಕೇಳಲು...