ಮಾಜಿ ಸಂಸದ ಬಿ ಎನ್‌ ಚಂದ್ರಪ್ಪ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ

Date:

ಚಿತ್ರದುರ್ಗದ ಮಾಜಿ ಸಂಸದ ಬಿ ಎನ್‌ ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರು ಇತ್ತೀಚಿಗೆ ಅಕಾಲಿಕ ಮರಣಕ್ಕೆ ತುತ್ತಾಗಿದ್ದರು.

ಈ ಕುರಿತು ಆದೇಶ ಹೊರಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌, “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿ ಎನ್‌ ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಪರಿಷತ್ ಸದಸ್ಯರಾಗುವ ಮೂಲಕ ಚಂದ್ರಪ್ಪ ಅವರು ತಮ್ಮ ರಾಜಕೀಯ ಜೀವನ ಆರಂಭಿಸಿದ್ದರು. ಬಿ ಎನ್‌ ಚಂದ್ರಪ್ಪ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆದರೆ, 2019ರಲ್ಲಿ ಸೋಲು ಅನುಭವಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಂಚಣಿದಾರರ ಮನೆ ಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣಪತ್ರ ಸಲ್ಲಿಸಲು ವ್ಯವಸ್ಥೆ

ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸುವ...

ತಹಶೀಲ್ದಾರ್ ಅಜಿತ್ ಕುಮಾರ್ ರೈ ಅನ್ನು ನ್ಯಾಯಾಲಯ ವಿಚಾರಣೆಗೆ ಒಳಪಡಿಸಲು ಆದೇಶ

ಅರಣ್ಯ ಜಮೀನನ್ನು ಕಂದಾಯ ಜಮೀನನ್ನಾಗಿ ಪರಿವರ್ತಿಸಿರುವ ಆರೋಪ ಅನುಕಂಪದಲ್ಲಿ ಸರ್ಕಾರಿ...

ಬೆಂಗಳೂರು ಟೆಕ್ ಸಮ್ಮಿಟ್ 2023 | ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡು ಬಿಡುಗಡೆ

ಬೆಂಗಳೂರು ಅರಮನೆಯಲ್ಲಿ 'ಬ್ರೇಕಿಂಗ್ ದಿ ಬೌಂಡರೀಸ್' ಘೋಷವಾಕ್ಯದ 26ನೇ ‘ಬೆಂಗಳೂರು ತಂತ್ರಜ್ಞಾನ...

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ, ಎಲ್ಲ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿದ್ದರಾಮಯ್ಯ

ಕನಕದಾಸರು ಜಾತಿ‌, ಅನಕ್ಷರತೆಯ ಅಸಮಾನತೆ ಹೋಗಲಾಡಿಸಲು ಹೋರಾಡಿದರು ಯಾವ ಧರ್ಮವೂ...