ಪೂಜೆ ವೇಳೆ ಬೆಂಕಿ ಹೊತ್ತಿಕೊಂಡು ಕಾಂಗ್ರೆಸ್‌ ನಾಯಕಿ, ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್‌ ನಿಧನ

Date:

Advertisements

ಪೂಜೆ ಮಾಡುತ್ತಿದ್ದ ವೇಳೆ ಬಟ್ಟೆಗೆ ಬೆಂಕಿ ಹೊತ್ತಿಕೊಂಡು ಗಂಭೀರ ಸುಟ್ಟು ಗಾಯಗಳಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್‌, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ರಾಜಸ್ಥಾನದ ಉದಯಪಯದಲ್ಲಿ ಗಿರಿಜಾ ವ್ಯಾಸ್ ಅವರ ನಿವಾಸದಲ್ಲಿ ಮಾರ್ಚ್ 31ರಂದು ಘಟನೆ ನಡೆದಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ, ಕಳೆದ ಒಂದು ತಿಂಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ, ಚಿಕಿತ್ಸೆ ಫಲಿಸದೆ ಮೇ 1ರ ತಡರಾತ್ರಿ ಅವರು ಮೃತಪಟ್ಟಿದ್ದಾರೆ.

ಕಾಂಗ್ರೆಸ್‌ ನಾಯಕಿ ಗಿರಿಜಾ ಅವರು ಮಾರ್ಚ್‌ 31ರಂದು ತಮ್ಮ ನಿವಾಸದಲ್ಲಿ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ದೇವರಿಗೆ ಪೂಜೆ ಸಲ್ಲಿಸುತ್ತಿದ್ದ ವೇಳೆ, ನೆಲದ ಮೇಲೆ ಇರಿಸಲಾಗಿದ್ದ ದೀಪದಿಂದ ಬೆಂಕಿ ಗಿರಿಜಾ ಅವರ ದುಪ್ಪಟ್ಟಾಗೆ ತಗುಲಿತ್ತು. ಕ್ಷಣಾರ್ಧದಲ್ಲಿ ಇಡೀ ಬಟ್ಟೆಗೆ ಬೆಂಕಿ ಆವರಿಸಿಕೊಂಡು, ಗಿರಿಜಾ ಅವರಿಗೆ ಗಂಭೀರ ಸುಟ್ಟು ಗಾಯಗಳಾಗಿದ್ದವು. ಒಂದು ತಿಂಗಳು ಸುಟ್ಟ ಗಾಯಗಳಿಂದ ನೋವನನುಭವಿಸಿದ ಗಿರಿಜಾ ಅವರು ಕೊನೆಯುಸಿರೆಳೆದಿದ್ದಾರೆ.

Advertisements

ಗಿರಿಜಾ ವ್ಯಾಸ್‌ ಅವರು ರಾಜಸ್ಥಾನ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜಸ್ಥಾನ ರಾಜ್ಯ ಸರ್ಕಾರದಲ್ಲಿ ಮತ್ತು ಕೇಂದ್ರ ಸರ್ಕಾರದಲ್ಲಿ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು. 1991ರಲ್ಲಿ ಪ್ರಧಾನಿ ನರಸಿಂಹ ರಾವ್ ನೇತೃತ್ವದ ಸರ್ಕಾರದಲ್ಲಿ ಅವರು ಕೇಂದ್ರ ಸಚಿವೆಯಾಗಿದ್ದರು. ರಾಜಸ್ಥಾನ ಕಾಂಗ್ರೆಸ್‌ನ ಅಧ್ಯಕ್ಷೆಯಾಗಿಯೂ ಪಕ್ಷವನ್ನು ಮುನ್ನಡೆಸಿದ್ದರು. ಅಲ್ಲದೆ, ರಾಷ್ಟ್ರೀಯ ಮಹಿಳಾ ಆಯೋಗದ (NCW) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಈ ವರದಿ ಓದಿದ್ಧೀರಾ?: ಜಾತಿ ಗಣತಿ ವರದಿ ವಿರೋಧಿಸುತ್ತಿರುವ ಶಾಮನೂರು ಹುನ್ನಾರವೇನು? ಕಾಂಗ್ರೆಸ್‌ನಲ್ಲಿ ಕ್ರಮ ಯಾಕಿಲ್ಲ?

ಅವರ ಸಾವಿಗೆ ಕಾಂಗ್ರೆಸ್‌ ನಾಯಕರು ಸಂತಾಪ ಸೂಚಿಸಿದ್ದಾರೆ. ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಅವರು, ”ಮಾಜಿ ಕೇಂದ್ರ ಸಚಿವೆ, ಕಾಂಗ್ರೆಸ್ ನಾಯಕಿ ಡಾ. ಗಿರಿಜಾ ವ್ಯಾಸ್ ಅವರ ನಿಧನವು ತುಂಬಲಾರದ ನಷ್ಟ ಉಂಟುಮಾಡಿದೆ. ಗಿರಿಜಾ ವ್ಯಾಸ್ ಅವರು ಶಿಕ್ಷಣ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಬೃಹತ್ ಕೊಡುಗೆ ನೀಡಿದ್ದಾರೆ. ಅವರ ಅಕಾಲಿಕ ನಿಧನ ನಮಗೆಲ್ಲರಿಗೂ ದೊಡ್ಡ ಆಘಾತವಾಗಿದೆ. ಅವರ ಆತ್ಮಕ್ಕೆ ದೇವರ ಪಾದದಲ್ಲಿ ಸ್ಥಾನ ದೊರೆಯಲಿ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X