ಯುಪಿ ಮಾಜಿ ಪೊಲೀಸ್ ಮಹಾನಿರ್ದೇಶಕ ಬಿಜೆಪಿಗೆ ಸೇರ್ಪಡೆ

Date:

Advertisements

ಎರಡು ತಿಂಗಳ ಹಿಂದೆ ನಿವೃತ್ತ ಉತ್ತರ ಪ್ರದೇಶದ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿಜಯ್ ಕುಮಾರ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷವು ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸೂಚಿಸಿತ್ತು. ಅದರಂತೆ, ಪಕ್ಷಕ್ಕೆ ಸೇರಿದ್ದೇನೆ ಎಂದು ಹೇಳಿದ್ದಾರೆ.

1988ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ವಿಜಯ್ ಮತ್ತು ಅವರ ಪತ್ನಿ ಅನುಪಮಾ ಕುಮಾರ್ ಬಿಜೆಪಿಗೆ ಸೇರಿದ್ದಾರೆ. ಉತ್ತರ ಪ್ರದೇಶದಲ್ಲಿ 2015ರಲ್ಲಿ ಮಾಜಿ ಡಿಜಿಪಯೊಬ್ಬರು ಬಿಜೆಪಿಗೆ ಸೇರಿ, ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಇದೀಗ, ವಿಜಯ್ ಅವರು ಪಕ್ಷಕ್ಕೆ ಸೇರಿದ್ದಾರೆ. ಕಳೆದ 10 ವರ್ಷಗಳಲ್ಲಿ ಬಿಜೆಪಿಗೆ ಸೇರಿದ ಎರಡನೇ ಮಾಜಿ ರಾಜ್ಯ ಡಿಜಿಪಿ ಆಗಿದ್ದಾರೆ. ರಾಜಕೀಯ ಪ್ರವೇಶಿಸುವುದು ಅವರ ಧೀರ್ಘಕಾಲದ ಉದ್ದೇಶವಾಗಿತ್ತು ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸೇರಿದ ಬಳಿಕ ಮಾತನಾಡಿದ ವಿಜಯ್, “ಗೃಹಿಣಿಯಾಗಿರುವ ನನ್ನ ಪತ್ನಿ ಮತ್ತು ನಾನು ರಾಜಕೀಯೇತರ ಹಿನ್ನೆಲೆಯಿಂದ ಬಂದವರು. ಪಕ್ಷದ ನಾಯಕತ್ವ ವಹಿಸುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸಲು ನಾವು ಸಿದ್ಧರಿದ್ದೇವೆ” ಎಂದು ಹೇಳಿದ್ದಾರೆ.

Advertisements

“ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸಿದೆ. ಇದು ಅಭಿವೃದ್ಧಿಗೆ ಅನುಕೂಲವಾಗಿದೆ. ಸಾಮಾನ್ಯ ಜನರಿಗೆ ಪರಿಹಾರವನ್ನು ಒದಗಿಸಿದೆ” ಎಂದಿದ್ದಾರೆ.

ಝಾನ್ಸಿ ಮೂಲದ ಕುಮಾರ್ ಅವರು 2023ರ ಮೇ 31ರಿಂದ 2024ರ ಜನವರಿ 31ರವರೆಗೆ ರಾಜ್ಯ ಡಿಜಿಪಿಯಾಗಿ ಸೇವೆ ಸಲ್ಲಿಸಿದರು.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಅಸೀಮ್ ಅರುಣ್ ಸೇರಿದಂತೆ ಹಲವಾರು ನಿವೃತ್ತ ಐಪಿಎಸ್ ಅಧಿಕಾರಿಗಳು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X