ರೇಬಿಸ್ ನಿರ್ಮೂಲನೆಗೆ ಪರಿಣಾಮಕಾರಿ ಕ್ರಿಯಾಯೋಜನೆ ರೂಪಿಸಿ: ಶಾಲಿನಿ ರಜನೀಶ್

Date:

  • ರೇಬಿಸ್ ನಿರ್ಮೂಲನೆಗೆ ರಚಿಸಿರುವ ಜಂಟಿ ಚಾಲನಾ ಸಮಿತಿಯಿಂದ ಕಾರ್ಯು
  • ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕೆಲಸ ಮಾಡಿ

ನಾಯಿಯಿಂದ ಹರಡುವ ರೇಬಿಸ್ ನಿರ್ಮೂಲನೆಗೆ ರಚಿಸಿರುವ ಜಂಟಿ ಚಾಲನಾ ಸಮಿತಿಯು ಸಂಬಂಧಿಸಿದ ಎಲ್ಲಾ ಇಲಾಖೆಗಳು ಹಾಗೂ ತಜ್ಞರ ಸಲಹೆ ಆಧರಿಸಿ ಪರಿಣಾಮಕಾರಿಯಾದ ಕ್ರಿಯಾಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಬೇಕು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೂಚನೆ ನೀಡಿದರು.

- Advertisement -

ವಿಕಾಸಸೌಧದಲ್ಲಿ ಗುರುವಾರ ರೇಬಿಸ್ ನಿರ್ಮೂಲನೆಗಾಗಿ ರಚಿಸಿರುವ ಜಂಟಿ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ರೇಬಿಸ್ ನಿರ್ಮೂಲ‌ನೆಗಾಗಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ರಚಿಸುವ ಸಮಿತಿಗಳಲ್ಲಿನ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ತಮ್ಮ ಕರ್ತವ್ಯ, ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಬೇಕು” ಎಂದರು.

“ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಅರಣ್ಯ ಇಲಾಖೆಗಳು, ವನ್ಯಜೀವಿ ಸಂರಕ್ಷಣಾ ಮಂಡಳಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಮನ್ವಯದೊಂದಿಗೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಬೇಕು. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿವಿಗಳ ತಜ್ಞರು ಕೂಡ ಈ ಕ್ರಿಯಾಯೋಜನೆಯ ಭಾಗವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು” ಎಂದು ಹೇಳಿದರು.‌

“ಬೆಂಗಳೂರು ಮಹಾನಗರದಲ್ಲಿ ಬೀದಿನಾಯಿಗಳಿಗೆ ರೇಬಿಸ್ ನಿರೋಧಕ ಲಸಿಕೆ (Anti Rabies Vaccine) ಆಂದೋಲನ ಕೈಗೊಳ್ಳಲು ಬಿಬಿಎಂಪಿಯ ಪಶುಸಂಗೋಪನೆ ವಿಭಾಗಕ್ಕೆ ತ್ವರಿತವಾಗಿ 2 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕು” ಎಂದು ಸೂಚಿಸಿದರು.

“ಸಮೀಕ್ಷಾ ಕಾರ್ಯ ಮತ್ತು ಪ್ರಕರಣಗಳ ಸರಿಯಾದ ವರದಿಯಾಗಲು ರಾಷ್ಟ್ರೀಯ ಮಾರ್ಗಸೂಚಿಗಳ ಪ್ರಕಾರ ವಿವಿಧ ಹಂತಗಳ ವೈದ್ಯಕೀಯ, ಆರೋಗ್ಯ ಸಿಬ್ಬಂದಿಗೆ ತರಬೇತಿ ಆಯೋಜಿಸಬೇಕು. ನಾಯಿಕಡಿತದ ಪ್ರಕರಣಗಳ ನಿರ್ವಹಣೆಗೆ ಅಗತ್ಯವಿರುವ ರೇಬಿಸ್ ನಿರೋಧಕ ಲಸಿಕೆ, ರೇಬಿಸ್ ಇಮ್ಯುನೊಗ್ಲಾಬ್ಯುಲಿನ್‌ ಎಲ್ಲ ಕಡೆ ಲಭ್ಯವಿರುವಂತೆ ನೋಡಿಕೊಳ್ಳಬೇಕು, ಘನತ್ಯಾಜ್ಯ ವಿಲೇವಾರಿ ಕುರಿತು ನಿರಂತರವಾಗಿ ಜನಜಾಗೃತಿ ಮೂಡಿಸಲು ಸಂಬಂಧಿತ ಎಲ್ಲಾ ಇಲಾಖೆಗಳ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯಪ್ರವೃತ್ತರಾಗಬೇಕು. ನಿರ್ದಿಷ್ಟ ಗುರಿಗಳನ್ನು ಹಾಕಿಕೊಂಡು 2030 ರೊಳಗೆ ರೇಬಿಸ್ ನಿರ್ಮೂಲನೆಗೆ ಆಂದೋಲನದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು” ಎಂದು ಶಾಲಿನಿ ರಜನೀಶ್ ತಿಳಿಸಿದರು.

ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮಾತನಾಡಿ, “ಕೆಎಫ್ ರಾಜ್ಯದಲ್ಲಿ ಪ್ರಕರಣಗಳು ಹೆಚ್ಚು ವರದಿಯಾಗುವ ಜಿಲ್ಲೆಗಳ ತುಲನಾತ್ಮಕ ಅಧ್ಯಯನ ಮಾಡಿ ನಿಖರವಾದ ವೈಜ್ಞಾನಿಕ ಕಾರಣಗಳನ್ನು ಕಂಡುಕೊಳ್ಳಬೇಕು. ವಿವಿಧ ಪ್ರದೇಶಗಳ ಭೂಮಿಯ ಮಣ್ಣು ಹಾಗೂ ವಾತಾವರಣಕ್ಕೆ ಅನುಗುಣವಾಗಿ ನಿಯಂತ್ರಣ ಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕು” ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲಕುಮಾರ್, ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಾಹಿಮ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್, ಬಿಬಿಎಂಪಿ ವಿಶೇಷ ಆಯುಕ್ತ ಡಾ.ಕೆ.ವಿ.ತ್ರಿಲೋಕಚಂದ್ರ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ವಿಶ್ವವಿದ್ಯಾಲಯಗಳ ತಜ್ಞರು ಸಭೆಯಲ್ಲಿ ಉಪಸ್ಥಿತರಿದ್ದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಮರ್ ಖಾಲಿದ್ ಕುರಿತ ‘ಕೈದಿ‌ ನಂ. 626710 ಈಸ್ ಪ್ರೆಸೆಂಟ್’ ಸಾಕ್ಷ್ಯಚಿತ್ರ ಪ್ರದರ್ಶನ ರದ್ದಾಗಿದ್ದು ಯಾಕೆ?

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (NLSIU) ಜವಾಹರಲಾಲ್...

ಕನಕಪುರ ವಿದ್ಯಾರ್ಥಿ ನಿಲಯಕ್ಕೆ ಸಿಎಂ ದಿಢೀರ್ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚೆ

ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ...

‘ದೇಶದಲ್ಲಿ ಎಲ್ಲವೂ ಸರಿಯಿದೆ ಎನ್ನುತ್ತಾರೆ ಪ್ರಧಾನಿ, ಆದರೆ ಎಲ್ಲವೂ ದುಬಾರಿಯಾಗಿದೆ’

ದೇಶದಲ್ಲಿ ದಿನಬಳಕೆಯ ವಸ್ತುಗಳ ಬೆಲೆಯಲ್ಲಿನ ಗಣನೀಯ ಏರಿಕೆ ಮತ್ತು ಕುಸಿಯುತ್ತಿರುವ ನೈಜ...

ಬಿಜೆಪಿ ಹೇಳಿದ ತಕ್ಷಣ ಇನ್ಸ್‌ಪೆಕ್ಟರ್ ಅಮಾನತು ಮಾಡೋಕಾಗಲ್ಲ: ಪ್ರಿಯಾಂಕ್ ಖರ್ಗೆ

ಗಣಪತಿ ಮೆರವಣಿಗೆ ವೇಳೆ ಮಸೀದಿ ಮುಂದೆ ದಾಂಧಲೆ-ರಂಪಾಟ ನಡೆಸದಂತೆ ಹಿಂದುತ್ವ ಗುಂಪುಗಳಿಗೆ...