ಗುತ್ತಿಗೆದಾರರಿಗೆ ಬಿಲ್ ಬಾಕಿ ಬಗ್ಗೆ ತನಿಖೆ ನಡೆಸಲು ನಾಲ್ಕು ತಂಡ ರಚನೆ: ಸಚಿವ ರಾಮಲಿಂಗಾ ರೆಡ್ಡಿ

Date:

Advertisements
  • ‘ಕಾಂಗ್ರೆಸ್ ವಿರುದ್ಧ ಮಾಡುತ್ತಿರುವ 15% ಆರೋಪ ಸುಳ್ಳು’
  • ‘ಬಿಜೆಪಿ ಟೀಕೆ ಮಾಡುವ ನೈತಿಕ ಹಕ್ಕು ಕಳೆದುಕೊಂಡಿದೆ’

ಗುತ್ತಿಗೆದಾರರಿಗೆ ಬಿಲ್ ಬಾಕಿ ಬಗ್ಗೆ ತನಿಖೆ ನಡೆಸಲು ನಾಲ್ಕು ತಂಡ ರಚನೆ ಮಾಡಲಾಗಿದೆ. ವರದಿ ಬಳಿಕ ಬಿಲ್ ಕ್ಲಿಯರ್ ಮಾಡುತ್ತೇವೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, “ಬಿಜೆಪಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮಾಡಿದ್ದ 40% ಆರೋಪ ಸತ್ಯ. ಆದರೆ ಇವಾಗ ಕಾಂಗ್ರೆಸ್ ವಿರುದ್ಧ ಮಾಡುತ್ತಿರುವ 15% ಆರೋಪ ಸುಳ್ಳು” ಎಂದು ಸ್ಷಷ್ಟನೆ ನೀಡಿದರು..

“ಬಿಜೆಪಿ ಅವರ ಮಾತಿಗೆ ಕಿಮ್ಮತ್ತಿಲ್ಲ. ತಮ್ಮ ಸರ್ಕಾರದಲ್ಲಿ 40% ಕಮಿಷನ್ ಆಯಿತು. ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಐದು ವರ್ಷ ವಿರೋಧ ಪಕ್ಷದಲ್ಲಿದ್ದು ಕೆಲಸ ಮಾಡಲಿ ಅಷ್ಟೇ” ಎಂದರು.

Advertisements

“ವರದಿ ಕೊಡುವ ಮೊದಲೇ ಕಮಿಷನ್ ಆರೋಪ ಮಾಡಲಾಗುತ್ತಿದೆ. ಅವರು‌ ಮಾಡಿರುವ ಆಪಾದನೆ ಸತ್ಯಕ್ಕೆ ದೂರವಾಗಿದೆ. ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಬೇಕು. ‌ಬೇಗ ಬಿಲ್ ಬಿಡುಗಡೆಯಾದರೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಆನ್ ಲೈನ್ ನಲ್ಲಿ ಬಿಲ್ ಪೇಮೆಂಟ್ ಮಾಡಲು ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ‌ ಬಿಬಿಎಂಪಿ ಗುತ್ತಿಗೆದಾರರ ಸಂಘ 15% ಕಮಿಷನ್ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದೆ. ಬಾಕಿ ಬಿಲ್ ಬಿಡುಗಡೆ ಮಾಡಲು ಗುತ್ತಿಗೆದಾರರು ಈ ಬಗ್ಗೆ ರಾಜ್ಯಪಾಲರಿಗೂ ದೂರು ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರನ್ನು ಗುತ್ತಿಗೆದಾರರು ಭೇಟಿ ಮಾಡಿದ್ದಾರೆ. ಬಾಕಿ ಪಾವತಿ ಆಗದಿದ್ದಲ್ಲಿ ಕೆಲಸ ನಿಲ್ಲಿಸುವ ಬೆದರಿಕೆ ಕೂಡ ಹಾಕಿದ್ದನ್ನು ಇಲ್ಲಿ ನೆನೆಯಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

Download Eedina App Android / iOS

X