ಗುತ್ತಿಗೆದಾರರಿಗೆ ಬಿಲ್ ಬಾಕಿ ಬಗ್ಗೆ ತನಿಖೆ ನಡೆಸಲು ನಾಲ್ಕು ತಂಡ ರಚನೆ: ಸಚಿವ ರಾಮಲಿಂಗಾ ರೆಡ್ಡಿ

Date:

  • ‘ಕಾಂಗ್ರೆಸ್ ವಿರುದ್ಧ ಮಾಡುತ್ತಿರುವ 15% ಆರೋಪ ಸುಳ್ಳು’
  • ‘ಬಿಜೆಪಿ ಟೀಕೆ ಮಾಡುವ ನೈತಿಕ ಹಕ್ಕು ಕಳೆದುಕೊಂಡಿದೆ’

ಗುತ್ತಿಗೆದಾರರಿಗೆ ಬಿಲ್ ಬಾಕಿ ಬಗ್ಗೆ ತನಿಖೆ ನಡೆಸಲು ನಾಲ್ಕು ತಂಡ ರಚನೆ ಮಾಡಲಾಗಿದೆ. ವರದಿ ಬಳಿಕ ಬಿಲ್ ಕ್ಲಿಯರ್ ಮಾಡುತ್ತೇವೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

- Advertisement -

ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, “ಬಿಜೆಪಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮಾಡಿದ್ದ 40% ಆರೋಪ ಸತ್ಯ. ಆದರೆ ಇವಾಗ ಕಾಂಗ್ರೆಸ್ ವಿರುದ್ಧ ಮಾಡುತ್ತಿರುವ 15% ಆರೋಪ ಸುಳ್ಳು” ಎಂದು ಸ್ಷಷ್ಟನೆ ನೀಡಿದರು..

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಬಿಜೆಪಿ ಅವರ ಮಾತಿಗೆ ಕಿಮ್ಮತ್ತಿಲ್ಲ. ತಮ್ಮ ಸರ್ಕಾರದಲ್ಲಿ 40% ಕಮಿಷನ್ ಆಯಿತು. ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಐದು ವರ್ಷ ವಿರೋಧ ಪಕ್ಷದಲ್ಲಿದ್ದು ಕೆಲಸ ಮಾಡಲಿ ಅಷ್ಟೇ” ಎಂದರು.

“ವರದಿ ಕೊಡುವ ಮೊದಲೇ ಕಮಿಷನ್ ಆರೋಪ ಮಾಡಲಾಗುತ್ತಿದೆ. ಅವರು‌ ಮಾಡಿರುವ ಆಪಾದನೆ ಸತ್ಯಕ್ಕೆ ದೂರವಾಗಿದೆ. ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಬೇಕು. ‌ಬೇಗ ಬಿಲ್ ಬಿಡುಗಡೆಯಾದರೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಆನ್ ಲೈನ್ ನಲ್ಲಿ ಬಿಲ್ ಪೇಮೆಂಟ್ ಮಾಡಲು ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ‌ ಬಿಬಿಎಂಪಿ ಗುತ್ತಿಗೆದಾರರ ಸಂಘ 15% ಕಮಿಷನ್ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದೆ. ಬಾಕಿ ಬಿಲ್ ಬಿಡುಗಡೆ ಮಾಡಲು ಗುತ್ತಿಗೆದಾರರು ಈ ಬಗ್ಗೆ ರಾಜ್ಯಪಾಲರಿಗೂ ದೂರು ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರನ್ನು ಗುತ್ತಿಗೆದಾರರು ಭೇಟಿ ಮಾಡಿದ್ದಾರೆ. ಬಾಕಿ ಪಾವತಿ ಆಗದಿದ್ದಲ್ಲಿ ಕೆಲಸ ನಿಲ್ಲಿಸುವ ಬೆದರಿಕೆ ಕೂಡ ಹಾಕಿದ್ದನ್ನು ಇಲ್ಲಿ ನೆನೆಯಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...