‘ಅನ್ನಭಾಗ್ಯ’ದಲ್ಲಿ ವಂಚನೆ: ಟ್ವಿಟ್ಟರ್ ದೂರಿಗೆ ಸ್ಪಂದಿಸಿದ ಸಿಎಂ ಕಚೇರಿ; ನ್ಯಾಯಬೆಲೆ ಅಂಗಡಿ ಅಮಾನತು

Date:

Advertisements
  • ದಾವಣಗೆರೆಯ ಚನ್ನಗಿರಿ ತಾಲೂಕಿನ ಹಿರೇಮಳಲಿ ಗ್ರಾಮದ ನ್ಯಾಯಬೆಲೆ ಅಂಗಡಿ
  • ಪಡಿತರ ಚೀಟಿಗೆ 1 ಕೆ.ಜಿ ಪಡಿತರ ಕಡಿಮೆ ವಿತರಿಸುತ್ತಿದ್ದ ಬಗ್ಗೆ ಟ್ವಟ್ಟರ್‌ನಲ್ಲಿ ಬಂದಿದ್ದ ದೂರು

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಯ ವಿತರಣೆಯ ವೇಳೆ ವಂಚಿಸುತ್ತಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಬಂದ ದೂರಿಗೆ ಸ್ಪಂದಿಸಿರುವ ಸಿಎಂ ಕಚೇರಿ, ನ್ಯಾಯಬೆಲೆ ಅಂಗಡಿಯನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.

ದಾವಣಗೆರೆಯ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಮಳಲಿ ಗ್ರಾಮದಲ್ಲಿ ಪ್ರತಿ ರೇಷನ್ ಕಾರ್ಡಿಗೆ ಒಂದು ಕೆಜಿ ಅಕ್ಕಿ ಕಡಿತ ಮಾಡಿ ನೀಡಲಾಗುತ್ತಿದೆ. ಇದು ತಾಲೂಕಿನಾದ್ಯಂತ ಎಗ್ಗಿಲ್ಲದೇ ನಡೆಯುತ್ತಿದೆ. ಇಂತವರನ್ನು ಅಮಾನತು ಮಾಡಿ ಎಂದು ವಿಡಿಯೋ ದಾಖಲೆ ಸಹಿತ ಸಿಎಂ ಕಚೇರಿಗೆ ಚಂದ್ರಶೇಖರ್ ಎಂಬವರು ಟ್ವೀಟ್ ಮೂಲಕ ದೂರು ನೀಡಿದ್ದರು.

ಇದಕ್ಕೆ ಸ್ಪಂದಿಸಿರುವ ಸಿಎಂ ಕಚೇರಿಯ ಅಧಿಕಾರಿಗಳು, ಸ್ಥಳೀಯ ಅಧಿಕಾರಿಗಳಿಂದ ವರದಿ ಪಡೆದ ಬಳಿಕ ಜಿಲ್ಲಾಧಿಕಾರಿಗಳು ನ್ಯಾಯಬೆಲೆ ಅಂಗಡಿಯನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.

Advertisements

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿಎಂ ಕಚೇರಿಯ ಅಧಿಕಾರಿಗಳು, ಚನ್ನಗಿರಿ ತಾಲೂಕಿನ ಹಿರೇಮಳಲಿ ಗ್ರಾಮದ ನ್ಯಾಯಬೆಲೆ ಅಂಗಡಿಯವರು ಪ್ರತಿ ಪಡಿತರ ಚೀಟಿಗೆ 1 ಕೆ.ಜಿ ಪಡಿತರ ಕಡಿಮೆ ವಿತರಿಸುತ್ತಿರುವ ವಿಷಯವನ್ನು ಚಂದ್ರಶೇಖರ್ ಎನ್ನುವವರು ಟ್ವಿಟ್ಟರ್ ಮೂಲಕ ನಮ್ಮ ಗಮನಕ್ಕೆ ತಂದರು. ದೂರು ಬಂದ ತಕ್ಷಣ ಸಂಬಂಧಪಟ್ಟ ಇಲಾಖೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಯಿತು. ದೂರು ಕೇಳಿಬಂದ ಕೆಲವೇ ಗಂಟೆಗಳ ಒಳಗೆ ಆಹಾರ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಿರುತ್ತಾರೆ. ಅವರ ವರದಿ ಆಧರಿಸಿ ಜಿಲ್ಲಾಧಿಕಾರಿಯವರು ನಿಯಮ ಉಲ್ಲಂಘನೆ ಮಾಡಿರುವ ನ್ಯಾಯಬೆಲೆ ಅಂಗಡಿಯನ್ನು ಅಮಾನತುಗೊಳಿಸಿ, ಪಡಿತರ ವಿತರಣೆಗೆ ತಾತ್ಕಾಲಿಕ ವ್ಯವಸ್ಥೆ ಮಾಡಿರುತ್ತಾರೆ” ಎಂದು ತಿಳಿಸಿದೆ.

“ಬಡಜನರ ಹಸಿವು ನೀಗಿಸುವ ಉದ್ದೇಶದ ಪಡಿತರ ವಿತರಣಾ ವ್ಯವಸ್ಥೆಯನ್ನು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳುವ ಇಂತಹ ಯಾವುದೇ ಘಟನೆಗಳನ್ನು ನಾವು ಸಹಿಸುವುದಿಲ್ಲ. ಜನರಿಗೆ ಅವರ ಹಕ್ಕಿನ ಪಡಿತರ ಸಾಮಗ್ರಿಗಳನ್ನು ಸಿಗುವಂತೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಅವರ ಕಚೇರಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X