ಹೊಸ ಮನೆ, ಮನೆ ಶಿಫ್ಟ್ ಮಾಡಿದವರಿಗೂ ಗೃಹಜ್ಯೋತಿ ಸಿಗಲಿದೆ: ಸಚಿವ ಜಾರ್ಜ್

Date:

  • ಮನೆ ಅಗ್ರಿಮೆಂಟ್ ಪತ್ರ, ಅಡ್ರೆಸ್ ಇರುವ ಯಾವುದಾದರೂ ಐಡಿಗೂ ಫ್ರೀ ಕರೆಂಟ್
  • ಸೋಮವಾರ ಇಂಧನ ಇಲಾಖೆ ಸಭೆ ನಡೆಸಿ ಯೋಜನೆ ಜಾರಿ ಸ್ಪಷ್ಟ ಚಿತ್ರಣ ಒದಗಿಸುತ್ತೇವೆ

ಹೊಸ ಮನೆಗಳು ಹಾಗೂ ಮನೆ ಶಿಫ್ಟ್ ಮಾಡಿದವರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆ ಲಾಭ ಪಡೆಯುವ ವಿಚಾರದಲ್ಲಿ ಗೊಂದಲಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಬಾಡಿಗೆ ಮನೆಯವರನ್ನೂ ಒಳಗೊಂಡಂತೆ ಹಲವರಿಗೆ ಉಚಿತ ವಿದ್ಯುತ್ ದೊರೆಯುತ್ತದೋ ಇಲ್ಲವೋ ಎನ್ನುವ ಅನುಮಾನಗಳಿವೆ, ಎಲ್ಲ ಅನುಮಾನಗಳಿಗೂ ಸೋಮವಾರ ಇಂಧನ ಇಲಾಖೆ ಸಭೆ ನಡೆಸಿ ಸ್ಪಷ್ಟ ಚಿತ್ರಣ ಕೊಡುತ್ತೇವೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೊಸ ಮನೆಗಳು ಹಾಗೂ ಮನೆ ಶಿಫ್ಟ್ ಮಾಡಿದವರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ. ಆರ್.ಆರ್ ನಂಬರ್ ಗೆ ವೋಟರ್ ಲಿಂಕ್ ಆಗಿದ್ರೆ ಸಾಕು. ಉಚಿತ ವಿದ್ಯುತ್ ನೀಡಲಾಗುತ್ತದೆ. ಮನೆ ಅಗ್ರಿಮೆಂಟ್ ಪತ್ರ ಇದ್ರೂ ಫ್ರಿ ವಿದ್ಯುತ್ ನೀಡುತ್ತೇವೆ. ಅಡ್ರೆಸ್ ಇರುವ ಯಾವುದಾದರೂ ಐಡಿ ಕೊಟ್ಟರೆ ಸಾಕು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

ಆಗಸ್ 1 ರಿಂದ ಗೃಹಜ್ಯೋತಿ ಯೋಜನೆ ಜಾರಿಯಾಗಲಿದೆ. ಜೂನ್ ತಿಂಗಳ ಬಿಲ್ ಮಾತ್ರ ಕಟ್ಟಬೇಕು. ಕಲಬುರಗಿಯಲ್ಲಿ ಯೋಜನೆಗೆ ಚಾಲನೆ ನೀಡುವ ಸಾಧ್ಯತೆ ಇದೆ. ಜನರಿಗೆ ಯೋಜನೆ ಸರಳವಾಗಿ ತಲುಪಿಸುವ ವ್ಯವಸ್ಥೆ ಮಾಡುತ್ತೇವೆ ಎಂದು ಜಾರ್ಜ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....