ರೆಂಟ್‌ ಅಗ್ರಿಮೆಂಟ್‌ ಇದ್ದರೆ ಮಾತ್ರ ಬಾಡಿಗೆದಾರರಿಗೆ ʼಉಚಿತ ವಿದ್ಯುತ್ʼ: ಸಚಿವ ಕೆ ಜೆ ಜಾರ್ಜ್ ಮಾಹಿತಿ

Date:

Advertisements
  • ʼಗೃಹ ಜ್ಯೋತಿʼ ಉಚಿತ ವಿದ್ಯುತ್ ಯೋಜನೆ ಲಾಭದ ವ್ಯಾಪ್ತಿಗೆ ಬಾಡಿಗೆದಾರರು
  • ಫ್ರೀ ವಿದ್ಯುತ್ ವಿಚಾರದ ಗೊಂದಲಕ್ಕೆ ತೆರೆ ಎಳೆದ ಇಂಧನ ಸಚಿವ ಕೆ ಜೆ ಜಾರ್ಜ್

ಬಾಡಿಗೆದಾರರಿಗೂ ಗೃಹ ಜ್ಯೋತಿ ಯೋಜನೆ ಯ ಉಚಿತ ವಿದ್ಯುತ್ ಲಾಭ ಸಿಗಲಿದೆ. ಇದಕ್ಕಾಗಿ ಅವರು ಮನೆ ಬಾಡಿಗೆ ದಾಖಲೆ ಹೊಂದಿರಬೇಕು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು.

ವಿಧಾನಸೌಧದಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬಾಡಿಗೆದಾರರು ಈ ಯೋಜನೆ ಲಾಭ ಪಡೆಯಲು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು, ಅವರಿಗೂ ಯೋಜನೆ ಲಾಭ ಸಿಗಲಿದೆ. ಈ ವಿಚಾರದಲ್ಲಿ ಅನಗತ್ಯ ಗೊಂದಲ ಬೇಡ ಎಂದಿದ್ದಾರೆ.

ಸಚಿವರ ಈ ವಿಚಾರದಲ್ಲಿ ನೀಡಿರುವ ಸ್ಪಷ್ಟೀಕರಣದಂತೆ, ಬಾಡಿಗೆದಾರರು ಯೋಜನೆಗೆ ಅರ್ಜಿ ಸಲ್ಲಿಸುವಾಗ ಎಷ್ಟು ವರ್ಷಗಳಿಂದ ಆ ಬಾಡಿಗೆ ಮನೆಯಲ್ಲಿದ್ದಾರೆ ಎಂಬ ದಾಖಲೆ ತೋರಿಸಬೇಕು. ವಿದ್ಯುತ್ ಬಿಲ್ ಜೊತೆಗೆ ಬಾಡಿಗೆ ಮನೆ ಕರಾರು ಪತ್ರ ಇರಬೇಕು ಎಂದಿದ್ದಾರೆ.

Advertisements

ಜೊತೆಗೆ ಮನೆ ಮಾಲೀಕನ ತಾನು ಎಷ್ಟು ಬಾಡಿಗೆ ಮನೆ ಇದೆ ಎಂದು ಘೋಷಿಸಬೇಕು ಹಾಗೂ ಮನೆ ಮಾಲೀಕ ಕಡ್ಡಾಯವಾಗಿ ನನ್ನ ಬಳಿ ಇಷ್ಟು ಬಾಡಿಗೆ ಮನೆಗಳಿದೆ, ಇಷ್ಟು ಮನೆಗಳಿಗೆ ನಾನು ಕಡ್ಡಾಯವಾಗಿ ಟ್ಯಾಕ್ಸ್ ಕಟ್ಟಿದ್ದೇನೆ ಎಂದು ಮಾಹಿತಿ ನೀಡಬೇಕು ಎಂದು ಹೇಳಿದರು.

ಒಂದು ವೇಳೆ ಇದರಲ್ಲಿ ತಪ್ಪು ಮಾಹಿತಿ ನೀಡಿದರೇ ಈ ಯೋಜನೆ ಅಂತಹ ಬಾಡಿಗೆದಾರರರಿಗೆ ಅನ್ವಯವಾಗುವುದಿಲ್ಲ ಎಂದು ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

ಗೃಹ ಜ್ಯೋತಿಗಾಗಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ

ಸರ್ಕಾರದ ಗೃಹ ಜ್ಯೋತಿ ಯೋಜನೆ ಅಡಿ ಪ್ರತಿ ಮನೆಯವರೂ 200 ಯುನಿಟ್ ವಿದ್ಯುತ್ ಉಚಿತ ಪಡೆಯಲು ಅರ್ಜಿ ತುಂಬಬೇಕಾದ ಅನಿವಾರ್ಯತೆ ಎದುರಾಗಿದೆ.‌ ಮನೆ ಯಜಮಾನ ಅಗತ್ಯ ದಾಖಲೆಗಳೊಂದಿಗೆ ಪೋರ್ಟ್‌ಗೆ ತೆರಳಿ ಆನ್ ಲೈನ್ ಮೂಲಕ ತನ್ನ ಮೂಲ ಮಾಹಿತಿ ಜೊತೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಿದೆ. ಇದಕ್ಕೆ ಈ ಕೆಳಕಂಡ ಮಾರ್ಗಸೂಚಿಯನ್ನು ಅನುಸರಿಸಬೇಕು.

   ಬಾಡಿಗೆದಾರರು

• ವಾಸವಿರುವ ಮನೆಯ ಆರ್ ಆರ್ ಸಂಖ್ಯೆಯೊಂದಿಗೆ ತಮ್ಮ ಆಧಾರ್ ಲಿಂಕ್ ಮಾಡಬೇಕು.
• ಇದಕ್ಕೆ ಬಾಡಿಗೆ ಮನೆಯ ಕರಾರು ಪತ್ರ (ರೆಂಟಲ್ ಅಗ್ರಿಮೆಂಟ್)ವನ್ನು ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು.
• ಒಂದು ದಾಖಲೆಯನ್ನು ಒಂದು ಮೀಟರ್ ನೊಂದಿಗೆ ಮಾತ್ರ ಲಿಂಕ್ ಮಾಡಲು ಅವಕಾಶ.
• ಮನೆ ಬದಲಾಯಿಸಿದರೆ, ಹಿಂದಿನ ಮನೆಯ ಮೀಟರ್ ನೊಂದಿಗಿನ ಲಿಂಕ್ ತೆಗೆಯಬೇಕು.
• ಹೊಸ ಬಾಡಿಗೆ ಮನೆಯ ಆರ್ ಆರ್ ನಂಬರ್ ಮತ್ತು ಆಧಾರ್ ಕಾರ್ಡ್ ಮತ್ತೊಮ್ಮೆ ಲಿಂಕ್ ಮಾಡಬೇಕು.

    ಸ್ವಂತ ಮನೆಯವರು ಈ ರೀತಿ ಮಾಡಬೇಕು

• ಆರ್ ಆರ್ ನಂಬರ್ ನೊಂದಿಗೆ ಆಧಾರ್ ಲಿಂಕ್ ಮಾಡಬೇಕು.
• ಒಂದಕ್ಕಿಂತ ಹೆಚ್ಚು ಮನೆಯಿದ್ದರೆ ಒಂದು ಮನೆಗೆ ಮಾತ್ರ ಅವಕಾಶ.
• ಎರಡು ಮೀಟರ್ ಹೊಂದಿದ್ದರೆ ಯಾವುದಾದರೂ ಒಂದಕ್ಕೆ ಮಾತ್ರ ಸೌಲಭ್ಯ ಲಭ್ಯ.

ಈ ಸುದ್ದಿ ಓದಿದ್ದೀರಾ?:ಜನ ವಿರೋಧಿ ನೀತಿಗಳ ಜಾರಿಗೆ ಮುಂದಾದರೆ ಸುಮ್ಮನಿರಲ್ಲ: ಮಾಜಿ ಸಿಎಂ ಬೊಮ್ಮಾಯಿ

ಜುಲೈ 1 ರಿಂದ ಗೃಹ ಜ್ಯೋತಿ ಯೋಜನೆ ಜಾರಿಯಾಗಲಿದೆ. ಗ್ರಾಹಕರು ಹಿಂದೆ ಬಳಕೆ ಮಾಡುತ್ತಿದ್ದ ವಿದ್ಯುತ್ ಪ್ರಮಾಣದ ಆಧಾರದ ಮೇಲೆ ವಿದ್ಯುತ್ ಉಚಿತ ಸಿಗಲಿದೆ, ಎಂದು ಸರ್ಕಾರ ಷರತ್ತು ವಿಧಿಸಿದೆ.

ಅಲ್ಲದೆ, 12 ತಿಂಗಳ ಸರಾಸರಿ ವಿದ್ಯುತ್ ಬಳಕೆಗೆ ಶೇ 10 ರಷ್ಟು ಹೆಚ್ಚುವರಿ ಯೂನಿಟ್ ಸೇರಿಸಿ ಯೋಜನೆಯ ಪ್ರಯೋಜನ ಒದಗಿಸಲಾಗವುದು ಎಂದು ಸರ್ಕಾರ ಹೇಳಿದೆ. ಈ ರೀತಿ 200 ಯೂನಿಟ್‌ಗಳವರೆಗಿನ ಬಳಕೆಗೆ ಶುಲ್ಕದ ವಿನಾಯಿತಿ ನೀಡಲಾಗುತ್ತದೆ. ಜುಲೈವರೆಗೆ ಯಾವುದೇ ಗ್ರಾಹಕರು ಬಿಲ್ ಬಾಕಿ ಉಳಿಸಿಕೊಂಡಿದ್ದರೆ ಅದನ್ನು ಪಾವತಿಸಬೇಕಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X