ಆರು ರಾಜ್ಯಗಳಲ್ಲಿ 85 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದೆ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ತರಾಟೆ

Date:

Advertisements

ಪ್ರಶ್ನೆ ಪತ್ರಿಕೆ ಹೇಳಿಕೆ ವಿಚಾರದಲ್ಲಿ ಬಿಜೆಪಿ ಸರ್ಕಾರವನ್ನು ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ. ಆರು ರಾಜ್ಯಗಳಲ್ಲಿ 85 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ, “ಪ್ರಶ್ನೆ ಪತ್ರಿಕೆ ಸೋರಿಕೆಯು ಒಂದು ವೈಫಲ್ಯತೆಯಾಗಿದ್ದು, ಅದು ಗಂಭೀರವಾದ ಸಮಸ್ಯೆಯಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಸರ್ಕಾರಗಳು ಭಿನ್ನಾಭಿಪ್ರಾಯವನ್ನು ತೊರೆದು ಕಠಿಣ ಕ್ರಮವನ್ನು ತೆಗೆದುಕೊಂಡರೆ ಮಾತ್ರ ಈ ಸಮಸ್ಯೆಗೆ ಪರಿಹಾರ ಕಾಣಲು ಸಾಧ್ಯ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕೆಪಿಎಸ್‌ಸಿ ಕರ್ಮಕಾಂಡ | ಪ್ರಶ್ನೆ ಪತ್ರಿಕೆ ತಯಾರಿಕೆಗೆ ‘ಗೂಗಲ್ ಟ್ರಾನ್ಸ್‌ಲೇಟ್‌’ ಬಳಸಿತಾ ಆಯೋಗ?

Advertisements

“ಆರು ರಾಜ್ಯಗಳಲ್ಲಿ 85 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದು ನಮ್ಮ ದೇಶದ ಯುವಕರಿಗೆ ಅತೀ ಅಪಾಯಕಾರಿ ಚಕ್ರವ್ಯೂಹವಾಗಿ ಮಾರ್ಪಟ್ಟಿದೆ” ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದು ಕಷ್ಟಪಟ್ಟು ಕಲಿಯುವ ವಿದ್ಯಾರ್ಥಿಗಳನ್ನು ಮತ್ತು ಅವರ ಕುಟುಂಬವನ್ನು ಅನಿಶ್ಚಿತತೆ ಮತ್ತು ಚಿಂತೆಗೆ ದೂಡುತ್ತದೆ. ಅವರ ಪರಿಶ್ರಮದ ಫಲವನ್ನು ಅವರಿಂದ ಕಿತ್ತುಕೊಂಡತಾಗುತ್ತದೆ. ಇದು ಮುಂದಿನ ಪೀಳಿಗೆಗೆ ಅಪ್ರಾಮಾಣಿಕತೆಯು ಕಷ್ಟಪಡುವುದಕ್ಕಿಂತ ಉತ್ತಮ ಎಂಬ ತಪ್ಪು ಸಂದೇಶವನ್ನು ನೀಡುತ್ತದೆ” ಎಂದು ಕಾಂಗ್ರೆಸ್ ನಾಯಕ ಆತಂಕ ವ್ಯಕ್ತಪಡಿಸಿದ್ದಾರೆ.

“ನೀಟ್ ಪೇಪರ್ ಸೋರಿಕೆಯು ದೇಶದಲ್ಲಿ ಅತೀ ದೊಡ್ಡ ಸುದ್ದಿಯಾಗಿ ಒಂದು ವರ್ಷವೂ ಆಗಿಲ್ಲ. ನಮ್ಮ ವಿರೋಧದ ಬೆನ್ನಲ್ಲೇ ಮೋದಿ ಸರ್ಕಾರ ಹೊಸ ಕಾನೂನಿನ ಮೂಲಕ ಅಭ್ಯರ್ಥಿಗಳನ್ನು ಸಮಾಧಾನಪಡಿಸಿತು. ಆದರೆ ಇತ್ತೀಚೆಗೆ ಆಗಾಗ ಸುದ್ದಿಯಾಗುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ನೋಡಿದಾಗ ಈ ಕಾನೂನು ಕೂಡಾ ವೈಫಲ್ಯವಾಗಿದೆ ಎಂದು ಖಚಿತ ಪಡಿಸುತ್ತದೆ” ಎಂದು ಅಭಿಪ್ರಾಯಿಸಿದರು.

“ಈ ಗಂಭೀರ ಸಮಸ್ಯೆಯು ಆಡಳಿತಾತ್ಮಕ ವೈಫಲ್ಯವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಸರ್ಕಾರಗಳು ಭಿನ್ನಾಭಿಪ್ರಾಯವನ್ನು ತೊರೆದು ಕಠಿಣ ಕ್ರಮವನ್ನು ತೆಗೆದುಕೊಂಡರೆ ಮಾತ್ರ ಈ ಸಮಸ್ಯೆಗೆ ಪರಿಹಾರ ಕಾಣಲು ಸಾಧ್ಯ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X