ಹಂಪಿಯಲ್ಲಿ ಜಿ20 ಶೃಂಗಸಭೆ; ರಾಜ್ಯದ ಬೊಕ್ಕಸಕ್ಕೆ 47 ಕೋಟಿ ರೂ. ಹೊರೆ

Date:

Advertisements

ವಿಜಯನಗರ ಜಿಲ್ಲೆಯ ಐತಿಹಾಸಿಕ ತಾಣ ಹಂಪಿಯಲ್ಲಿ ಜುಲೈ 9 ರಿಂದ 16ರವರೆಗೆ ಜಿ20 ಶೃಂಗಸಭೆ (ಸಾಂಸ್ಕೃತಿಕ ಕಾರ್ಯಕಾರಿ ಸಮಿತಿ ಮತ್ತು ಶೆರ್ಪಾ ಸಭೆ) ನಡೆಯಲಿದೆ. ಶೃಂಗಸಭೆಗಾಗಿ ರಾಜ್ಯ ಸರ್ಕಾರವು 47 ಕೋಟಿ ರೂಪಾಯಿಗಳನ್ನು ಖರ್ಚು ಮಾಡುವ ಸಾಧ್ಯತೆ ಇದೆ.

ಶುಕ್ರವಾರ ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್ ಅವರು ಸಭೆಯ ಸಿದ್ಧತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಒಟ್ಟಾಗಿ ಸುಮಾರು 46.7 ಕೋಟಿ ರೂ. ಖರ್ಚು ಮಾಡಲಿದ್ದು, ರಸ್ತೆಗಳ ದುರಸ್ತಿ, ಇಂಟರ್ನೆಟ್ ಸಂಪರ್ಕ, ಚರಂಡಿ ವ್ಯವಸ್ಥೆ, ಪೊಲೀಸ್‌ ಔಟ್‌ಪೋಸ್ಟ್‌, ವಾಹನ ವ್ಯವಸ್ಥೆಗೆ ಹೆಚ್ಚು ಖರ್ಚಾಗುತ್ತದೆ ಎಂದು ಹೇಳಲಾಗಿದೆ.

ಇದಲ್ಲದೇ, ಹಂಪಿಯಲ್ಲಿ ಮುಂದಿನ ಎಂಟು ತಿಂಗಳವರೆಗೆ ಮಾಸಿಕ 2 ಕೋಟಿ ರೂಪಾಯಿ ವೆಚ್ಚದಲ್ಲಿ ಕಣ್ಗಾವಲು ಕ್ಯಾಮೆರಾಗಳು ಮತ್ತು ಇತರ ರಸ್ತೆ ಸುರಕ್ಷತಾ ಸಾಧನಗಳನ್ನು ಅಳವಡಿಸಲು ಗೃಹ ಇಲಾಖೆ ಮುಂದಾಗಿದೆ. ಆದರೆ, ಇಲಾಖೆಯ ಸಂಪೂರ್ಣ ಪ್ರಸ್ತಾವನೆಯನ್ನು ಅಂಗೀಕರಿಸಲಾಗುವುದಿಲ್ಲ ಎಂದು ಹಿರಿಯ ಸರ್ಕಾರಿ ಅಧಿಕಾರಿಗಳು ಹೇಳಿರುವುದಾಗಿ ವರದಿಯಾಗಿದೆ.

Advertisements

47 ಕೋಟಿ ರೂ. ವೆಚ್ಚವು ಜಿ20 ಶೃಂಗಸಭೆಗಾಗಿ ಮಾತ್ರವಲ್ಲ, ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ವ್ಯಯಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏತನ್ಮಧ್ಯೆ, ಸಭೆಗಳಲ್ಲಿ ಭಾಗವಹಿಸುವ ಪ್ರತಿನಿಧಿಗಳಿಗೆ ‘ಹಂಪಿ ವೀಕ್ಷಣೆ’ ಕಾರ್ಯಕ್ರಮವನ್ನು ರಾಜ್ಯ ಪ್ರಸ್ತಾಪಿಸಿದೆ. ಇವುಗಳಲ್ಲಿ ಎರಡು ದಿನಗಳ ಕಾಲ ಸ್ಮಾರಕಗಳ ವೀಕ್ಷಣೆ, ಯೋಗ ಕಾರ್ಯಕ್ರಮ, ತುಂಗಭದ್ರಾ ನದಿ ದಡದಲ್ಲಿ ಚಾರಣ ನಡೆಯಲು ಸರ್ಕಾರ ಯೋಜಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X