‘ಆಸ್ಪತ್ರೆಯ ಮೇಲೆ ದಾಳಿ ನಡೆಸಿದ್ದು ಇಸ್ರೇಲ್ ಅಲ್ಲ’ ಎಂದ ಅಮೆರಿಕ ಅಧ್ಯಕ್ಷ ಜೋ ಬೈಡನ್

Date:

Advertisements

ಹಮಾಸ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷವು 12ನೇ ದಿನಕ್ಕೆ ತಲುಪಿರುವ ಮಧ್ಯೆಯೇ ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಂದು ಇಸ್ರೇಲ್ ರಾಜಧಾನಿ ಟೆಲ್ ಅವೀವ್ ತಲುಪಿದ್ದಾರೆ.

ವಿಮಾನ ನಿಲ್ದಾಣ ತಲುಪಿದ ಬಳಿಕ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿಯಾಗಿ ಅಪ್ಪಿಕೊಂಡಿದ್ದಾರೆ.

ಆ ಬಳಿಕ ಬೈಡನ್ ಟೆಲ್ ಅವೀವ್‌ನಲ್ಲಿ ಇಸ್ರೇಲ್ ಪ್ರಧಾನಿಯೊಂದಿಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಗಾಝಾದ ಆಸ್ಪತ್ರೆ ಮೇಲೆ ನಡೆದಿರುವ ದಾಳಿಯನ್ನು ಇಸ್ರೇಲ್ ನಡೆಸಿಲ್ಲ ಎನ್ನುವ ಮೂಲಕ ಇಸ್ರೇಲ್ ವಿರುದ್ಧದ ಆರೋಪವನ್ನು ತಳ್ಳಿ ಹಾಕಿದ್ದಾರೆ.

Advertisements

‘ಗಾಝಾದ ಆಸ್ಪತ್ರೆಯ ಮೇಲೆ ನಡೆದಿರುವ ದಾಳಿಯಿಂದ ತುಂಬಾ ದುಃಖಿತನಾಗಿದ್ದೇನೆ. ನಾನು ನೋಡಿದ್ದನ್ನು ಆಧರಿಸಿ ಹೇಳುವುದಾದರೆ ಇಸ್ರೇಲ್ ಆಸ್ಪತ್ರೆಯ ಮೇಲೆ ಬಾಂಬ್ ಹಾಕಿಲ್ಲ. ಅದನ್ನು ಮಾಡಿದ್ದು ಬೇರೆಯವರ ತಂಡ’ ಎನ್ನುವ ಮೂಲಕ ಇಸ್ರೇಲ್‌ಗೆ ಕ್ಲೀನ್‌ಚಿಟ್ ನೀಡಿದ್ದಾರೆ.

ಈ ಮೂಲಕ ಆಸ್ಪತ್ರೆ ಮೇಲಿನ ದಾಳಿಯ ಘಟನೆಗೆ ಹಮಾಸ್‌ ಅನ್ನು ನೇರವಾಗಿ ಉಲ್ಲೇಖಿಸದೆ ‘ಬೇರೆಯವರ ತಂಡ’ ಎಂದು ಹೇಳಿ, ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ್ದು, ಈಗ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.

‘ತನ್ನನ್ನು ರಕ್ಷಿಸಿಕೊಳ್ಳಲು ಇಸ್ರೇಲ್‌ಗೆ ಬೇಕಾದ ಎಲ್ಲವನ್ನೂ ವಾಷಿಂಗ್ಟನ್ ನೀಡುತ್ತದೆ. ಅಕ್ಟೋಬರ್ 7ರಂದು ನಡೆದ ಹಠಾತ್ ದಾಳಿಯಲ್ಲಿ ಇಸ್ರೇಲಿ ನಾಗರಿಕರ ಹತ್ಯೆಯು ಹಮಾಸ್, ಐಸಿಸ್‌ಗಿಂತಲೂ ಕೆಟ್ಟದಾಗಿದೆ. ಹಮಾಸ್ ಪ್ಯಾಲೆಸ್ತೀನ್ ಜನರ ಶತ್ರುಗಳು. ಹಮಾಸ್ ವಿರುದ್ಧ ಅಮೆರಿಕ ಇಸ್ರೇಲ್ ಜತೆ ನಿಂತಿದೆ ಎಂದು ಇಲ್ಲಿ ಹೇಳಬಯಸುತ್ತೇನೆ’ ಎಂದು ಬೈಡನ್ ಹೇಳಿದರು.

ಈ ವೇಳೆ ಬೈಡನ್ ಬಲಬದಿಯಲ್ಲಿ ಕುಳಿತಿದ್ದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಲೆಯಲ್ಲಾಡಿಸುತ್ತಿದ್ದ ದೃಶ್ಯ ಕಂಡು ಬಂತು. ಅಮೆರಿಕ ಅಧ್ಯಕ್ಷರ ಹೇಳಿಕೆಯು, ಸ್ವಂತದ್ದಲ್ಲ. ಇಸ್ರೇಲ್ ಹೇಳಿದ್ದನ್ನಷ್ಟೇ ಹೇಳಿದ್ದಾರೆ. ಇಸ್ರೇಲ್ ನಡೆಸಿರುವ ಯುದ್ಧಾಪರಾಧವನ್ನು ಬಹಿರಂಗವಾಗಿ ಒಪ್ಪಿಕೊಳ್ಳಲು ಅಮೆರಿಕ ತಯಾರಿಲ್ಲ ಎಂದು ನೆಟ್ಟಿಗರು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ಬೈಡನ್ ವಿರುದ್ಧ ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X