ಸೆ. 30ರೊಳಗೆ ಎಸ್‌ಐಆರ್‌ ಆರಂಭಕ್ಕೆ ಸಿದ್ಧರಾಗಿ: ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ

Date:

Advertisements

ಸೆಪ್ಟೆಂಬರ್ 30ರೊಳಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ(SIR) ಸಿದ್ದರಾಗಿ ಎಂದು ಚುನಾವಣಾ ಆಯೋಗವು ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದೆ. ಅಕ್ಟೋಬರ್-ನವೆಂಬರ್ ಆರಂಭದಲ್ಲಿಯೇ ಮತದಾರರ ಪಟ್ಟಿ ಪರಿಷ್ಟಕರಣೆ ಕಾರ್ಯ ಆರಂಭವಾಗಬಹುದು. ದೆಹಲಿಯಲ್ಲಿ ಈ ತಿಂಗಳ ಆರಂಭದಲ್ಲಿ ನಡೆದ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ (ಸಿಇಒ) ಸಮ್ಮೇಳನದಲ್ಲಿ ಈ ಸೂಚನೆ ನೀಡಲಾಗಿದೆ, ಆದರೆ ಸೆಪ್ಟೆಂಬರ್ 30ರವರೆಗೆ ಗಡುವು ನಿಗದಿಪಡಿಸಲಾಗಿದೆ ಎಂದು ಹೇಳಲಾಗಿದೆ.

ಹಾಗೆಯೇ ಕೊನೆಯ ಎಸ್‌ಐಆರ್ ನಂತರ ಪ್ರಕಟವಾದ ತಮ್ಮ ರಾಜ್ಯಗಳ ಮತದಾರರ ಪಟ್ಟಿಗಳನ್ನು ಸಿದ್ಧವಾಗಿಡಲು ಸಿಇಒಗಳಿಗೆ ತಿಳಿಸಲಾಗಿದೆ. ಇನ್ನು ಹಲವು ರಾಜ್ಯದ ಸಿಇಒಗಳು ಈಗಾಗಲೇ ಪಟ್ಟಿಗಳನ್ನು ಸಿದ್ದಪಡಿಸಿದ್ದಾರೆ, ವೆಬ್‌ಸೈಟ್‌ಗಳಲ್ಲಿದೆ. ದೆಹಲಿ ಸಿಇಒ ವೆಬ್‌ಸೈಟ್‌ನಲ್ಲಿ 2008ರ ಮತದಾರರ ಪಟ್ಟಿ ಇದೆ ಎಂದು ವರದಿಯಾಗಿದೆ. ಇನ್ನು ಬಹುತೇಕ ರಾಜ್ಯಗಳಲ್ಲಿ 2002 ಮತ್ತು 2004ರಲ್ಲಿ ಕೊನೆಯ ಬಾರಿಗೆ ಎಸ್‌ಐಆರ್ ಪ್ರಕ್ರಿಯೆ ನಡೆದಿದೆ.

ಇದನ್ನು ಓದಿದ್ದೀರಾ? ಎಸ್‌ಐಆರ್‌ ವಿರೋಧಿಸಿ ಸೋನಿಯಾ ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಸಂಸದರಿಂದ ಪ್ರತಿಭಟನೆ

ಉತ್ತರಾಖಂಡದಲ್ಲಿ ಕೊನೆಯ ಬಾರಿಗೆ 2006ರಲ್ಲಿ ಎಸ್‌ಐಆರ್ ನಡೆದಿದ್ದು, ಆ ವರ್ಷದ ಮತದಾರರ ಪಟ್ಟಿ ಈಗ ರಾಜ್ಯ ಚುನಾವಣಾ ಆಯೋಗ ವೆಬ್‌ಸೈಟ್‌ನಲ್ಲಿದೆ. ಈಗಾಗಲೇ ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆದಿದ್ದು, ಲಕ್ಷಾಂತರ ಮತದಾರರ ಹೆಸರುಗಳನ್ನು ಅಳಿಸಿ ಹಾಕಲಾಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಹಾರ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ತರಾತುರಿಯಲ್ಲಿ ನಡೆಸಲಾದ ಈ ಪ್ರಕ್ರಿಯೆಯ ಬಗ್ಗೆ ವಿಪಕ್ಷಗಳು ಪ್ರಶ್ನೆ ಎತ್ತಿವೆ. ಹಾಗೆಯೇ ಸಾಮಾನ್ಯವಾಗಿ ಬಡ, ಮಧ್ಯಮ ವರ್ಗದ ಜನರಲ್ಲಿ ಇಲ್ಲದ ದಾಖಲೆಗಳನ್ನೇ ಪುರಾವೆಯಾಗಿ ಪರಿಗಣಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಚುನಾವಣಾ ಆಯೋಗ ಎಸ್‌ಐಆರ್ ಪ್ರಕ್ರಿಯೆಯನ್ನು ಇತರೆ ರಾಜ್ಯಗಳ್ಲಲಿಯೂ ನಡೆಸಲು ಮುಂದಾಗಿದೆ.

2026ರಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X