ಗಿಫ್ಟ್‌ ಪಾಲಿಟಿಕ್ಸ್‌ | ಬೆಳ್ಳಿ ಎಂದು ನಕಲಿ ಬೆಳ್ಳಿ ಲಕ್ಷ್ಮಿ ಫೋಟೋ ಕೊಟ್ಟ ಬಿಜೆಪಿ ಶಾಸಕ

Date:

  • ಬೆಳ್ಳಿ ಲಕ್ಷ್ಮಿ ಫೋಟೋ ಹರಿದ ಮಹಿಳೆ
  • ಬಿಜೆಪಿ ಉಡುಗೊರೆಗೆ ಮಹಿಳೆ ಆಕ್ರೋಶ

ರಾಜ್ಯ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತದಾರರನ್ನು ಸೆಳೆಯಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ನಡುವೆ ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಬೆಳ್ಳಿ ಫೋಟೋ ಎಂದು ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ. ಆದರೆ, ಬಿಜೆಪಿ ಶಾಸಕ ನೀಡಿರುವ ಬೆಳ್ಳಿಯ ಅಸಲಿಯತ್ತನ್ನು ಮಹಿಳೆಯೊಬ್ಬರು ಬಯಲು ಮಾಡಿದ್ದಾರೆ.

ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದೇನೆ ಎಂದು ಸದಾ ಹೇಳಿಕೊಳ್ಳುವ ಪ್ರೀತಂ ಗೌಡ ಅವರು ಮಹಿಳೆಯರಿಗೆ ಬೆಳ್ಳಿಯ ಲಕ್ಷ್ಮಿ ಫೋಟೋ ನೀಡಿದ್ದಾರೆ. ಆದರೆ, ಅದು ಬೆಳ್ಳಿಯದ್ದಲ್ಲ ನಕಲಿ ಎಂಬುದು ವಿಡಿಯೋ ಮೂಲಕ ಬಹಿರಂಗವಾಗಿದೆ.

ಕಳೆದ ಹದಿನೈದು ದಿನದಿಂದ ಹಾಸನ ಕ್ಷೇತ್ರದ ವ್ಯಾಪ್ತಿಯಲ್ಲಿ ಅಷ್ಟಲಕ್ಷ್ಮಿ ಪೂಜೆ ಹೆಸರಿನಲ್ಲಿ ಮತದಾರರ ಸೆಳೆಯಲು ಯತ್ನ ನಡೆಯುತ್ತಿದೆ. ಶಾಸಕ ಪ್ರೀತಂಗೌಡ ಬೆಂಬಲಿಗರಿಂದ ವಾರ್ಡ್‌ವಾರು ಹಾಗು ಗ್ರಾ.ಪಂಚಾಯಿತಿವಾರು ಕಾರ್ಯಕ್ರಮ ನಡೆಯುತ್ತಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮುಸ್ಲಿಮರ ಮೀಸಲಾತಿ ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ; ವಿಚಾರಣೆ ಮುಂದೂಡಿಕೆ

ಬಿಜೆಪಿ ಶಾಸಕ ನೀಡಿದ ಬೆಳ್ಳಿ ಲಕ್ಷ್ಮಿ ಫೋಟೋದ ಅಸಲಿಯತ್ತು ಬಯಲು ಮಾಡಿದ ಮಹಿಳೆಯೊಬ್ಬರು ವಿಡಿಯೋದಲ್ಲಿ, “ಇದು ಬೆಳ್ಳಿ ಫೋಟೋ ಅಂತ ಕೊಟ್ಟವ್ರೆ, ಬೆಳ್ಳಿದೋ ಬಂಗಾರದ್ದೋ ನೋಡೋಣ, ಬೆಳ್ಳಿನ ನೀರಿಗೆ ಬಿಡ್ತಿವಿ ನೋಡಿ” ಎಂದು ಫೋಟೋವನ್ನು ಬಿಚ್ಚಿದ್ದಾರೆ.

ಬೆಳ್ಳಿ ಬಣ್ಣದ ಪೇಪರ್ ಮೂಲಕ ಲಕ್ಷ್ಮಿ ಫೋಟೋ ಮಾಡಲಾಗಿದ್ದು, “ನೋಡಿ, ಇದು ಬೆಳ್ಳಿ ಲಕ್ಷ್ಮಿ, ಇದು ಮಾರಿದ್ರೆ ಮೂವತ್ತು ಸಾವ್ರ ಸಿಗುತ್ತೆ ನೋಡಿ” ಎಂದು ಹರಿದು ಬಿಸಾಕಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...