ಬಾಲಕಿ ಕೊಲೆ | ಇನ್‌ಸ್ಪೆಕ್ಟರ್ ಅಮಾನತು, ವರದಿ ಸಲ್ಲಿಸಲು ಎಡಿಜಿಪಿಗೆ ಸೂಚನೆ: ಸಚಿವ ಪರಮೇಶ್ವರ್‌

Date:

ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪದೇ ಪದೆ ಸಂಭವಿಸುತ್ತಿರುವ ಕೊಲೆ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಎಡಿಜಿಪಿ ಅವರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

- Advertisement -

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪದೇ ಪದೆ ಘಟನೆಗಳು ಸಂಭವಿಸುತ್ತಿವೆ. ಇದಕ್ಕೆ ಕಾರಣ ಏನು? ಯಾವ ಫ್ಯಾಕ್ಟರ್ ಎಂಬುದನ್ನು ಗುರುತಿಸಿ ವರದಿ ಸಲ್ಲಿಸಲಿದ್ದಾರೆ. ಬಳಿಕ ಸಾಧ್ಯವಾದರೆ ನಾನು ಹೋಗಿ ಬರುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ಯುವತಿ ಅಂಜಲಿ ಕೊಲೆ‌ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಕಾನೂನು ಪ್ರಕಾರ ಏನು ಕಠಿಣ ಶಿಕ್ಷೆ ಆಗಬೇಕು, ಅದನ್ನು ಮಾಡುತ್ತೇವೆ. ಇದರಲ್ಲಿ ಯಾವುದೇ ಮುಲಾಜಿಲ್ಲ. ಪೊಲೀಸರ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಅಮಾನತು ಮಾಡಲಾಗಿದೆ. ಮುಂದೆ ಏನೆಲ್ಲ ಕಾನೂನು ಕ್ರಮ ತೆಗೆದುಕೊಳ್ಳಬೇಕು ಅದೆಲ್ಲವನ್ನು ಮಾಡುತ್ತೇವೆ‌” ಎಂದು ತಿಳಿಸಿದರು.

ಬೆದರಿಕೆ ಬಗ್ಗೆ ದೂರು ಕೊಟ್ಟಿದ್ದರು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಪೋಷಕರು ರಿಟರ್ನ್ ಕಂಪ್ಲೇಂಟ್ ಕೊಟ್ಟಿಲ್ಲ. ಈ ಬಗ್ಗೆ ತಿಳಿಸಿದ್ದರು ಎಂಬುದು ನನಗೆ ಬಂದಿರೋ ವರ್ತಮಾನ. ಅದಕ್ಕಾಗಿ ಇನ್‌ಸ್ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ. ಪೋಷಕರು ನಿಜವಾಗಿಯೂ ಹೇಳಿದ್ದರೆ? ಅಥವಾ ಇಲ್ಲವೇ ಎಂಬುದರ ಕುರಿತು ತನಿಖೆ ನಡೆಯುತ್ತದೆ. ಇದರಲ್ಲಿ ಅಧಿಕಾರಿಗಳ ತಪ್ಪು ಕಂಡು ಬಂದರೆ ಮುಂದಿನ ಕ್ರಮ ಜರುಗಿಸಲಾಗುವುದು” ಎಂದರು

ಎಸ್ಐಟಿ ರಿಪೋರ್ಟ್ ಮಂಡ್ಯ ಶಾಸಕರಿಗೆ ಹೋಗುತ್ತಿದೆ.‌ ಗೃಹ ಸಚಿವರಿಗೆ ಹೋಗುತ್ತಿಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಇಂತಹ ವಿಚಾರಗಳನ್ನು ಸಾರ್ವಜನಿಕ ವಲಯಕ್ಕೆ ತರುವುದು ಸರಿಯಲ್ಲ ಎಂಬುದು ಕುಮಾರಸ್ವಾಮಿಯವರಿಗೂ ಚೆನ್ನಾಗಿ ಗೊತ್ತಿದೆ. ತನಿಖೆ ನಡೆಯುತ್ತಿದೆ. ಮಂಡ್ಯ ಶಾಸಕರಿಗೆ ಯಾರು ಬ್ರೀಫಿಂಗ್ ಮಾಡುತ್ತಾರೆ? ಸುಮ್ಮನೆ ಇದೆಲ್ಲ ಹೇಳೋದು ಸುಲಭ. ನಮಗೆಲ್ಲ ತುಂಬ ಜವಾಬ್ದಾರಿ ಇದೆ. ಜವಾಬ್ದಾರಿಯಿಂದ ಕೆಲಸ ಮಾಡುತ್ತೇವೆ. ಯಾವ ಮುಲಾಜಿಗೂ ಕೂಡ ಒಳಪಡುವುದಿಲ್ಲ. ಇದನ್ನು ಕುಮಾರಸ್ವಾಮಿಯವರಿಗೂ ಸಹ ಹೇಳಲು ಬಯಸುತ್ತೇನೆ. ಎಸ್ಐಟಿ ಸಮರ್ಥವಾಗಿ ಕೆಲಸ ಮಾಡುತ್ತಿದೆ. ನನಗಾಗಲಿ ಅಥವಾ ಮುಖ್ಯಮಂತ್ರಿಯವರಿಗಾಗಲಿ ಯಾವುದನ್ನು ಬ್ರೀಫಿಂಗ್ ಮಾಡಬೇಕೋ ಅದನ್ನು ಎಸ್ಐಟಿ ಮಾಡುತ್ತದೆ” ಎಂದು ಸ್ಪಷ್ಟಪಡಿಸಿದರು.

“ಸಂಸದ ಪ್ರಜ್ವಲ್‌ ರೇವಣ್ಣನನ್ನು ವಿದೇಶದಿಂದ ಕರೆ ತರುವ ಪ್ರಕ್ರಿಯೆ ನಡೆಯುತ್ತಿದೆ. ಅವರನ್ನು ಕರೆತಂದು, ಏನೆಲ್ಲ ಕಾನೂನು ಕ್ರಮ ಕೈಗೊಳ್ಳಬೇಕೋ ಅಲ್ಲಿಯವರೆಗೂ ನಡೆಯುತ್ತಿರುತ್ತದೆ” ಎಂದರು.

ಪ್ರಜ್ವಲ್ ರೇವಣ್ಣ ಅವರಿಗೆ ಸರ್ಕಾರ ಸಹಾಯ ಮಾಡುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿ, “ಬಿಜೆಪಿಯವರು ಹೇಳುತ್ತಾರೆ, ಜನತಾದಳದವರು ಹೇಳುತ್ತಾರೆ. ಸರ್ಕಾರಕ್ಕೆ ಜವಾಬ್ದಾರಿ ಇದೆಯಲ್ಲವೇ? ಇಂತಹ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳಲು ಆಗುತ್ತದೆಯೇ? ವಿಪಕ್ಷದಲ್ಲಿರುವ ಅವರು ಅದನ್ನೇ ಹೇಳಬೇಕು. ಸರ್ಕಾರ ಒಳ್ಳೆ ಕೆಲಸ ಮಾಡುತ್ತಿದೆ ಎಂದು ಹೇಳಲು ಅವರಿಗೆ ಸಾಧ್ಯವಿಲ್ಲ. ಅದು ನನಗು ಅರಿವಿದೆ. ನಾವು ಮಾಡಬೇಕಾದ ಕೆಲಸವನ್ನು ಮಾಡುತ್ತೇವೆ” ಎಂದು ಹೇಳಿದರು.

ಗೃಹ ಸಚಿವ ಆಪ್ತನೆಂದು ವಂಚನೆ ಕುರಿತು

“ಕೊರಟಗೆರೆ ಕ್ಷೇತ್ರದ ವ್ಯಕ್ತಿ ಎಲ್ಲಿಯೋ ನನ್ನ ಜೊತೆ ಫೋಟೋ ತೆಗೆಸಿಕೊಂಡಿದ್ದ. ಇತ್ತೀಚೆಗೆ ಫೋಟೋ ತೆಗೆಸಿಕೊಳ್ಳುವುದು ಸಾಮಾನ್ಯವಾಗಿದೆ. ಒಳ್ಳೆಯದಕ್ಕೆ ಬಳಸಿದ್ದರೆ ಸರಿ. ಅದನ್ನು ದುರುಪಯೋಗಪಡಿಸಿಕೊಂಡಿರುವುದು ತಪ್ಪು. ಜನರಿಂದ ಹಣ ಪಡೆದುಕೊಂಡು ವಂಚಿಸಿದ್ದಾನೆ. ಹೀಗಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾನೂನು‌ ಪ್ರಕಾರ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ಸಿಎಂ ಜೊತೆ ಸಭೆ

“ಮುಖ್ಯಮಂತ್ರಿಯವರು ಕರೆದಿರುವ ಸಭೆಯ ಅಜೆಂಡಾ ಏನೆಂಬುದು ಗೊತ್ತಾಗಿಲ್ಲ‌. ರಾಜ್ಯದಲ್ಲಿ ಮಳೆ ಪ್ರಾರಂಭವಾಗಿದೆ. ಆದರೂ ಬರದ ಪರಿಣಾಮ ಇನ್ನು ಕಡಿಮೆಯಾಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರು ಸಭೆಯಲ್ಲಿ ಚರ್ಚಿಸಬಹುದು. ನಾನು ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ...