ತಲಾ 10 ಕೆಜಿ ಅಕ್ಕಿ ಕೊಟ್ಟರೆ, ‘ನುಡಿದಂತೆ ನಡೆದ ಸರ್ಕಾರ’ವೆಂದು ನಾವೇ ಹೇಳುತ್ತೇವೆ: ಬಿಜೆಪಿ ಸಂಸದ

Date:

Advertisements

ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಭರವಸೆ ನೀಡಿ, ಈಗ ಐದು ಕೆ.ಜಿ ಕೊಡುತ್ತೇವೆ ಎನ್ನುವುದು ಸರಿಯಲ್ಲ. ಈಗಾಗಲೇ ಕೇಂದ್ರ ಸರ್ಕಾರ ಐದು ಕೆ.ಜಿ ಅಕ್ಕಿ ಕೊಡುತ್ತಿದೆ. ಕಾಂಗ್ರೆಸ್‌ ಭರವಸೆ ನೀಡಿರುವ 10 ಕೆ.ಜಿ ಅಕ್ಕಿಯ ಬದಲಿಗೆ 340 ರೂ. ಪಡಿತರ ಖಾತೆಗೆ ಹಾಕಬೇಕು ಎಂದು ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಹೇಳಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪಡಿತರದಾರರಿಗೆ ತಲಾ 10 ಕೆ.ಜಿ ಕೊಟ್ಟರೆ ನುಡಿದಂತೆ ನಡೆದ ಸರ್ಕಾರ ಎಂದು ನಾವೂ ಹೇಳುತ್ತೇವೆ” ಎಂದಿದ್ದಾರೆ.

ವಿಧಾನಸಭಾ ಚುನಾವಣೆ ಸಮಯದಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಕಾಂಗ್ರೆಸ್‌ ಘೋಷಿಸಿತ್ತು. ಕಾಂಗ್ರೆಸ್ ಸರ್ಕಾರ ರಚಿಸಿದ ಬಳಿಕ, 10 ಕೆ.ಜಿ ಅಕ್ಕಿ ಕೊಡಲು ಕಸರತ್ತು ನಡೆಸಿತ್ತು. ಆದರೆ, ಕೇಂದ್ರವು ಹೆಚ್ಚುವರಿ ಅಕ್ಕಿ ಕೊಡಲು ಸಾಧ್ಯವಿಲ್ಲವೆಂದು ಹೇಳಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತರ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ, ಅಕ್ಕಿ ಖರೀದಿ ಬಗ್ಗೆ ಮಾತನಾಡಿದ್ದರು. ಆದರೆ, ಯಾವ ರಾಜ್ಯಗಳಿಂದಲೂ ಅಗತ್ಯ ಅಕ್ಕಿ ಸಿಗದ ಪರಿಣಾಮ, ಐದು ಕೆ.ಜಿ ಅಕ್ಕಿ ಕೊಡುತ್ತೇವೆ. ಉಳಿದ ಐದು ಕೆ.ಜಿ ಅಕ್ಕಿ ಬದಲಿಗೆ 170 ರೂ. ಹಣವನ್ನು ಪಡಿತರದಾರರ ಖಾತೆ ಹಾಕುತ್ತೇವೆಂದು ಸರ್ಕಾರ ಹೇಳಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸರಕಾರ ಅಕ್ಕಿ ಕೊಟ್ಟು ಜನರು ತೃಪ್ತಿ ಆದರೆ ನಿಮ್ಮ ಪ್ರಶಂಸೆಗೆ ಯಾವುದೇ ಬೆಲೆ ಇಲ್ಲ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X