‘ಗೋ ಬ್ಯಾಕ್‌’ ಪ್ರತಿಭಟನೆ ಬಿಸಿ; ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಸೋಮಣ್ಣ

Date:

  • ಗ್ರಾಮಸ್ಥರೊಂದಿಗೆ ಇಂದು ಮಾತುಕತೆ ನಡೆಸಲಿರುವ ಸೋಮಣ್ಣ
  • ರಥ ಮಾಡಿಕೊಡುವುದಾಗಿ ಮಾತು ತಪ್ಪಿದ್ದಕ್ಕೆ ಸಚಿವರ ವಿರುದ್ಧ ಆಕ್ರೋಶ

ರಾಜ್ಯ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ತಮ್ಮ ವಿರುದ್ಧ ಚಾಮರಾಜನಗರದಲ್ಲಿ ನಡೆದ ಗೋ ಬ್ಯಾಕ್ ಪ್ರತಿಭಟನೆ ಎಚ್ಚರಿಕೆ ಬೆನ್ನಲ್ಲೇ ವಸತಿ ಸಚಿವ ವಿ ಸೋಮಣ್ಣ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಸೋಮಣ್ಣ ಅವರು ಚಾಮರಾಜನಗರ ತಾಲೂಕಿನ ಚೆನ್ನಪ್ಪನಪುರ ಗ್ರಾಮದಲ್ಲಿ 400 ವರ್ಷ ಪುರಾತನವಾದ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನಕ್ಕೆ ರಥ ಮಾಡಿಸಿಕೊಡುವುದಾಗಿ ಮತ್ತು ದೇಗುಲ ಜೀರ್ಣೋದ್ಧಾರ ಮಾಡುವುದಾಗಿ ಗ್ರಾಮದ ಜನರಿಗೆ ಭರವಸೆ ನೀಡಿದ್ದರು. ಆದರೆ, ತಮ್ಮ ಮಾತು ಉಳಿಸಿಕೊಳ್ಳುವಲ್ಲಿ ಸೋಮಣ್ಣ ವಿಫಲರಾಗಿದ್ದರೆಂಬುದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ ವಿಶೇಷ | ಸಾಮಾನ್ಯ ಅಶೋಕ್ ರನ್ನು ಸಾಮ್ರಾಟನನ್ನಾಗಿ ಬೆಳೆಸಿದವರಾರು?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಹಿನ್ನೆಲೆಯಲ್ಲಿ ಚಾಮರಾಜನಗರದ ಅಮಚಪುರ ಮತ್ತು ಚನ್ನಪ್ಪಪುರದ ಗ್ರಾಮಸ್ಥರು, ‘ಗೋ ಬ್ಯಾಕ್‌ ಸೋಮಣ್ಣ, ಸುಳ್ಳುಗಾರ ಸೋಮಣ್ಣ, ಚಾಮರಾಜನಗರ ಬಿಟ್ಟು ತೊಲಗಿ” ಎಂಬ ಪೋಸ್ಟರ್‌ ಹಿಡಿದು ಪ್ರತಿಭಟಿಸಿದ್ದರು. ಮಾರ್ಚ್ 26 ಅಥವಾ ಮಾರ್ಚ್ 27ರಂದು ಈ ಕುರಿತು ಸ್ಪಷ್ಟನೆ ನೀಡಬೇಕು, ಇಲ್ಲದಿದ್ದರೆ ಚುನಾವಣೆಯಲ್ಲಿ ಸೋಮಣ್ಣನವರನ್ನು ಬಹಿಷ್ಕರಿಸುವುದಾಗಿ ಸ್ಥಳೀಯರು ಆಕ್ರೋಶ ಹೊರಹಾಕಿದ್ದರು.

ಸ್ಥಳೀಯರ ಪ್ರತಿಭಟನೆಗೆ ಎಚ್ಚೆತ್ತುಕೊಂಡಿರುವ ಸೋಮಣ್ಣ ‘ಡ್ಯಾಮೇಜ್‌ ಕಂಟ್ರೋಲ್‌’ಗೆ ಮುಂದಾಗಿದ್ದು, ದಿಢೀರಾಗಿ ಇಂದು​ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಚನ್ನಪ್ಪನಪುರ ಗ್ರಾಮದ ವಿವಿಧ ಸಮುದಾಯಗಳ ಮುಖಂಡರ ಜೊತೆ ಮಾತುಕತೆ ನಡೆಸಿ,ಅಸಮಾಧಾನಗೊಂಡಿರುವ ಮುಖಂಡರನ್ನು ಸಮಧಾನಪಡಿಸುವ ಯೋಜನೆ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾವ ಉಚ್ಚಾಟನೆಗೂ ಹೆದರಲ್ಲ: ಈಶ್ವರಪ್ಪ

ಬಿಜೆಪಿಯಲ್ಲಿ ಬಂಡಾಯ ಎದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ...

ಶಿವಮೊಗ್ಗದಲ್ಲಿ ಬಂಡಾಯ ಸ್ಪರ್ಧೆ ಹಿನ್ನೆಲೆ : ಬಿಜೆಪಿಯಿಂದ ಕೆ ಎಸ್‌ ಈಶ್ವರಪ್ಪ ಉಚ್ಚಾಟನೆ

ರಾಜ್ಯದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ...