ಸೆ.18ರಿಂದ ಸಂಸತ್ತಿನ ವಿಶೇಷ ಅಧಿವೇಶನ ಕರೆದ ಕೇಂದ್ರ

Date:

ಕೇಂದ್ರ ಸರ್ಕಾರ ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ದಿನಗಳ ಕಾಲ ‘ಸಂಸತ್ತಿನ ವಿಶೇಷ ಅಧಿವೇಶನ’ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

- Advertisement -

“ಸಂಸತ್ತಿನ ವಿಶೇಷ ಅಧಿವೇಶನವನ್ನು ಸಪ್ಟೆಂಬರ್ 18 ರಿಂದ 22ರ ವರೆಗೆ ಕರೆಯಲಾಗಿದ್ದು ಒಟ್ಟು 5 ಅವಧಿಗಳು ಇರಲಿವೆ. 17ನೇ ಲೋಕಸಭೆಯ 13ನೇ ಅಧಿವೇಶನ ಹಾಗೂ ರಾಜ್ಯಸಭೆಯ 261 ನೇ ಅಧಿವೇಶನ ಇದಾಗಿರಲಿದೆ. ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಮುನ್ನೋಡುತ್ತಿದ್ದೇವೆ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಮಣಿಪುರ ಹಿಂಸಾಚಾರದ ವಿರುದ್ಧ ವಿರೋಧ ಪಕ್ಷಗಳು ನಡೆಸಿದ ಪ್ರತಿಭಟನೆ ಗದ್ದಲಗಳ ನಡುವೆ ಮುಂಗಾರು ಅಧಿವೇಶನವು ಇತ್ತೀಚೆಗೆ ಮುಕ್ತಾಯಗೊಂಡಿತ್ತು. ಅದಾಗಿ ಒಂದು ತಿಂಗಳಲ್ಲಿ ವಿಶೇಷ ಅಧಿವೇಶನ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲಿಯೂ ವಿಶೇಷ ಕಲಾಪಗಳು ನಡೆಯಲಿದ್ದು, ಒಟ್ಟು ಐದು ದಿನ ಅಧಿವೇಶನ ಜರುಗಲಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ವಾಪಸ್ ನೀಡಲು ಹಾಗೂ ಶೀಘ್ರದಲ್ಲಿಯೇ ಚುನಾವಣೆ ನಡೆಸಲು ಕಾಲಮಿತಿ ಸಿದ್ಧಪಡಿಸಲಾಗುವುದು ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಭರವಸೆ ನೀಡಿದ ಬೆನ್ನಲ್ಲೇ ವಿಶೇಷ ಅಧಿವೇಶನ ಕರೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಹಿಂಡೆನ್‌ಬರ್ಗ್ 2.0? ಒಸಿಸಿಆರ್‌ಪಿ ವರದಿಯ ನಂತರ ಅದಾನಿ ಷೇರುಗಳು ತೀವ್ರ ಕುಸಿತ

ಇತ್ತೀಚಿಗೆ ನಡೆದ ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20 ರಂದು ಪ್ರಾರಂಭವಾಗಿ ಆಗಸ್ಟ್ 12 ರಂದು ಮುಕ್ತಾಯವಾಯಿತು. ಆ ಸಂದರ್ಭದಲ್ಲಿ ಸರ್ಕಾರದಿಂದ 23 ಮಸೂದೆಗಳನ್ನು ಅಂಗೀಕರಿಸಲಾಯಿತು. ಮಣಿಪುರದ ಹಿಂಸಾಚಾರ ಮತ್ತು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ (ತಿದ್ದುಪಡಿ) 2023ರ ವಿವಾದಾತ್ಮಕ ಮಸೂದೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆದಿತ್ತು. ವಿಪಕ್ಷಗಳು ಸರ್ಕಾರ ಮಂಡಿಸಿದ ಯಾವುದೇ ಚರ್ಚೆಗಳಲ್ಲಿ ಪಾಲ್ಗೊಂಡಿರದೆ ಪ್ರತಿಭಟನೆ ನಡೆಸಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ ಅಮ್ಮ’

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ...

‘ಅಸ್ಸಲಾಮು ಅಲೈಕುಂ’ ‘ಜಜಾಕಲ್ಲಾ’ ಎಂದಿದ್ದಕೆ ಐಪಿಎಸ್ ಅಧಿಕಾರಿ ಎತ್ತಂಗಡಿ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ

ಸಾಮಾಜಿಕ ಜಾಲತಾಣದ ವಿಡಿಯೊವೊಂದರಲ್ಲಿ 'ಅಸ್ಸಲಾಮು ಅಲೈಕುಂ'(ನಿಮಗೆ ಶಾಂತಿಯಾಗಲಿ), 'ಇನ್ಶಾ ಅಲ್ಲಾ'(ದೇವರು ಇಚ್ಛಿಸಿದರೆ)...

ಸಿಜೆಪಿ ಪ್ರತಿಭಟನೆ: ಪೆಲೆಟ್‌ ಗನ್‌ ಬಳಕೆ, ಮಹಿಳೆಯರಿಗೆ ಕಿರುಕುಳ ಕುರಿತು ತನಿಖೆಗೆ ಸುಪ್ರೀಂ ಸೂಚನೆ

ಕಾಕ್‌ರೋಚ್‌ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜುಲೈ 20ರಂದು ನಡೆದ ಪ್ರತಿಭಟನೆಗೆ...