ಕೆಪಿಎಸ್​ಸಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ಒಂದು ಬಾರಿ ವಯೋಮಿತಿ ಸಡಿಲಿಕೆಗೆ ಅಸ್ತು

Date:

Advertisements

ಕರ್ನಾಟಕ ಲೋಕಸೇವಾ ಆಯೋಗವು ಹೊರಡಿಸಲಿರುವ ಅಧಿಸೂಚನೆ ಪ್ರಕಾರ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಹೊಸ ವರ್ಷದ ಕೊಡುಗೆ ನೀಡಿದೆ.

ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ನೀಡಿ, ಒಂದು ಬಾರಿಗೆ ಮಾತ್ರ ಅನ್ವಯಿಸಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ಸಭೆಯ ನಂತರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಈ ಮಾಹಿತಿ ಹಂಚಿಕೊಂಡರು.

“2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್​ಸಿ ಹೊರಡಿಸಲಿರುವ ಅಧಿಸೂಚನೆಯಡಿ ಅರ್ಹ ಅಭ್ಯರ್ಥಿಗಳು ಒಂದು ಬಾರಿಗೆ ಮಾತ್ರ ಈ ಪ್ರಯೋಜನ ಪಡೆದುಕೊಳ್ಳಲಿದ್ದಾರೆ. ಕೊರೋನಾ ಸಾಂಕ್ರಾಮಿಕ ಪಿಡುಗು ಹಾಗೂ ನೇಮಕ ವಿಳಂಬದಿಂದ ಅರ್ಹ ಅಭ್ಯರ್ಥಿಗಳು ವಯೋಮಿತಿ ಕಾರಣಕ್ಕೆ ವಂಚಿತರಾಗಲಿದ್ದಾರೆ ಎಂಬ ಆತಂಕವನ್ನು ಸರ್ಕಾರ ಕೊನೆಗಾಣಿಸಿದೆ. ಸಾಮಾನ್ಯ ವರ್ಗ- 35 ರಿಂದ 38, ಪ್ರವರ್ಗ 2ಎ, 2ಬಿ, 3ಎ, 3ಬಿ- 38 ರಿಂದ 41, ಎಸ್​ಟಿ, ಪ್ರವರ್ಗ-1: 40 ರಿಂದ 43 ವರ್ಷಕ್ಕೆ ವಯೋಮಿತಿ ಏರಿಕೆ ಮಾಡಿದೆ” ಎಂದು ಎಚ್.ಕೆ.ಪಾಟೀಲ್ ವಿವರಿಸಿದರು.

Advertisements

ಕನ್ನಡ ಭಾಷಾ ನಾಮಫಲಕ

ನಾಮಫಲಕದಲ್ಲಿ ಶೇ.50 ಕನ್ನಡ, ಉಳಿದ ಶೇ.50 ಅನ್ಯಭಾಷೆಗೆ ಅವಕಾಶ ಕಲ್ಪಿಸಿದ್ದ ನಿಯಮಕ್ಕೆ ತಿದ್ದುಪಡಿ ತಂದು, ಶೇ.60ರಷ್ಟು ಕನ್ನಡ, ಮಿಕ್ಕ ಶೇ.40ರಷ್ಟು ಅನ್ಯ ಭಾಷೆ ಬಳಕೆಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಸಂಬಂಧಿಸಿದ ನಿಯಮಕ್ಕೆ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ- 2024ಕ್ಕೆ ಅನುಮೋದನೆ ನೀಡುವ ಈ ಮೂಲಕ ಕನ್ನಡ ಪರ ಹೋರಾಟಗಾರರನ್ನು ಸಂತೈಸಲು, ನಾಡು-ನುಡಿಗೆ ಕಟಿಬದ್ಧವೆಂಬ ಸಂದೇಶವನ್ನು ಸರ್ಕಾರ ಸಾರಿದೆ.

ಇದನ್ನು ಓದಿದ್ದೀರಾ? ಸಾರಿಗೆ ನಿಗಮಗಳ ₹581 ಕೋಟಿ ಮೋಟಾರು ವಾಹನ ತೆರಿಗೆ ಬಾಕಿ: ವಿನಾಯಿತಿ ನೀಡಿದ ಸಚಿವ ಸಂಪುಟ ಸಭೆ

ವನ್ಯಪ್ರಾಣಿ ಜನ್ಯ ಉತ್ಪನ್ನ: ಹಿಂದಿರುಗಿಸುವ ಗಡುವು ವಿಸ್ತರಣೆ

ರಾಜ್ಯಾದ್ಯಂತ ತೀವ್ರ ವಿವಾದ, ಚರ್ಚೆಗೆ ಗ್ರಾಸವಾಗಿದ್ದ ವನ್ಯಪ್ರಾಣಿ ಜನ್ಯ ಉತ್ಪನ್ನಗಳ ವಿಷಯದಲ್ಲಿ ಅಂತಿಮ ತೆರೆ ಎಳೆಯಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಈ ಉತ್ಪನ್ನಗಳನ್ನು ಸರ್ಕಾರಕ್ಕೆ ಆದ್ಯಾರ್ಪಣೆ (ಸರೆಂಡರ್) ಅವಧಿಯನ್ನು ಮೂರು ತಿಂಗಳ ಕಾಲ ವಿಸ್ತರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಹುಲಿ ಉಗುರು, ಆನೆದಂತ ಇತ್ಯಾದಿ ವನ್ಯಜೀವಿಗಳ ಉತ್ಪನ್ನಗಳನ್ನು ತಮ್ಮ ಬಳಿ ಇಟ್ಟುಕೊಂಡವರು ಸ್ವಯಂಪ್ರೇರಿತವಾಗಿ ಸರ್ಕಾರಕ್ಕೆ ಒಪ್ಪಿಸಲು ಮತ್ತಷ್ಟು ಕಾಲಾವಕಾಶ ದೊರೆತಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X