ಚಿತ್ರದುರ್ಗ | ಮಾಜಿ ಸಿಎಂ ನಿಜಲಿಂಗಪ್ಪ ಅವರ ಮನೆ ಖರೀದಿ; ಸರ್ಕಾರದಿಂದ 5 ಕೋಟಿ ರೂ. ಮಂಜೂರು

Date:

ಚಿತ್ರದುರ್ಗದಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಿ, ಅಭಿವೃದ್ದಿಪಡಿಸಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ 5 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.

- Advertisement -

ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಪರ ಕಾರ್ಯದರ್ಶಿ ಎನ್‌ ಶಾರದಾಂಬ ಅವರು ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್‌ ಟಿ ಅವರಿಗೆ ಪತ್ರ ಬರೆದಿದ್ದಾರೆ. ಮನೆ ಖರೀಸುವ ಕುರಿತು ನಿರ್ದೇಶನ ನೀಡಿದ್ದಾರೆ.”ನಿಜಲಿಂಗಪ್ಪ ಅವರ ಮನೆಯನ್ನು 4.18 ಕೋಟಿ ರೂ. ಹಣ ಕೊಟ್ಟು ವಿನಯ್ ಅವರಿಂದ ಖರೀದಿಸಬೇಕು. ಮನೆಯನ್ನು ಸಂರಕ್ಷಿಸಿ, ಅಭಿವೃದ್ದಿಪಡಿಸಬೇಕು” ಎಂದು ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಹಿಂದೆ, 2020ರಲ್ಲಿಯೇ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಲು 5 ಕೋಟಿ ರೂ. ಅನುದಾನ ಒದಗಿಸುವುದಾಗಿ ಅಂದಿನ ಸರ್ಕಾರ ಘೋಷಿಸಿತ್ತು. ಆದರೆ, ಅದು ಕಾರ್ಯಗತಕ್ಕೆ ಬಂದಿರಲಿಲ್ಲ. ಇದೀಗ, ಸರ್ಕಾರವು ಅನುದಾನ ಮಂಜೂರು ಮಾಡಿದೆ.

“ಈಗಾಗಲೇ 2 ಕೋಟಿ ರೂ. ಅನುದಾನಕ್ಕೆ ಮಂಜೂರಾತಿ ನೀಡಲಾಗಿದೆ. ಉಳಿದ 3 ಕೋಟಿ ರೂ. ಹಣವನ್ನು ಮಂಜೂರು ಮಾಡಲು ಆದೇಶಿಸಲಾಗಿದೆ. ನಿಜಲಿಂಗಪ್ಪನವರ ಮನೆಯನ್ನು ಸಂರಕ್ಷಿಸಿ, ಅಭಿವೃದ್ಧಿಗೊಳಿಸುವ ಜವಾಬ್ದಾರಿಯನ್ನು ಚಿತ್ರದುರ್ಗ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಿಗೆ ವಹಿಸಲಾಗಿದೆ. ಅನುಮೋದಿತ ಅನುದಾನದಲ್ಲಿ ಅಂದಾಜುಪಟ್ಟಿ ಅನುಸಾರ ಸದರಿ ಮನೆಯನ್ನು 4,18,49,017 ರೂ.ಗಳ ಮೊತ್ತದಲ್ಲಿ ವಿನಯ್ ಅವರಿಂದ ಖರೀದಿಸಬೇಕು” ಎಂದು ಸೂಚನೆ ನೀಡಿದ್ದಾರೆ.

ಎಸ್ ನಿಜಲಿಂಗಪ್ಪ ಅವರು 2000ರ ಆಗಸ್ಟ್ 8ರಂದು ನಿಧನರಾದರು. ಅವರ ಎಲ್ಲ ಆಸ್ತಿಯು ಅವರ ಮಕ್ಕಳ ಹೆಸರಿಗೆ ವರ್ಗಾವಣೆ ಯಾಗಿತ್ತು. ಈಗ, ನಿಜಲಿಂಗಪ್ಪ ಅವರ ಮನೆಯು ಅವರ ಮೊಮ್ಮಗ ಎಸ್.ಕೆ ವಿನಯ್ ಸ್ವಾಧೀನದಲ್ಲಿದೆ. ವಿನಯ್ ಅವರಿಂದ ಮನೆಯನ್ನು ಖರೀದಿ, ಅಭಿವೃದ್ಧಿ ಪಡಿಸಬೇಕೆಂಬ ಒತ್ತಾಯಗಳು ಹಿಂದಿನಿಂದಲೂ ಇದ್ದವು. ಇದೀಗ, ಆ ಮನೆಯ ಖರೀದಿಗೆ ಸರ್ಕಾರ ಮುಂದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...