ಸಿಎಸ್‌ಆರ್‌ ನಿಧಿಯಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ: ಡಿಕೆ ಶಿವಕುಮಾರ್

Date:

Advertisements
  • ‘ಪಂಚಾಯಿತಿ ಮಟ್ಟದಲ್ಲಿ ಮೂರು ಸರ್ಕಾರಿ ಶಾಲೆ ದತ್ತು ಪಡೆಯುವೆ’
  • ‘ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆ ದತ್ತು ಪಡೆಯಲಿ’

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಬುಧವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆ ಬೆಂಗಳೂರಿನ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಿಎಸ್‌ಆರ್‌ (ಕಾರ್ಪೋರೇಟ್‌ ಕಂಪನಿಗಳ ಸಾಮಾಜಿಕ ಜವಾಬ್ದಾರಿ ನಿಧಿ) ಅನುದಾನ ಕುರಿತು ಚರ್ಚಿಸಲಾಯಿತು.

ಸಭೆ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್‌, “ಕಾರ್ಪೋರೇಟ್‌ ಕಂಪನಿಗಳ ಸಾಮಾಜಿಕ ಜವಾಬ್ದಾರಿ ನಿಧಿಯಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

“ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಬೇಕು. ಹೀಗೊಂದು ಹೊಸ ಪರಿಕಲ್ಪನೆ ಜಾರಿಗೆ ಮುಂದಾಗಿದ್ದೇವೆ. ಈ ಹೊಸ ಪರಿಕಲ್ಪನೆಯನ್ನು ಹೇಗೆ ಜಾರಿ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದೇವೆ. ನಾನೂ ಕೂಡ ಮೂರು ಶಾಲೆಗಳ ಮಾಲೀಕ. ಪಂಚಾಯಿತಿ ಮಟ್ಟದಲ್ಲಿ ಮೂರು ಸರ್ಕಾರಿ ಶಾಲೆಗಳನ್ನು ನಾನು ದತ್ತು ಪಡೆಯುವೆ” ಎಂದರು.

Advertisements

“ಕೆಆರ್​​ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರವಾಗಿ ಪ್ರತಿಪಕ್ಷಗಳು ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿ, “ಯಾಕೆ ನೀರು ಬಿಟ್ಟಿದ್ದೀರಿ ಎಂದು ನಮ್ಮನ್ನು ಪ್ರಶ್ನಿಸಲು ನಮ್ಮ ಬಳಿ ಡ್ಯಾಂನ ಬೀಗ ಇದೆಯಾ ಎಂದು ಮರು ಪ್ರಶ್ನೆ ಮಾಡಿದರು. ಕೆಆರ್​ಎಸ್ ಬೀಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಳಿ ಇದೆ, ಕೇಂದ್ರ ಸರ್ಕಾರದ ಬಳಿ‌ ಇದೆ” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

“ಸರ್ಕಾರ ನಡೆಸಬೇಕಾದರೆ ಎಲ್ಲರ ವಿಚಾರ ಗಮನದಲ್ಲಿಟ್ಟುಕೊಳ್ಳಬೇಕು. ಕಾನೂನು ಸಲಹೆಗಾರರು ಏನ್ ಹೇಳುತ್ತಾರೆ ಎಂಬುದನ್ನೂ ಸಹ ಕೇಳಬೇಕಲ್ಲ. ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಕೆ ಮಾಡಿದೆ. ತಮಿಳುನಾಡು ಸರ್ಕಾರ ಕೇಳಿದಷ್ಟು ನೀರು ನಾವು ಬಿಟ್ಟಿಲ್ಲ” ಎಂದು ತಿಳಿಸಿದರು.

“ರಾಜಕಾರಣವನ್ನು ಎಷ್ಟು ಮಾಡಬೇಕೋ ಅಷ್ಟೇ ಮಾಡಬೇಕು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೂ ಕಾನೂನು ಗೊತ್ತಿದೆ. ನೀರು ಯಾರ ನಿಯಂತ್ರಣದಲ್ಲಿ ಇದೆ? ಇದೆಲ್ಲ ಈಗ ಚರ್ಚೆ ಮಾಡಲ್ಲ. 30-40 ವರ್ಷಗಳಲ್ಲಿ ಈಗಲೇ ರಾಜ್ಯದಲ್ಲಿ ಮಳೆ‌ ಕೊರತೆ ಆಗಿರೋದು. ನೀರು ಬಿಡಬೇಡಿ ಅಂತಾ ನಮ್ಮ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ಕೋರ್ಟ್ ಕೇಳಬೇಕಲ್ಲ, ರೈತರೂ ಕೋರ್ಟ್​​ಗೆ ಅರ್ಜಿ ಹಾಕಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X