ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆ, ರಾಜಭವನ ಬಿಜೆಪಿ ಕಚೇರಿ: ಎಂ‌ ಬಿ ಪಾಟೀಲ್‌ ಕಿಡಿ

Date:

Advertisements

ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಕಿಡಿಕಾರಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಟಿ ಜೆ ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ಕೊಟ್ಟಾಗಲೇ ಸರಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದರು. ಆದರೂ ರಾಜ್ಯಪಾಲರು ತರಾತುರಿಯಲ್ಲಿ ಸಿದ್ದರಾಮಯ್ಯನವರಿಗೆ ನೋಟಿಸ್ ಕೊಟ್ಟರು. ಆಗಲೇ ಅವರ ಮೇಲೆ ಅನುಮಾನ ಬಂದಿತ್ತು. ಈಗಿನ ಅವರ ನಡೆ ಅನಪೇಕ್ಷಣೀಯವಾಗಿದೆ. ಇದನ್ನು ರಾಜ್ಯದ ಜನತೆ ಸಹಿಸಿಕೊಳ್ಳುವುದಿಲ್ಲ” ಎಂದರು.

“ಎಚ್ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಮುಂತಾದವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ‌ ಕೋರಿ ಎಂಟ್ಹತ್ತು ತಿಂಗಳಿನಿಂದಲೂ ರಾಜ್ಯಪಾಲರ ಮುಂದೆ ಕೋರಿಕೆಗಳಿವೆ. ಅವುಗಳನ್ನು ಉದಾಸೀನ ಮಾಡಿರುವ ಅವರು,‌ ಯಾವ ಹುರುಳೂ ಇಲ್ಲದ ಮುಡಾ ಹಗರಣದ ಬಗ್ಗೆ ವಿಪರೀತ ಆಸಕ್ತಿ ತಾಳಿದ್ದಾರೆ” ಎಂದು ಅವರು ಆರೋಪಿಸಿದರು.

Advertisements

“ಕೇಂದ್ರದ ಬಿಜೆಪಿ ಸರಕಾರವು ದೆಹಲಿ, ತಮಿಳುನಾಡು ಮುಂತಾದ ರಾಜ್ಯ ಸರ್ಕಾರಗಳ ವಿರುದ್ಧ ನಡೆಸುತ್ತಿರುವಂತಹ ಕೆಟ್ಟ ರಾಜಕಾರಣವನ್ನು ಈಗ ಕರ್ನಾಟಕದಲ್ಲೂ ಶುರು ಮಾಡಿದೆ. ಇದು ಭಾರೀ ಬಹುಮತದಿಂದ ಆರಿಸಿ ಬಂದಿರುವ ರಾಜ್ಯ ಸರ್ಕಾರದ ವಿರುದ್ಧ ತೋರಿಸುತ್ತಿರುವ ಅಸಹನೆಯಾಗಿದೆ” ಎಂದು ಅವರು ಟೀಕಿಸಿದರು.

“ಮುಡಾ ಹಗರಣದಲ್ಲಿ ತಪ್ಪು ಮಾಡಿರುವುದು ಆ ಸಂಸ್ಥೆ. ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನಗಳನ್ನು ಕೊಟ್ಟಿದ್ದು ಬಿಜೆಪಿ ಸರಕಾರ. ಆಗ ಮುಡಾ ಸಭೆಯಲ್ಲಿ ಬಿಜೆಪಿ ನಾಯಕರೇ ಇದ್ದರು. ವಸ್ತುಸ್ಥಿತಿ ಹೀಗಿರುವಾಗ ಸಿದ್ದರಾಮಯ್ಯನವರನ್ನು ಬಲಿಪಶು ಮಾಡಲು ಸಂಚು ನಡೆಯುತ್ತಿರುವುದು ಖಂಡನೀಯ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X