ಕ್ಷುಲ್ಲಕ ವಿಚಾರಗಳ ಬಗ್ಗೆ ಉತ್ತರ ಕೋರಿ ಪತ್ರ ಬರೆಯುತ್ತಿರುವ ರಾಜ್ಯಪಾಲರು: ಸಿಎಂ ಸಿದ್ದರಾಮಯ್ಯ

Date:

Advertisements

ರಾಜ್ಯಪಾಲರು ಸಣ್ಣ ವಿಷಯಗಳ ಬಗ್ಗೆ ಗಮನ ಕೊಡುತ್ತಿದ್ದಾರೆ. ಕನ್ನಡದಲ್ಲಿ ಸಹಿ ಮಾಡುತ್ತಿಲ್ಲವೆಂಬ ಸಣ್ಣ ವಿಷಯದ ಬಗ್ಗೆಯೂ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು.

ವಿಧಾನಸೌಧದ ಆಪತ್ಕಾಲ ಯಾನ ಸೇವೆ ಯೋಜನೆಯಡಿವ 65 ಅತ್ಯಾಧುನಿಕ ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆಗೊಳಿಸಿದ ಬಳಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

“ಕನ್ನಡದಲ್ಲಿರುವ ಪತ್ರಗಳಿಗೆ ಕನ್ನಡದಲ್ಲಿ ಹಾಗೂ ಆಂಗ್ಲದಲ್ಲಿ ಪತ್ರಗಳಿಗೆ ಆಂಗ್ಲದಲ್ಲಿ ಸಹಿ ಮಾಡುವುದು ತಪ್ಪಲ್ಲ. ಇಂತಹ ಕ್ಷುಲ್ಲಕ ವಿಚಾರಗಳ ಬಗ್ಗೆ ರಾಜ್ಯಪಾಲರು ಉತ್ತರ ಕೇಳುವುದು ಸರಿಯಲ್ಲ” ಎಂದರು.

Advertisements

“ರಾಜ್ಯಪಾಲರು ಅರ್ಕಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಬಿಜೆಪಿಯವರು ಹಿಂದೆ ನಾಲ್ಕು ವರ್ಷ ಅವಧಿಯಲ್ಲಿದ್ದಾಗ ವಿಷಯವನ್ನು ಏಕೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿ ಟಿ ರವಿಯವರು ರಾಜ್ಯಪಾಲರಿಗೆ ಈಗ ಪತ್ರ ಬರೆದಿದ್ದು, ಹಿಂದೆ ಅವರು ಸಚಿವರಾಗಿದ್ದಾಗ ಕ್ರಮವೇಕೆ ತೆಗೆದುಕೊಳ್ಳಲಿಲ್ಲ? ರಾಜ್ಯಪಾಲರ ಪತ್ರವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಡಿನೋಟಿಫಿಕೇಷನ್ ಹಗರಣ: ಲೋಕಾಯುಕ್ತ ತನಿಖೆ ತೆವಳುತ್ತಿರುವುದೇಕೆ?

“ಆಪತ್ಕಾಲ ಯಾನ ಸೇವೆ ಯೋಜನೆಯಡಿ ಲೋಕಾರ್ಪಣೆಯಾಗಿರುವ 65 ಅತ್ಯಾಧುನಿಕ ಆಂಬ್ಯುಲೆನ್ಸ್ ಗಳ ಸೇವೆಗಳು ಅಪಘಾತಕ್ಕೊಳಗಾದವರ ಜೀವ ಉಳಿಸುವಲ್ಲಿ ಆಪತ್ಕಾಲ ಯಾನ ಸೇವೆ ಸಹಕಾರಿಯಾಗಿವೆ” ಎಂದು ತಿಳಿಸಿದರು.

“26 ಸುಧಾರಿತ ಹಾಗೂ 39 ಬೇಸಿಕ್ ಲೈಫ್ ಸಪೋರ್ಟ್ ಅಂಬ್ಯುಲೆನ್ಸ್ ಗಳನ್ನು ಇಂದು ಜನರ ಸೇವೆಗೆ ಮುಕ್ತಗೊಳಿಸಲಾಗಿದ್ದು, ಇವುಗಳನ್ನು ರಾಜ್ಯದ ವಿವಿದ ಜಿಲ್ಲೆಗಳಿಗೆ ಕಳಿಸಲಾಗುವುದು” ಎಂದು ಸಿದ್ದರಾಮಯ್ಯ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X